ಶಿರ್ವ: ಚುರುಕುಗೊಂಡ ಭತ್ತದ ನಾಟಿ ಕಾರ್ಯ
Team Udayavani, Jun 12, 2020, 5:30 AM IST
ಶಿರ್ವ: ಮುಂಗಾರು ಮಳೆಯ ಆರಂಭದೊಂದಿಗೆ ಶಿರ್ವ ನ್ಯಾರ್ಮ ಪರಿಸರದಲ್ಲಿ ಭತ್ತದ ಗದ್ದೆಯ ಉಳುಮೆ ಕಾರ್ಯ ಚುರುಕುಗೊಂಡಿದ್ದು ಗುರುವಾರದಿಂದ ನಾಟಿ ಕಾರ್ಯ ಆರಂಭ ಗೊಂಡಿದೆ.
ಶಿರ್ವ ನ್ಯಾರ್ಮ ಮಹಾಲಸಾ ನಾರಾಯಣೀ ದೇವಸ್ಥಾನದ ಗದ್ದೆಯಲ್ಲಿ ಸಮಾಜ ಸೇವಕ ಅನಂತ್ರಾಯ ಶೆಣೈ ಅವರ ನೇತೃತ್ವದಲ್ಲಿ ಸುಮಾರು 4 ಎಕರೆ ಪ್ರದೇಶದಲ್ಲಿ ನಾಟಿ ಕಾರ್ಯ ಆರಂಭಗೊಂಡಿದ್ದು ಸುಮಾರು 11 ಮಹಿಳೆಯರಿಂದ ನಾಟಿ ಕಾರ್ಯ ನಡೆಯುತ್ತಿದೆ.
ಜಿಲ್ಲೆಯ ಹೆಚ್ಚಿನೆಡೆ ಕೃಷಿ ಭೂಮಿ ಹಡಿಲು ಬಿದ್ದಿದ್ದರೂ ಸಾಂಪ್ರದಾಯಿಕವಾಗಿ ಸಾವಯವ ಕೃಷಿ ಪದ್ಧತಿಯ ಮೂಲಕ ನೇಜಿ ಸಿದ್ಧಪಡಿಸಿ ವರ್ಷಂಪ್ರತಿ ಭತ್ತದ ಬೇಸಾಯ ಮಾಡುತ್ತಿದ್ದು ಸಮಾಜಸೇವೆಯೊಂದಿಗೆ ಮಾದರಿ ಕೃಷಿಕರಾಗಿ ಭತ್ತದ ಬೆಳೆ ಬೆಳೆಯುತ್ತಿದ್ದಾರೆ. ಲಾಕ್ಡೌನ್ ಸಮಯ ಮೇ ತಿಂಗಳಲ್ಲಿ ಭತ್ತದ ಬೀಜ ಬಿತ್ತನೆ ಮಾಡಿದ್ದು ಒಂದು ತಿಂಗಳ ಅನಂತರ ನಾಟಿ ಕಾರ್ಯ ಮಾಡುತ್ತಿದ್ದಾರೆ.ಇವರು ಭತ್ತದ ಕೃಷಿ ಮಾಡಿ ಪರಿಸರದ ದೇವಸ್ಥಾನ, ಚರ್ಚುಗಳಿಗೆ ಕದಿರು ಕಟ್ಟಲು ತೆನೆ ನೀಡುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು
Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ
Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ
Veerappa Moily; ದೇಶಕ್ಕೆ ಕ್ರಿಕೆಟ್ ಕಾಮೆಂಟ್ರಿಯನ್ ಬೇಕಿಲ್ಲ
Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
MUST WATCH
ಹೊಸ ಸೇರ್ಪಡೆ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ