ಉಡುಪಿ : ನಿರಾಶ್ರಿತರಿಗೆ ತಾತ್ಕಾಲಿಕ ಪುನರ್ ವಸತಿ ಕೇಂದ್ರದಲ್ಲಿ ಆಶ್ರಯ
Team Udayavani, May 11, 2021, 2:00 PM IST
ಉಡುಪಿ : ನಗರದ ಬಸ್ಸು ನಿಲ್ದಾಣ, ಸಾರ್ವಜನಿಕ ಸ್ಥಳಗಳಲ್ಲಿ ನೆಲೆಕಂಡಿರುವ ನಿರಾಶ್ರಿತರಿಗೆ ಲಾಕ್ ಡೌನ್ ತುರ್ತು ಸಂದರ್ಭದಲ್ಲಿ ತಾತ್ಕಾಲಿಕ ಪುರ್ನವಸತಿ ಕೇಂದ್ರ ಬೋರ್ಡ್ ಹೈಸ್ಕೂಲಿನಲ್ಲಿ ಮಂಗಳವಾರ ಆಶ್ರಯ ಒದಗಿಸಲಾಗಿದೆ.
ನಿರಾಶ್ರಿತರು ಲಾಕ್ ಡೌನ್ ತುರ್ತು ಸಂದರ್ಭದಲ್ಲಿ ನಗರದಲ್ಲಿ ಸಂಚರಿಸುವುದು, ಗುಂಪು ಸೇರುವುದು, ಕೋವಿಡ್ ನಿಯಮಾವಳಿಗಳು ಪಾಲಿಸದಿರುವುದು ಕಂಡುಬಂದಿತ್ತು. ಈ ಬಗ್ಗೆ ಉಡುಪಿ ಜಿಲ್ಲಾ ನಾಗರಿಕ ಸಮಿತಿಯು, ನಾಗರಿಕ ಸಮಾಜದ ಸುರಕ್ಷತೆಯ ಉದ್ದೇಶದಿಂದ ನಿರಾಶ್ರಿತರಿಗೆ ತಾತ್ಕಾಲಿಕ ಪುರ್ನವಸತಿ ಕೇಂದ್ರ ಸ್ಥಾಪಿಸಿ ಆಶ್ರಯ ಒದಗಿಸುವಂತೆ ಜಿಲ್ಲಾಧಿಕಾರಿಗಳಿಗೆ ವ್ಯಾಟ್ಸಪ್ ಮೂಲಕ ಮನವಿ ಮಾಡಿತ್ತು. ಇದಕ್ಕೆ ಜಿಲ್ಲಾಡಳಿತವು ತಕ್ಷಣ ಸ್ಪಂದಿಸಿದೆ.
ನಗರ ಪೊಲೀಸ್ ಠಾಣೆಯ ಠಾಣಾಧಿಕಾರಿ ಪ್ರಮೋದ ಕುಮಾರ್ ಅವರ ಮುಂದಾಳತ್ವದಲ್ಲಿ ಕಾರ್ಯಚರಣೆ ನಡೆಯಿತು. ಸಮಾಜಸೇವಕ ವಿಶು ಶೆಟ್ಟಿ ಅಂಬಲಪಾಡಿ, ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ಕೆ.ಬಾಲಗಂಗಾಧರ ರಾವ್, ಅವರು ಇಲಾಖೆಗೆ ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ