ಶಾಲೆ, ಅಂಗನವಾಡಿ, ಪ್ರಾ.ಆ. ಕೇಂದ್ರದ ಕಟ್ಟಡಕ್ಕೆ ಕಾಯಕಲ್ಪ


Team Udayavani, Dec 3, 2022, 8:38 AM IST

news-2

ಉಡುಪಿ: ಈ ವರ್ಷ ಸುರಿದ ಭಾರೀ ಮಳೆಯಿಂದ ಹಾನಿಯಾಗಿರುವ ಶಾಲೆ, ಅಂಗನವಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕಟ್ಟಡದ ತುರ್ತು ದುರಸ್ತಿಗೆ ಉಡುಪಿ ಜಿಲ್ಲಾಡಳಿತ ಮುಂದಾಗಿದೆ.

ಸುಮಾರು 6.74 ಕೋ.ರೂ. ವೆಚ್ಚದಲ್ಲಿ ಜಿಲ್ಲೆಯ 240 ಶಾಲೆ, 84 ಅಂಗನವಾಡಿ ಕಟ್ಟಡ, 13 ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ ದುರಸ್ತಿಗೆ ಕಾರ್ಯಾದೇಶ ನೀಡಲಾಗಿದೆ.

60 ಶಾಲಾ ಕಟ್ಟಡ, 28 ಅಂಗನವಾಡಿ ಕಟ್ಟಡ ದುರಸ್ತಿಗೆ 1.76 ಕೋ.ರೂ. ಮೀಸಲಿಟ್ಟಿದ್ದು ಇದರ ಕಾಮಗಾರಿಯನ್ನು ಪಂಚಾಯತ್‌ ರಾಜ್‌ ಎಂಜಿನಿಯರಿಂಗ್‌ ವಿಭಾಗದಿಂದ ಮಾಡಲಾಗುತ್ತದೆ. 180 ಶಾಲಾ ಕಟ್ಟಡ, 56 ಅಂಗನವಾಡಿ ಕಟ್ಟಡದ ದುರಸ್ತಿಗೆ 4.72 ಕೋ.ರೂ. ವಿನಿ ಯೋಗಿಸಲಾಗುತ್ತಿದ್ದು, ಇದರ ಕಾಮಗಾರಿ ನಿರ್ಮಿತಿ ಕೇಂದ್ರಕ್ಕೆ ವಹಿಸಲಾಗಿದೆ. 13 ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ ದುರಸ್ತಿಯನ್ನು 26 ಲಕ್ಷ ರೂ. ಗಳಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯಾಪಾಲ ಅಭಿಯಂತರರ ಮೂಲಕ ಮಾಡಲಾಗುತ್ತದೆ.

ತಾಲೂಕುವಾರು ಹಾನಿ ವಿವರ ಉಡುಪಿಯಲ್ಲಿ 40 ಶಾಲಾ ಕಟ್ಟಡ, 25 ಅಂಗನವಾಡಿ ಕಟ್ಟಡ, ಬೈಂದೂರಿನಲ್ಲಿ 88 ಶಾಲಾ ಕಟ್ಟಡ 9 ಅಂಗನವಾಡಿ ಕಟ್ಟಡ, ಕಾರ್ಕಳದಲ್ಲಿ 52 ಶಾಲಾ ಕಟ್ಟಡ, 22 ಅಂಗನವಾಡಿ ಕಟ್ಟಡ, ಕಾಪುವಿನಲ್ಲಿ 23 ಶಾಲಾ ಕಟ್ಟಡ, 19 ಅಂಗನವಾಡಿ ಕಟ್ಟಡ ಹಾಗೂ ಕುಂದಾಪುರದಲ್ಲಿ 37 ಶಾಲಾ ಕಟ್ಟಡ ಮತ್ತು 9 ಅಂಗನವಾಡಿ ಕಟ್ಟಡಕ್ಕೆ ಜೂನ್‌ ನಿಂದ ಅಗಸ್ಟ್‌ ಅಂತ್ಯದ ವರೆಗೂ ಸುರಿದ ಭಾರೀ ಮಳೆಯಿಂದ ಹಾನಿಯಾಗಿತ್ತು. ಉಡುಪಿ, ಕುಂದಾಪುರದಲ್ಲಿ ತಲಾ 3, ಕಾಪುವಿನಲ್ಲಿ 5 ಹಾಗೂ ಬೈಂದೂರಿನಲ್ಲಿ 2 ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡಕ್ಕೆ ಹಾನಿಯಾಗಿತ್ತು.

20 ಕೋ.ರೂ. ಅನುದಾನ 2022ನೇ ಸಾಲಿನ ಪ್ರಕೃತಿಕ ವಿಕೋಪಕ್ಕೆ ಸಂಬಂಧಿಸಿದಂತೆ ಜಿಲ್ಲೆಗೆ ಪ್ರವಾಹ ಪರಿಹಾರ ಕಾರ್ಯಗಳಿಗೆ ಈವರೆಗೂ ಸರಕಾರದಿಂದ 20 ಕೋ.ರೂ. ಬಂದಿದೆ. ಹಾಗೆಯೇ ಮೂಲಸೌಕರ್ಯ (ಶಾಲೆ, ಅಂಗನವಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ, ರಸ್ತೆ ಇತ್ಯಾದಿ) ದುರಸ್ತಿಗೆ 9.73 ಕೋ.ರೂ. ಬಂದಿದೆ. ಜೀವ ಹಾಗೂ ಜಾನುವಾರು ಹಾನಿ ಸಹಿತ ವಿವಿಧ 1,087 ಪ್ರಕರಣದಲ್ಲಿ 2.89 ಕೋ.ರೂ.ಗಳನ್ನು ತಹಶೀಲ್ದಾರ್‌ ಮೂಲಕ ಸಂಬಂಧಪಟ್ಟವರ ಖಾತೆಗೆ ಪರಿಹಾರ ನೇರ ವರ್ಗಾವಣೆ ಮಾಡಲಾಗಿದೆ.

ಪೂರ್ಣ ಅನುದಾನ ಬಳಕೆ: ಕಾಲುಸಂಕಗಳ ದುರಸ್ತಿಯನ್ನು ಪಿಡಬ್ಲೂéಡಿ ಇಲಾಖೆಯ ಜತೆಗೆ ಜಿ.ಪಂ. ಮೂಲಕ ನರೇಗಾದಡಿಯೂ ಮಾಡ ಲಾಗುತ್ತಿದೆ. ಮೂಲಸೌಕರ್ಯ ಪುನರ್‌ ಸ್ಥಾಪಿಸಲು ಸರಕಾರದಿಂದ ಬಂದಿರುವ ಅನುದಾನವನ್ನು ಪೂರ್ಣ ಪ್ರಮಾಣದಲ್ಲಿ ಬಳಕೆ ಮಾಡಿಕೊಳ್ಳುತ್ತಿದ್ದೇವೆ. ಶಾಲೆ, ಅಂಗನವಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರದ ದುರಸ್ತಿಗೆ ಕಾರ್ಯಾದೇಶ ನೀಡಲಾಗಿದೆ. -ಕೂರ್ಮಾರಾವ್‌ ಎಂ. ಜಿಲ್ಲಾಧಿಕಾರಿ ಉಡುಪಿ

ಟಾಪ್ ನ್ಯೂಸ್

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

S. Jaishankar: ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ ಭೇಟಿ

S. Jaishankar: ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ ಭೇಟಿ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

3-hegde

LS Polls: ಮಾಡಿದ ಕೆಲಸ ನೋಡಿ ಮತ ನೀಡಿ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.