ಹಿರಿಯ ಪತ್ರಕರ್ತ ಉದಯಕುಮಾರ್ ಪೈ ಅಸೌಖ್ಯದಿಂದ ನಿಧನ
Team Udayavani, Aug 16, 2020, 12:07 AM IST
ಉಡುಪಿ: “ಉದಯವಾಣಿ’ಯ ನಿವೃತ್ತ ಉಪ ಸಂಪಾದಕ, ಹಿರಿಯ ಪತ್ರಕರ್ತ, ಮಣಿಪಾಲ ಸಮೀಪದ ತ್ರಿಶಂಕುನಗರದ ನಿವಾಸಿ ಉದಯಕುಮಾರ್ ವಾಮನ ಪೈ (70) ಅವರು ಅಸೌಖ್ಯದಿಂದ ಆ. 14ರಂದು ಮಣಿಪಾಲ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ಪತ್ನಿ, ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಉದಯಕುಮಾರ್ ಪೈ ಅವರು ಉ.ಕ. ಜಿಲ್ಲೆ ಕುಮಟ ತಾಲೂಕಿನ ಕೋಡ್ಕಣಿಯವರು. ಹೊಟೇಲ್ ನೌಕರಿಯನ್ನು ಅರಸಿ ಚೆನ್ನೈಗೆ ಹೋದ ಅವರು ಹೊಟೇಲ್ ನೌಕರರನ್ನು ಒಂದುಗೂಡಿಸಿ ಕಥಾಪುಸ್ತಕಗಳನ್ನು ತರಿಸಿ ಓದಿಸುತ್ತಿದ್ದರು, ಸಾಹಿತ್ಯಿಕ ಚಟುವಟಿಕೆಗಳನ್ನು ನಡೆಸುತ್ತಿದ್ದರು. ಅಲ್ಲಿ ಕನ್ನಡ ಸಂಘದಲ್ಲಿಯೂ ಸಕ್ರಿಯರಾಗಿದ್ದರು. ಆರಂಭಿಕ ಹಂತದಲ್ಲಿ ಚೈನ್ನೈಯಲ್ಲಿ ಯುಎಸ್ಎಸ್ಆರ್ನ ಸೋವಿಯತ್ ಲ್ಯಾಂಡ್ ಪತ್ರಿಕೆಯಲ್ಲಿ ಕಂಪೋಸಿಟರ್ ಆಗಿ ಕೆಲಸ ಮಾಡಿದ್ದರು.
ಚಂದಮಾಮ ಪತ್ರಿಕೆಯಲ್ಲಿ ಕೆಲಸ ಮಾಡಿದ ಪೈಯವರು, ಬಳಿಕ ಚಿತ್ರದೀಪ, ವಿಜಯಚಿತ್ರದಲ್ಲಿ ಕಾರ್ಯನಿರ್ವಹಿಸಿದರು. ಮಣಿಪಾಲದ ರೂಪತಾರಾ ಪತ್ರಿಕೆಯಲ್ಲಿ ಕೆಲಸ ಮಾಡಿದ ಪೈಯವರು, ಬಳಿಕ ಕೊನೆಯ ಸುಮಾರು 15 ವರ್ಷಗಳ ಕಾಲ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಸೇವೆ ಸಲ್ಲಿಸಿದರು. ಉದಯವಾಣಿಯ ಸಿನೆಮಾ ವಿಭಾಗವನ್ನು ನಿರ್ವಹಿಸುತ್ತಿದ್ದ ಅವರು ಸುದೀರ್ಘ ಅವಧಿ ಸಿನೆಮಾ ಚಿತ್ರರಂಗದಲ್ಲಿ ಪತ್ರಕರ್ತರಾಗಿ ಸೇವೆ ಸಲ್ಲಿಸಿದರು. ಕೊನೆಯ ಅವಧಿಯಲ್ಲಿ ಸುದ್ದಿ ವಿಭಾಗದಲ್ಲಿ ಕಾರ್ಯ ನಿರ್ವಹಿಸಿದ್ದರು.
ಗೋಮತಿ ಮತ್ತು ಶ್ರೀರಾಮ್ ಎಂಬ ಅಂಕಿತದಲ್ಲಿ ಅಂಕಣ, ಲೇಖನಗಳನ್ನು ಬರೆಯುತ್ತಿದ್ದರು. ಕರ್ನಾಟಕ ಚಲನಚಿತ್ರ ಪತ್ರಕರ್ತರ ಸಂಘ ಅತ್ಯುತ್ತಮ ಲೇಖನಕ್ಕೆ ಕೊಡಮಾಡುವ ಪ್ರಥಮ ಪ್ರಶಸ್ತಿಗೆ ಪೈಯವರು ಭಾಜನರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ