![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಶಿರ್ವ: ಎಸ್ಎಲ್ಆರ್ಎಂ ಘಟಕದ ಕಟ್ಟಡ ಪೂರ್ಣ
Team Udayavani, Jun 2, 2020, 5:29 AM IST
![ಶಿರ್ವ: ಎಸ್ಎಲ್ಆರ್ಎಂ ಘಟಕದ ಕಟ್ಟಡ ಪೂರ್ಣ](https://www.udayavani.com/wp-content/uploads/2020/06/shirva-620x310.jpg)
ಶಿರ್ವ: ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆಯಡಿ ಸುಮಾರು 10 ಲ. ರೂ. ವೆಚ್ಚದಲ್ಲಿ ಶಿರ್ವ ಗ್ರಾ.ಪಂ. ವ್ಯಾಪ್ತಿಯ ಮಟ್ಟಾರು ಡಂಪಿಂಗ್ ಯಾರ್ಡ್ನಲ್ಲಿ ಎಸ್ಎಲ್ಆರ್ಎಂ ಘಟಕದ ಕಟ್ಟಡ ಕಾಮಗಾರಿ ಪೂರ್ಣಗೊಂಡಿದೆ.
ಉಡುಪಿ ಜಿ.ಪಂ. ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ನಿರ್ಲಕ್ಷéದಿಂದಾಗಿ ಘನತ್ಯಾಜ್ಯ ವಿಲೇವಾರಿ ಘಟಕದ ಕಟ್ಟಡ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳದೆ ಕಸ ನಿರ್ವಹಣೆ ಹಾಗೂ ವಿಲೇವಾರಿ ಸಮಸ್ಯೆಯಾಗಿ ಪರಿಣಮಿಸಿತ್ತು. ಗ್ರಾ.ಪಂ. ಆಡಳಿತ ಸಮಸ್ಯೆ ನಿವಾರಣೆಗಾಗಿ ಕಸ ವಿಲೇವಾರಿ ಘಟಕದ ಕಟ್ಟಡ ನಿರ್ಮಾಣಕ್ಕೆ ಪ್ರಥಮ ಆದ್ಯತೆ ನೀಡಿದ್ದರೂ,ಕಟ್ಟಡ ಪೂರ್ತಿಗೊಳಿಸದೆ ಇಲಾಖೆ ಮೀನ ಮೇಷ ಎಣಿಸಿತ್ತು.
ವರದಿ ಫಲಶ್ರುತಿ
ಉಡುಪಿ ಜಿ.ಪಂ., ಸ್ವಚ್ಛ ಭಾರತ್ ಮಿಷನ್(ಗ್ರಾಮೀಣ) ಯೋಜನೆಯಡಿ ನನೆಗುದಿಗೆ ಬಿದ್ದ ಶಿರ್ವ ಗ್ರಾ. ಪಂ. ವ್ಯಾಪ್ತಿಯ ಮಟ್ಟಾರು ಡಂಪಿಂಗ್ ಯಾರ್ಡ್ ನಲ್ಲಿನ ಎಸ್ಎಲ್ಆರ್ಎಂ ಘಟಕದ ಕಟ್ಟಡ ಕಾಮಗಾರಿಯ ಬಗ್ಗೆ ಉದಯವಾಣಿ ಮಾ. 12ರಂದು ಸಚಿತ್ರ ವರದಿ ನೀಡಿತ್ತು. ವರದಿಗೆ ಸ್ಪಂದಿಸಿದ ಇಲಾಖೆ ಅರ್ಧ ದಲ್ಲಿಯೇ ನಿಂತಿದ್ದ ಕಾಮಗಾರಿ ಪ್ರಾರಂಭಿಸಲು ಮುಂದಾಗಿದ್ದರೂ ಲಾಕ್ಡೌನ್ನಿಂದಾಗಿ ವಿಳಂಬವಾಗಿತ್ತು. ಲಾಕ್ಡೌನ್ ತೆರವಾದ ಕೂಡಲೇ ಕಾಮಗಾರಿ ಪ್ರಾರಂಭಿಸಿ ಜಿ.ಪಂ. ಪಂಚಾಯತ್ ರಾಜ್ಎಂಜಿನಿಯರಿಂಗ್ ವಿಭಾಗ ಕಟ್ಟಡ ಪೂರ್ತಿಗೊಳಿಸಿದ್ದು, ಕಸ ಸಂಗ್ರಹಿಸಿ ಇಡಲು ಇದ್ದ ಜಾಗದ ಕೊರತೆ ನಿವಾರಣೆಯಾಗಿದೆ.
ಸಾರ್ವಜನಿಕರ ಸಹಕಾರ ಅಗತ್ಯ
ಗ್ರಾ.ಪಂ.ವ್ಯಾಪ್ತಿಯಲ್ಲಿ ಸೋಮವಾರ, ಬುಧವಾರ ಹಾಗೂ ಶುಕ್ರವಾರ ಅಂಗಡಿ ಹಾಗೂ ವಾಣಿಜ್ಯ ಕೇಂದ್ರ ಗಳಿಂದ ಹಸಿ ಮತ್ತು ಒಣ ಕಸವನ್ನು ಸಂಗ್ರಹಿಸಿ ಡಂಪಿಂಗ್ ಯಾರ್ಡ್ನಲ್ಲಿ ನಿರ್ವಹಣೆ ಮಾಡಲಾಗುತ್ತಿದೆ . ಪಂಚಾಯತ್ ವ್ಯಾಪ್ತಿಯಲ್ಲಿ ಮನೆ ಮನೆಗೆ ಹೋಗಿ ಕಸ ಸಂಗ್ರಹಿಸುವ ವ್ಯವಸ್ಥೆ ಕಲ್ಪಿಸಲಾಗಿದ್ದು , ಗ್ರಾಮಸ್ಥರು ಹಸಿ ಮತ್ತು ಒಣ ಕಸವನ್ನು ಬೇರೆ ಬೇರೆಯಾಗಿ ನೀಡಬೇಕು.ನಾಗರಿಕರು ರಸ್ತೆ ಬದಿಯಲ್ಲಿ ಕಸ,ತ್ಯಾಜ್ಯ ಸುರಿಯದೆ ಗ್ರಾಮದ ಸ್ವತ್ಛತೆಯನ್ನು ಕಾಪಾಡುವಲ್ಲಿ ಪಂಚಾಯತ್ನೊಂದಿಗೆ ಸಹಕರಿಸಬೇಕು ಎಂದು ಶಿರ್ವ ಪಿಡಿಒ ಅನಂತ ಪದ್ಮನಾಭ ನಾಯಕ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.