ವೀಕೆಂಡ್ ಕರ್ಫ್ಯೂ : ಮಧ್ಯಾಹ್ನದ ಬಳಿಕ ಶಿರ್ವ ಪರಿಸರ ಸ್ತಬ್ದ
Team Udayavani, Sep 4, 2021, 4:08 PM IST
ಶಿರ್ವ : ಜಿಲ್ಲಾಡಳಿತ ಮತ್ತು ಸರಕಾರ ವೀಕೆಂಡ್ ಕರ್ಫ್ಯೂವಿಧಿಸಿರುವ ಹಿನ್ನೆಲೆಯಲ್ಲಿ ಇಂದು(ಶನಿವಾರ, ಸಪ್ಟೆಂಬರ್ 4) ಶಿರ್ವ ಪೇಟೆ, ಮೂಡುಬೆಳ್ಳೆ, ಪಡುಬೆಳ್ಳೆ , ಬಂಟಕಲ್ಲು, ಸೂಡ ಪರಿಸರದಲ್ಲಿ ಮಧ್ಯಾಹ್ನ 2 ಗಂಟೆಯ ಬಳಿಕ ಎಲ್ಲಾ ಅಂಗಡಿ ಮುಂಗಟ್ಟುಗಳು, ಹೊಟೇಲು, ಬಾರ್ ಮತ್ತು ರೆಸ್ಟೋರೆಂಟ್ ಗಳು ಬಂದ್ ಆಗಿದ್ದು ಜಿಲ್ಲಾಡಳಿತದ ಆದೇಶಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಇದನ್ನೂ ಓದಿ : 286 ಕೋಟಿ ವೆಚ್ಚದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರಾಕ್ ಗಾರ್ಡನ್ ಅಭಿವೃದ್ದಿ
ಬೆಳಗ್ಗಿನಿಂದ ಮಧ್ಯಾಹ್ನ 2 ಗಂಟೆಯವರೆಗೆ ಶಿರ್ವ ಪೇಟೆಯಲ್ಲಿ ಅಗತ್ಯ ಸೇವೆಗಳಾದ ಹಾಲು, ತರಕಾರಿ, ಮೆಡಿಕಲ್, ಪೆಟ್ರೋಲ್ ಪಂಪ್, ಮೀನು ಮಾರುಕಟ್ಟೆ ಸೇರಿದಂತೆ ಎಲ್ಲಾ ಅಂಗಡಿ ಮುಂಗಟ್ಟುಗಳು ತೆರೆದಿದ್ದು ವ್ಯಾಪಾರ ವಹಿವಾಟು ಎಂದಿನಂತೆ ನಡೆದಿತ್ತು. ಕೆಲವು ಬಸ್ ಗಳು ಸಂಚರಿಸಿದ್ದರೂ ಪ್ರಯಾಣಿಕರ ಸಂಖ್ಯೆ ಕಡಿಮೆಯಿತ್ತು. ಆಟೋ ರಿಕ್ಷಾಗಳು, ವಾಹನಗಳ ಸಹಿತ ಮಧ್ಯಾಹ್ನದವರೆಗೆ ಎಂದಿನಂತೆ ಜನ ಸಂಚಾರವಿದ್ದು, ಮಾಮೂಲಿ ಜನ ಜೀವನವಿತ್ತು.
ವೀಕೆಂಡ್ ಕರ್ಫ್ಯೂ ಜಾರಿಯಲ್ಲಿದ್ದರೂ ಶಿರ್ವ ಗ್ರಾಮ ಪಂಚಾಯತ್ ನ ಪೌರ ಕಾರ್ಮಿಕರು ಎಂದಿನಂತೆ ಸ್ವಚ್ಚತೆಯ ಕಾರ್ಯ ನಿರ್ವಹಿಸುತ್ತಿದ್ದರು. ಗ್ರಾಮ ಪಂಚಾಯತ್ ಕಸ ವಿಲೇವಾರಿ ವಾಹನದಲ್ಲಿ ಕೋವಿಡ್ ಮಾರ್ಗಸೂಚಿಯ ಬಗ್ಗೆ ಮೈಕ್ ಮೂಲಕ ಗ್ರಾಮಸ್ಥರಿಗೆ ಜಾಗೃತಿ ಮೂಡಿಸುತ್ತಾ ಬೆಳಗ್ಗಿನ ಹೊತ್ತು ವಿವಿಧೆಡೆ ತೆರಳಿ ಕಸ ತ್ಯಾಜ್ಯ ಸಂಗ್ರಹಿಸಿ ತಮ್ಮ ಪಾಲಿನ ಕರ್ತವ್ಯ ನಿಭಾಯಿಸಿದ್ದಾರೆ.
ಇದನ್ನೂ ಓದಿ : 7 ಗಂಟೆಯಲ್ಲಿ 101 ಮಹಿಳೆಯರಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ: ಸರ್ಜನ್ ವಿರುದ್ಧ ತನಿಖೆಗೆ ಆದೇಶ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ