ಕರಾವಳಿಯಲ್ಲಿ ಕಡಲ ಮಕ್ಕಳಿಂದ ಸಂಭ್ರಮದ ಸಮುದ್ರ ಪೂಜೆ
Team Udayavani, Aug 3, 2020, 11:18 AM IST
ಕಾಪು: ತಾಲೂಕಿನ ವಿವಿಧೆಡೆ ಸೋಮವಾರ ಮೀನುಗಾರರು ಸಮುದ್ರಪೂಜೆ ಸಹಿತವಾಗಿ ಕ್ಷೀರಾಭಿಷೇಕ ನಡೆಸಿದರು.
ಕಾಪು, ಪೊಲಿಪು, ಕೈಪುಂಜಾಲು, ಮೂಳೂರು ಮೊಗವೀರ ಮಹಾಸಭಾಗಳ ನೇತೃತ್ವದಲ್ಲಿ ವಿವಿಧ ಭಜನಾ ಮಂದಿರಗಳು ಮತ್ತು ಪ್ರಾರ್ಥನಾ ಮಂದಿರಗಳ ಸಹಕಾರದೊಂದಿಗೆ ಸಮುದ್ರ ಪೂಜೆ ನೆರವೇರಿಸಲಾಯಿತು.
ಪ್ರತೀ ವರ್ಷ ನೂಲ ಹುಣ್ಣಿಮೆಯಂದು ಕರಾವಳಿಯಲ್ಲಿ ಸಮುದ್ರ ಪೂಜೆ ನಡೆಯುತ್ತಿದ್ದು ಆ ಮೂಲಕ ಮೀನುಗಾರರು ಹೇರಳ ಮತ್ಸ್ಯ ಸಂಪತ್ತು ದೊರಕಿಸುವಂತೆ ಮತ್ತು ಮೀನುಗಾರಿಕೆಯ ವೇಳೆ ಯಾವುದೇ ರೀತಿಯ ತೊಂದರೆಗಳು ಆಗದಿರಲೆಂಬ ಪ್ರಾರ್ಥನೆಯೊಂದಿಗೆ ಕ್ಷೀರಾಭಿಷೇಕ, ಸೀಯಾಳಾಭಿಷೇಕ ಸಹಿತ ಪೂಜೆ ನೆರವೇರಿಸುತ್ತಾರೆ.
ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಕಾಪು ಮೊಗವೀರ ಮಹಾಸಭೆ, ಪೊಲಿಪು ಮೊಗವೀರ ಮಹಾಸಭೆ, ಕೈಪುಂಜಾಲು ಮೊಗವೀರ ಮಹಾಸಭೆ, ಮೂಳೂರು ಮೊಗವೀರ ಮಹಾಸಭಾದ ಪದಾಧಿಕಾರಿಗಳು, ಸದಸ್ಯರು, ಮೊಗವೀರ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್