ಕಳವುಗೈದ ಸೊತ್ತು ಮಾರಾಟ: ಆರೋಪಿಗೆ ಶಿಕ್ಷೆ
Team Udayavani, Jul 9, 2020, 6:49 PM IST
ಉಡುಪಿ: ಅಂಬಾಗಿಲಿನಲ್ಲಿ ಐದು ವರ್ಷದ ಹಿಂದೆ ನಡೆದ ಎರಡು ಕಳವು ಪ್ರಕರಣದ ಆರೋಪಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದೆ.
ಪ್ರಕರಣ 1
2015ರ ಫೆಬ್ರವರಿ ಮೊದಲ ವಾರದಲ್ಲಿ ಅಂಬಾಗಿಲಿನ ನಾಗೇಶ್ ರಾವ್ ಅವರ ಮನೆಯ ಒಳ ನುಗ್ಗಿದ್ದ ಆರೋಪಿಗಳು ಕಪಾಟಿನಲ್ಲಿದ್ದ ಒಂದು ಲ.ರೂ. ಮೌಲ್ಯದ ಸುಮಾರು 40 ಗ್ರಾಂ. ತೂಕದ 4 ಚಿನ್ನದ ಬಳೆಗಳನ್ನು ಕಳವುಗೈದಿದ್ದರು.
ಪ್ರಕರಣ 2
2015ರ ಜನವರಿ ತಿಂಗಳ ಕೊನೆಯ ವಾರದಲ್ಲಿ ಈ ಪ್ರಕರಣ ನಡೆದಿತ್ತು. ಬೀಡಿನಗುಡ್ಡೆ ಪಿಲಿಚಾಮುಂಡಿ ರಸ್ತೆಯಲ್ಲಿರುವ ಬಿ. ಪ್ರದೀಪ್ ಕುಮಾರ್ ಯಾನೆ ಚಕ್ರಪಾಣಿ ಅವರ ಮನೆಯ ಬೀಗವನ್ನು ರಾಡಿನಿಂದ ಮುರಿದು ಕಪಾಟಿನಲ್ಲಿದ್ದ 49 ಸಾವಿರ ರೂ.ನಗದು, 34 ಸಾವಿರ ರೂ. ಮೌಲ್ಯದ ಚಿನ್ನ, ಬೆಳ್ಳಿ ಆಭರಣಗಳನ್ನು ಆರೋಪಿಗಳು ಕಳವುಗೈದು ಮಾರಾಟ ಮಾಡಿದ್ದರು.
ಆರೋಪಿಗಳಾದ ಚಿಕ್ಕಮಗಳೂರಿನ ಅನಿಲ್ ಕುಮಾರ್ ಮತ್ತು ಶಿವಮೊಗ್ಗದ ನಾಗೇಶ ಯಾನೆ ಬಸವಣ್ಣಪ್ಪ ಕಳವುಗೈದ ವಸ್ತುಗಳನ್ನು ಮಾರಾಟ ಮಾಡಿ ಹಣವನ್ನು ಖರ್ಚು ಮಾಡಿದ್ದರು. ಈ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ಉಡುಪಿ ನಗರ ವೃತ್ತ ನಿರೀಕ್ಷಕ ಶ್ರೀಕಾಂತ್ ಕೆ. ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.
ಅದರಂತೆ ಪ್ರಕರಣದಲ್ಲಿ ಒಂದನೇ ಆರೋಪಿ ಅನಿಲ್ ಕುಮಾರ್ ತನ್ನ ತಪ್ಪನ್ನು ಮೊದಲೇ ಒಪ್ಪಿಕೊಂಡು ಶಿಕ್ಷೆ ಅನುಭಸಿದ್ದ. ಎರಡನೇ ಆರೋಪಿಯ ವಿಚಾರಣೆ ನಡೆಸಿದ ಒಂದನೇ ಹೆಚ್ಚುವರಿ ಜೆ.ಎಂ.ಎಫ್.ಸಿ. ನ್ಯಾಯಾಲಯದ ನ್ಯಾಯಾಧೀಶ ಮಂಜುನಾಥ ಅವರು ಈ ವರ್ಷದ ಜು. 1ರಂದು ಎರಡನೇ ಆರೋಪಿಗೆ ತಲಾ 2ಸಾವಿರ ರೂ. ದಂಡ ವಿಧಿಸಿ ಶಿಕ್ಷೆ ನೀಡಿದ್ದಾರೆ.
ಅಭಿಯೋಜನೆಯ ಪರ ಉಡುಪಿಯ ಕಿರಿಯ ಕಾನೂನು ಅಧಿಕಾರಿ ಮಮ್ತಾಜ್, ಈಗಿನ ಸಹಾಯಕ ಸರಕಾರಿ ಅಭಿಯೋಜಕಿ ಮೋಹಿನಿ ವಾದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು