ಶಾಲಾರಂಭ: ಚಿಣ್ಣರ ಸ್ವಾಗತಕ್ಕೆ ಶಾಲೆಗಳು ಸಿದ್ಧ


Team Udayavani, May 31, 2023, 7:00 AM IST

ಶಾಲಾರಂಭ: ಚಿಣ್ಣರ ಸ್ವಾಗತಕ್ಕೆ ಶಾಲೆಗಳು ಸಿದ್ಧ

ಉಡುಪಿ/ಮಂಗಳೂರು: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಜ್ಯ ಪಠ್ಯಕ್ರಮದ ಎಲ್ಲ ಶಾಲೆಗಳು ಮಕ್ಕಳನ್ನು ಸ್ವಾಗತಿಸಲು ಸಜ್ಜಾಗಿವೆ. ಮೇ 31ರ ಬೆಳಗ್ಗೆ ಶಾಲೆಗೆ ಬರುವ ವಿದ್ಯಾರ್ಥಿಗಳಿಗೆ ಶಾಲಾ ಪ್ರವೇಶ ದ್ವಾರದಲ್ಲೇ ತಳಿರು ತೋರಣ, ರಂಗೋಲಿ ಹಾಗೂ ಪುಷ್ಪಗುತ್ಛದ ಸ್ವಾಗತ ಸಿಗಲಿದೆ.

ಮೇ 29ರಂದೇ ಶಾಲೆಗೆ ಮುಖ್ಯಶಿಕ್ಷಕರು ಸಹಿತವಾಗಿ ಶಿಕ್ಷಕರು, ಸಿಬಂದಿ ವರ್ಗ ಹೋಗಿ ಸ್ವತ್ಛತೆ ಸಹಿತ ಎಲ್ಲ ರೀತಿಯ ವ್ಯವಸ್ಥೆ ಸರಿಯಿದೆಯೇ ಎಂಬುದನ್ನು ಪರಿಶೀಲಿಸಿದ್ದಾರೆ. ಸರಕಾರಿ ಶಾಲೆಗಳಲ್ಲಿ ಮುಖ್ಯಶಿಕ್ಷಕರು ಈಗಾಗಲೇ ಶಿಕ್ಷಕರು, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಸದಸ್ಯರು ಹಾಗೂ ಹಳೇ ವಿದ್ಯಾರ್ಥಿಗಳೊಂದಿಗೆ ಚರ್ಚಿಸಿ, ಶಾಲೆಯಲ್ಲಿ ಆಗಬೇಕಿರುವ ಎಲ್ಲ ಚಟುವಟಿಕೆಗಳ ಬಗ್ಗೆಯೂ ಮಾಹಿತಿ ನೀಡಿದ್ದಾರೆ.

ಶಾಲೆಗೆ ಮಕ್ಕಳನ್ನು ಆಹ್ವಾನಿಸುವ ಸಂದರ್ಭ ಊರಿಯ ಹಿರಿಯರು, ಜನ ಪ್ರತಿನಿಧಿಗಳು ಹಾಗೂ ಪಾಲಕ, ಪೋಷಕರು ಇರುವಂತೆ ಕೆಲವು ಶಾಲೆಗಳು ಸೂಚನೆಯನ್ನು ರವಾನಿಸಿವೆ. ಬಹುತೇಕ ಶಾಲೆಗಳಲ್ಲಿ ತಳಿರು ತೋರಣ, ರಂಗೋಲಿ ಹಾಕಿ, ಪ್ರತೀ ವಿದ್ಯಾರ್ಥಿಗಳಿಗೂ ಹೂ ನೀಡುವ ಮೂಲಕ ಸ್ವಾಗತಕ್ಕೆ ಸಿದ್ಧತೆ ಮಾಡಲಾಗಿದೆ.

ಪಾಯಸದೂಟ
ಸರಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಬಿಸಿ ಯೂಟದ ಜತೆಗೆ ಪಾಯಸ ಅಥವಾ ಒಂದು ಬಗೆಯ ಸಿಹಿ ತಿನಿಸುವ ನೀಡಲಾಗುತ್ತದೆ. ಹಾಗೆಯೇ ಸರಕಾರದಿಂದ ನೀಡುವ ಉಚಿತ ಪಠ್ಯಪುಸ್ತಕ ಹಾಗೂ ಸಮವಸ್ತ್ರವನ್ನು ಮೊದಲ ದಿನವೇ ವಿತರಿಸಲಾಗುತ್ತದೆ. ರಾಜ್ಯ ಪಠ್ಯಕ್ರಮದ ಖಾಸಗಿ ಹಾಗೂ ಅನುದಾನಿತ ಶಾಲಾಡಳಿತ ಮಂಡಳಿಗಳು ಕೂಡ ತರಗತಿ ಆರಂಭಿಸಲು ಎಲ್ಲ ತಯಾರಿ ಮಾಡಿಕೊಂಡಿವೆ.

ಸರಕಾರಿ ಶಾಲೆಯಲ್ಲಿ ದಾಖಲಾತಿ ಪ್ರಕ್ರಿಯೆ ಚುರುಕುಗೊಂಡಿದ್ದು, ಮಕ್ಕಳ ಮನೆ ಮನೆಗೂ ಶಾಲೆಯ ಶಿಕ್ಷಕರು, ಎಸ್‌ಡಿಎಂಸಿ ಸದಸ್ಯರು ಭೇಟಿ ನೀಡಿ ದಾಖಲಾತಿಗೆ ಉತ್ತೇಜನ ನೀಡುತ್ತಿದ್ದಾರೆ. ಪೂರ್ವ ಪ್ರಾಥಮಿಕ ತರಗತಿಗಳು ಇರುವ ಶಾಲೆಗಳಲ್ಲಿ ಒಂದನೇ ತರಗತಿಗೆ ಮಕ್ಕಳ ದಾಖಲಾತಿ ಚೆನ್ನಾಗಿದೆ ಎಂದೂ ಹೇಳಲಾಗುತ್ತದೆ.

ಎತ್ತಿನಗಾಡಿಯಲ್ಲಿ ಶಾಲೆಗೆ!
ಮಡಿಕೇರಿ: ಕುಶಾಲನಗರ ತಾಲೂಕಿನ ಕೂಡುಮಂಗಳೂರು ಸರಕಾರಿ ಪ್ರೌಢಶಾಲೆಗೆ ಮಕ್ಕಳು ಎತ್ತಿನ ಗಾಡಿಯಲ್ಲಿ ಆಗಮಿಸುವ ಮೂಲಕ ಗಮನ ಸೆಳೆದರು. ಶಿಕ್ಷಕರು ಮಕ್ಕಳನ್ನು ಭವ್ಯವಾಗಿ ಸ್ವಾಗತಿಸಿ, ಸಿಹಿ ವಿತರಿಸಿದರು.

ಶಾಲೆಗೆ ತಳಿರು ತೋರಣ
ಸಿದ್ದಾಪುರ: ಸಿದ್ದಾಪುರ ಸರಕಾರಿ ಪ್ರೌಢಶಾಲೆಯ ಪ್ರಾರಂಭೋತ್ಸವ ಮೇ 31ರಂದು ಜರಗಲಿದ್ದು, ಪೂರ್ವ ತಯಾರಿ ಭರ್ಜರಿಯಾಗಿ ನಡೆಯುತ್ತಿದೆ. ಶಿಕ್ಷಕರು ತಳಿರು ತೋರಣಗಳಿಂದ ಶಾಲೆಯನ್ನು ಸಿಂಗರಿಸುತ್ತಿದ್ದಾರೆ.

ಪ್ರವೇಶಾತಿಗೆ ದಾಖಲೆಗಳು
ಸರಕಾರಿ ಶಾಲೆಗೆ ದಾಖಲೆ ಪಡೆಯಲು ಎಲ್ಲರಿಗೂ ಮುಕ್ತ ಅವಕಾಶವಿದೆ. ಪಾಲಕ, ಪೋಷಕರ (ತಂದೆ ಮತ್ತು ತಾಯಿಯ ಅಥವಾ ತಂದೆ ತಾಯಿ ಇಲ್ಲದ ಸಂರ್ಭದಲ್ಲಿ ರಕ್ಷಕರು) ಆಧಾರ್‌ ಕಾರ್ಡ್‌ ಜತೆಗೆ ಮಗುವಿನ ಆಧಾರ್‌ ಕಾರ್ಡ್‌, ರೇಷನ್‌ ಕಾರ್ಡ್‌, ಹೆಣ್ಣು ಮಗುವಾಗಿದ್ದರೆ ಭಾಗ್ಯ ಲಕ್ಷ್ಮೀ ಬಾಂಡ್‌ (ಇದ್ದಲ್ಲಿ ಮಾತ್ರ), ಮಗುವಿನ ಜನನ ಪ್ರಮಾಣ ಪತ್ರ, ಮಗುವಿನ ಭಾವಚಿತ್ರ ಇವಿಷ್ಟು ದಾಖಲೆಗಳನ್ನು ದಾಖಲಾತಿ ಸಂದರ್ಭದಲ್ಲಿ ನೀಡಬೇಕು. ಎಲ್ಲ ದಾಖಲೆಗಳ ಜೆರಾಕ್ಸ್‌ ಪ್ರತಿಯನ್ನು ಮಾತ್ರ ಶಾಲೆಯಲ್ಲಿ ತೆಗೆದುಕೊಳ್ಳಲಾಗುತ್ತದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ಟಾಪ್ ನ್ಯೂಸ್

1-fs-sad

Ujjain ; ಅತ್ಯಾಚಾರಕ್ಕೊಳಗಾಗಿ ಬೀದಿಯಲ್ಲಿ ಅರೆನಗ್ನ ಸ್ಥಿತಿಯಲ್ಲಿ ನಡೆದ 12ರ ಬಾಲೆ !!

BYJU’s Lay Off:  ಆತಂಕದಲ್ಲಿ ಬೈಜೂಸ್‌ ಉದ್ಯೋಗಿಗಳು…3,500 ನೌಕರರ ಕಡಿತಕ್ಕೆ ಸಿದ್ಧತೆ

BYJU’s Lay Off:  ಆತಂಕದಲ್ಲಿ ಬೈಜೂಸ್‌ ಉದ್ಯೋಗಿಗಳು…3,500 ನೌಕರರ ಕಡಿತಕ್ಕೆ ಸಿದ್ಧತೆ

1-saadsad

India-Canada ಸಂಬಂಧ ಹದಗೆಡಿಸಲು ನಿಜ್ಜರ್‌ ಪ್ರಕರಣದಲ್ಲಿ ಪಾಕಿಸ್ಥಾನದ ISI ಸಂಚು

Thirthahalli ಮೀನು ಹಿಡಿಯಲು ಹೋದ ಯುವಕ ತುಂಗಾ ನದಿಗೆ ಬಿದ್ದು ಸಾವು !

Thirthahalli ಮೀನು ಹಿಡಿಯಲು ಹೋದ ಯುವಕ ತುಂಗಾ ನದಿಗೆ ಬಿದ್ದು ಸಾವು !

1-sdsad

Manipur ; ಇಡೀ ರಾಜ್ಯವನ್ನು ‘ಪ್ರಕ್ಷುಬ್ಧ ಪ್ರದೇಶ’ ಎಂದು ಘೋಷಿಸಿದ ಸರಕಾರ

Tourist Place: ಪ್ರವಾಸೋದ್ಯಮ ಇಲಾಖೆಯ ಪ್ರೋತ್ಸಾಹವಿಲ್ಲದೆ ಸ್ವರಗುತ್ತಿರುವ ಪ್ರವಾಸಿ ತಾಣಗಳು

Tourist Place: ಪ್ರವಾಸೋದ್ಯಮ ಇಲಾಖೆಯ ಪ್ರೋತ್ಸಾಹವಿಲ್ಲದೆ ಸ್ವರಗುತ್ತಿರುವ ಪ್ರವಾಸಿ ತಾಣಗಳು

ಜಲಪ್ರಳಯದ ಮನಕಲಕುವ ಕಥಾಹಂದರದ “2018” ನಮ್ಮ ಬದುಕಿನ ಚಿತ್ರ!

ಜಲಪ್ರಳಯದ ಮನಕಲಕುವ ಕಥಾಹಂದರದ “2018” ನಮ್ಮ ಬದುಕಿನ ಚಿತ್ರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: 3-4 ದಿನದೊಳಗೆ ಜಿಲ್ಲೆಯ ಮರಳು ಸಮಸ್ಯೆ ಬಗೆಹರಿಸಿ, ಇಲ್ಲದಿದ್ದರೆ… : ಕೋಟ ಎಚ್ಚರಿಕೆ

Udupi: 3-4 ದಿನದೊಳಗೆ ಜಿಲ್ಲೆಯ ಮರಳು ಸಮಸ್ಯೆ ಬಗೆಹರಿಸಿ, ಇಲ್ಲದಿದ್ದರೆ… : ಕೋಟ ಎಚ್ಚರಿಕೆ

Udupi ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Udupi ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Udupi ಸ್ಕೂಟರ್‌ ಢಿಕ್ಕಿ: ಪಾದಚಾರಿಗೆ  ಗಾಯ

Udupi ಸ್ಕೂಟರ್‌ ಢಿಕ್ಕಿ: ಪಾದಚಾರಿಗೆ ಗಾಯ

Manipal ಅ. 10: ಮಾಹೆಯಲ್ಲಿ ನ್ಯಾಶನಲ್‌ ಸಿಜಿಎಂಪಿ ಡೇ

Manipal ಅ. 10: ಮಾಹೆಯಲ್ಲಿ ನ್ಯಾಶನಲ್‌ ಸಿಜಿಎಂಪಿ ಡೇ

Fraud Case ಕ್ರೆಡಿಟ್‌ ಕಾರ್ಡ್‌ ಆ್ಯಕ್ಟಿವೇಶನ್‌ ನೆಪದಲ್ಲಿ ಲಕ್ಷಾಂತರ ರೂ. ವಂಚನೆ

Fraud Case ಕ್ರೆಡಿಟ್‌ ಕಾರ್ಡ್‌ ಆ್ಯಕ್ಟಿವೇಶನ್‌ ನೆಪದಲ್ಲಿ ಲಕ್ಷಾಂತರ ರೂ. ವಂಚನೆ

MUST WATCH

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

ಹೊಸ ಸೇರ್ಪಡೆ

1-fs-sad

Ujjain ; ಅತ್ಯಾಚಾರಕ್ಕೊಳಗಾಗಿ ಬೀದಿಯಲ್ಲಿ ಅರೆನಗ್ನ ಸ್ಥಿತಿಯಲ್ಲಿ ನಡೆದ 12ರ ಬಾಲೆ !!

BYJU’s Lay Off:  ಆತಂಕದಲ್ಲಿ ಬೈಜೂಸ್‌ ಉದ್ಯೋಗಿಗಳು…3,500 ನೌಕರರ ಕಡಿತಕ್ಕೆ ಸಿದ್ಧತೆ

BYJU’s Lay Off:  ಆತಂಕದಲ್ಲಿ ಬೈಜೂಸ್‌ ಉದ್ಯೋಗಿಗಳು…3,500 ನೌಕರರ ಕಡಿತಕ್ಕೆ ಸಿದ್ಧತೆ

1-saadsad

India-Canada ಸಂಬಂಧ ಹದಗೆಡಿಸಲು ನಿಜ್ಜರ್‌ ಪ್ರಕರಣದಲ್ಲಿ ಪಾಕಿಸ್ಥಾನದ ISI ಸಂಚು

Thirthahalli ಮೀನು ಹಿಡಿಯಲು ಹೋದ ಯುವಕ ತುಂಗಾ ನದಿಗೆ ಬಿದ್ದು ಸಾವು !

Thirthahalli ಮೀನು ಹಿಡಿಯಲು ಹೋದ ಯುವಕ ತುಂಗಾ ನದಿಗೆ ಬಿದ್ದು ಸಾವು !

1-sdsad

Manipur ; ಇಡೀ ರಾಜ್ಯವನ್ನು ‘ಪ್ರಕ್ಷುಬ್ಧ ಪ್ರದೇಶ’ ಎಂದು ಘೋಷಿಸಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.