ಶಿರ್ವ: ಪೇಟೆಗೆ ಹೋಗಿ ಬರುವುದಾಗಿ ಹೇಳಿ ಹೋದ ವ್ಯಕ್ತಿ ಕುಸಿದು ಬಿದ್ದು ಸಾವು
Team Udayavani, Apr 16, 2023, 10:06 PM IST
ಶಿರ್ವ: ಕುಡಿತದ ಚಟ ಹೊಂದಿದ್ದ ಯುವಕನೋರ್ವ ಕುಸಿದು ಬಿದ್ದು ಮೃತಪಟ್ಟ ಘಟನೆ ಎ.16 ರಂದು ಶಿರ್ವ ಚೆಕ್ ಪಾದೆ ಬಳಿ ನಡೆದಿದೆ.
ಕಳತ್ತೂರು ಪೈಯಾರು ಪಿ.ಕೆ.ಎಸ್ ಪ್ರೌಢಶಾಲೆ ಬಳಿಯ ನಿವಾಸಿ ಹರೀಶ್ ನಾಯ್ಕ್ (45) ಮೃತಪಟ್ಟವರು.
ಎ.16 ರಂದು ಸಂಜೆ ಶಿರ್ವ ಪೇಟೆಗೆ ಹೋಗಿ ಬರುತ್ತೇನೆಂದು ಮನೆಯಲ್ಲಿ ಹೇಳಿ ಹೊರಟಿದ್ದರು. ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರನಾಗಿ ಬಂದಿದ್ದ ಅವರು ಶಿರ್ವ ಚೆಕ್ ಪಾದೆ ಬಳಿ ತಲುಪಿದಾಗ ತನಗೆ ತಲೆ ಸುತ್ತು ಬರುವುದಾಗಿ ವಾಹನ ಸವಾರನಲ್ಲಿ ತಿಳಿಸಿ ವಾಹನದಿಂದ ಇಳಿದಿದ್ದಾರೆ. ಬಳಿಕ ಕುಸಿದು ಬಿದ್ದ ಅವರನ್ನು ಸಾರ್ವಜನಿಕರು ಸೇರಿ ಉಪಚರಿಸಿ ಚೆಕ್ ಪಾದೆ ಬಸ್ ನಿಲ್ದಾಣದಲ್ಲಿ ಮಲಗಿಸಿದ್ದಾರೆ. ಸಾರ್ವಜನಿಕರು ಆತನ ಸಹೋದರನಿಗೆ ಕರೆ ಮಾಡಿ ತಿಳಿಸಿದ್ದು, ಸಹೋದರ ಬಂದು ನೋಡಿದಾಗ ಆತ ಮಾತನಾಡುವ ಸ್ಥಿತಿಯಲ್ಲಿ ಇರಲಿಲ್ಲ. ಸಹೋದರ ಸುರೇಶ್ ನಾಯ್ಕ್ ನೀಡಿದ ದೂರಿನಂತೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಪುಲಕೇಶಿನಗರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಶಾಸಕ ಸ್ಥಾನಕ್ಕೆ ರಾಜೀನಾಮೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್