ಮಕ್ಕಳಿದ್ದೂ ಅನಾಥೆಯಾದ ತಾಯಿ ; ಸಾಮಾಜಿಕ ಕಾರ್ಯಕರ್ತರಿಂದ ಅಂತ್ಯಕ್ರಿಯೆ
Team Udayavani, Jul 10, 2020, 7:54 AM IST
ಸಾಂದರ್ಭಿಕ ಚಿತ್ರ
ಉಡುಪಿ: ದೊಡ್ಡ ಹುದ್ದೆಗಳಲ್ಲಿರುವ ಇಬ್ಬರು ಮಕ್ಕಳಿದ್ದರೂ ಅವರಿಂದ ಪರಿತ್ಯಕ್ತರಾಗಿರುವ ಹಿರಿಯ ಜೀವಗಳ ಕಣ್ಣೀರ ಕಥೆ ಇದು. ತಾಯಿ ಮೃತಪಟ್ಟರೂ ಮಕ್ಕಳು ಬಾರದೆ ಇದ್ದುದರಿಂದ ಸಾಮಾಜಿಕ ಕಾರ್ಯಕರ್ತರ ನೆರವು ಪಡೆದು ಅಂತ್ಯಸಂಸ್ಕಾರ ನಡೆಸುವ ಅನಿವಾರ್ಯ ಈ ಅಸಹಾಯಕ ವೃದ್ಧನದಾಯಿತು.
ಎಚ್. ವೀಣಾ ಶಾನುಭಾಗ್ (69) ಮೃತ ಮಹಿಳೆ. ಅನೇಕ ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ಪತಿ ಎಚ್. ಶ್ರೀನಿವಾಸ್ ಶಾನುಭಾಗ್ (79) ನೋಡಿಕೊಳ್ಳುತ್ತಿದ್ದರು. ಈ ದಂಪತಿಗೆ ನೆರವು ಕೋರಿದ ಸಂದೇಶ ಜಾಲತಾಣಗಳಲ್ಲಿ ಹರಿದಾಡುತ್ತಿರುವುದನ್ನು ಗಮನಿಸಿದ ಸಾಮಾಜಿಕ ಕಾರ್ಯಕರ್ತ ಕೆ. ರಾಘವೇಂದ್ರ ಕಿಣಿ ಅವರು ದಂಪತಿಯನ್ನು ಸಂಪರ್ಕಿಸಿ ನೆರವಾದರು. ದಂಪತಿ ಚಿಟ್ಪಾಡಿ ಭಾಗ್ಯಮಂದಿರದ ಬಾಡಿಗೆ ಮನೆಯಲ್ಲಿ ಜೀವನ ಸಾಗಿಸುತ್ತಿದ್ದರು. ಮಗಳು ಬಿಎಡ್ ಮುಗಿಸಿ ಸಾಗರದಲ್ಲಿದ್ದಾರೆ. ಮಗ ಬಿಇ, ಎಂಟೆಕ್ ಮುಗಿಸಿ ಬೆಂಗಳೂರಿನಲ್ಲಿ ಉದ್ಯೋಗದಲ್ಲಿ ಇದ್ದಾರೆ. ಆದರೆ ಆನೇಕ ವರ್ಷಗಳಿಂದ ಹೆತ್ತವರ ಸಂಪರ್ಕದಲ್ಲಿಲ್ಲ. ಗುರುವಾರ ವೀಣಾ ಮೃತಪಟ್ಟಿದ್ದು, ಅಂತ್ಯಕ್ರಿಯೆ ನಡೆಸಲು ಪರದಾಡುತ್ತಿದ್ದ ಶ್ರೀನಿವಾಸ್ ಅವರಿಗೆ ಸಾಮಾಜಿಕ ಕಾರ್ಯಕರ್ತರಾದ ರಾಘವೇಂದ್ರ ಕಿಣಿ, ಮಂಜುನಾಥ ನಿಟ್ಟೂರು, ಕಿಶೋರ್ ಕುಮಾರ್ ಕರಂಬಳ್ಳಿ, ಮಂಜುನಾಥ ಹೆಬ್ಟಾರ್ ಅವರು ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು
Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ
Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ
Veerappa Moily; ದೇಶಕ್ಕೆ ಕ್ರಿಕೆಟ್ ಕಾಮೆಂಟ್ರಿಯನ್ ಬೇಕಿಲ್ಲ
Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
MUST WATCH
ಹೊಸ ಸೇರ್ಪಡೆ
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ