ಶಂಕರಪುರ: ರಸ್ತೆ ಗುಂಡಿಗೆ ಸಿಮೆಂಟ್, ಜಲ್ಲಿ ತೇಪೆ !
Team Udayavani, Sep 15, 2022, 12:35 PM IST
ಕಟಪಾಡಿ: ಶಿರ್ವ- ಕಟಪಾಡಿ ಸಂಪರ್ಕದ ಪ್ರಮುಖ ರಾಜ್ಯ ಹೆದ್ದಾರಿಯ ಶಂಕರಪುರ ಪರಿಸರದಲ್ಲಿ ಎಲ್ಲೆಂದರಲ್ಲಿದ್ದ ಮರಣಾಂತಿಕ ಗುಂಡಿಗಳು ಅಪಾಯವನ್ನು ಆಹ್ವಾನಿಸುತ್ತಿತ್ತು.
ಇದೀಗ ರಸ್ತೆಯ ಗುಂಡಿಗಳಿಗೆ ಸಿಮೆಂಟ್, ಜಲ್ಲಿ ಮಿಶ್ರಣದ ತೇಪೆಯನ್ನು ಬುಧವಾರ ಮಧ್ಯಾಹ್ನದ ಬಳಿಕ ಹಾಕಲಾಗಿದೆ. ಹೀಗಾಗಿ ಮರಣಾಂತಿಕ ಗುಂಡಿಗಳಿಗೆ ತಾತ್ಕಾಲಿಕ ಮುಕ್ತಿ ಲಭಿಸಿದಂತಾಗಿದೆ.
ಪ್ರಮುಖವಾಗಿ ಕುಂಜಾರುಗಿರಿ ಸರ್ಕಲ್ನಿಂದ ಪೆಟ್ರೋಲ್ ಬಂಕ್, ಬಳಿಕ ಓಂ ಸಾಯಿ ಬಸ್ ನಿಲ್ದಾಣದ ಪ್ರದೇಶದಲ್ಲಿ ಕಂಡು ಬರುವ ಗುಂಡಿಗಳಿಂದಾಗಿ ವಾಹನ ಸವಾರರು ರಸ್ತೆಯನ್ನು ಹುಡುಕಿಕೊಂಡು ಸಾಗುವ ಪರಿಸ್ಥಿತಿ ನಿರ್ಮಾಣಗೊಂಡಿತ್ತು. ಸದಾ ವಾಹನ, ಜನದಟ್ಟಣೆಯಿಂದ ಕೂಡಿರುವ ಈ ರಸ್ತೆಯ ನಡುವೆಯೇ ಬೃಹದಾಕಾರದ ಗುಂಡಿ ಇದ್ದು, ಇದನ್ನು ತಪ್ಪಿಸುವ ಭರದಲ್ಲಿ ಹೆಚ್ಚಿನ ಮಂದಿ ಅಪಘಾತಕ್ಕೀಡಾಗುತ್ತಿದ್ದರು. ಈ ಬಗ್ಗೆ ಸಾರ್ವಜನಿಕರ ಆಕ್ರೋಶ ವನ್ನು ಉದಯವಾಣಿ ಸುದಿನವು ಸೆ. 14ರಂದು ಪ್ರಕಟಿಸಿತ್ತು.
ಈ ಮೊದಲೇ ಈ ಗುಂಡಿಯ ಬಗ್ಗೆ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿಯನ್ನು ನೀಡಿದ್ದ ಕುರ್ಕಾಲು ಗ್ರಾ.ಪಂ. ಅಧ್ಯಕ್ಷ ಮಹೇಶ್ ಶೆಟ್ಟಿ ಬಿಳಿಯಾರು, ಉಪಾಧ್ಯಕ್ಷೆ ಸೀಮಾ ಮಾರ್ಗರೇಟ್ ಡಿ’ಸೋಜಾ ಅವರು ಸ್ವತಃ ಕಾರ್ಯೋನ್ಮುಖರಾಗಿ ಲೋಕೋಪಯೋಗಿ ಇಲಾಖೆಯ ಎಂಜಿನಿಯರ್ ಅವರ ಬೆನ್ನು ಹತ್ತಿದ್ದು, ಬುಧವಾರದ ಮಧ್ಯಾಹ್ನದ ಬಳಿಕ ಸ್ಥಳದಲ್ಲಿ ಉಪಸ್ಥಿತರಿದ್ದು, ಗುಂಡಿ ಮುಚ್ಚಿಸುವ ಕಾಮಗಾರಿಯನ್ನು ಪೂರೈಸುವಲ್ಲಿ ಯಶಸ್ಸನ್ನು ಕಂಡಿದ್ದಾರೆ.
ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಶ್ಲಾಘನೆ ವ್ಯಕ್ತವಾಗಿದ್ದು, ಕಟಪಾಡಿ- ಕುರ್ಕಾಲು- ಶಂಕರಪುರ-ಶಿರ್ವ ಸಂಪರ್ಕದ ರಾಜ್ಯ ಹೆದ್ದಾರಿಯಲ್ಲಿನ ಮತ್ತಷ್ಟು ಮರಣಾಂತಿಕ ಗುಂಡಿಗಳಿಗೆ ಶಾಶ್ವತ ಪರಿಹಾರ ಕಾಮಗಾರಿ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
MUST WATCH
ಹೊಸ ಸೇರ್ಪಡೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ