ಉಡುಪಿ ಜಿಲ್ಲೆಗೆ ರಜತೋತ್ಸವ ಸಂಭ್ರಮ; ಆಡಳಿತ ಚುಕ್ಕಾಣಿ ಹಿಡಿದ ಮೊದಲ ಮಹಿಳಾ ಸಾರಥಿಗಳು


Team Udayavani, Aug 23, 2022, 1:27 PM IST

9

ಉಡುಪಿ: ಉಡುಪಿಯಲ್ಲಿ 25 ವರ್ಷಗಳ ಹಿಂದೆ 1997ರ ಆಗಸ್ಟ್‌ ತಿಂಗಳಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ ಎಂದಿನಂತೆ ಸಾಮಾನ್ಯವಾಗಿರಲಿಲ್ಲ ಅದು ಪ್ರತ್ಯೇಕ ಉಡುಪಿ ಜಿಲ್ಲೆಯಾಗಿ ರೂಪುಗೊಂಡ ಸಮಯ. ಸಂಭ್ರಮದ ಜತೆಗೆ ಆಡಳಿತ ವ್ಯವಸ್ಥೆಗೆ ಹಲವು ಸವಾಲುಗಳೇ ಎದುರಿದ್ದವು.

ಹೊಸ ಜಿಲ್ಲೆಯ ಆಡಳಿತ ಚುಕ್ಕಾಣಿ ಹಿಡಿದದ್ದು ಮಹಿಳಾ ಸಾರಥಿಗಳು ಎಂದರೆ ಅದೊಂದು ವಿಶೇಷವೇ ಸರಿ. ಹೊಸ ಜಿಲ್ಲೆ ರೂಪುಗೊಂಡು ಅದನ್ನು ಮುನ್ನಡೆಸುವುದು ಸಾಮಾನ್ಯ ವಿಷಯವಲ್ಲ. ಅಂಥ ಸಮಯದಲ್ಲಿ ಆಡಳಿತಾತ್ಮಕ ಮತ್ತು ಕಾನೂನು ಸುವ್ಯವಸ್ಥೆಯ ಸವಾಲನ್ನು ಸಮರ್ಥವಾಗಿ ಮುನ್ನಡೆಸಿದವರು ಅಂದಿನ ಜಿಲ್ಲಾಧಿಕಾರಿಯಗಿದ್ದ ಡಾ| ಕಲ್ಪನಾ ಗೋಪಾಲನ್‌ ಮತ್ತು ಸವಿತಾ ಹಂಡೆ.

ಮೂಲ ಸೌಕರ್ಯ, ಕಂದಾಯ ಸಮಸ್ಯೆ ಪರಿಹಾರಕ್ಕೆ ಡಿಸಿ ಶ್ರಮ

ಬೆಂಗಳೂರಿನ ಡಾ| ಕಲ್ಪನಾ ಗೋಪಾಲನ್‌ 1987ರ ಬ್ಯಾಚ್‌ನ ಐಎಎಸ್‌ ಅಧಿಕಾರಿ. ನೂತನ ಜಿಲ್ಲೆ ಆರಂಭಗೊಂಡ ಬಳಿಕ ಸ್ವಲ್ಪ ಕಾಲ ಜಿಲ್ಲಾಧಿಕಾರಿ ಯಾಗಿ ಕರ್ತವ್ಯ ನಿರ್ವಹಿಸಿದ್ದರೂ ಜಿಲ್ಲೆಯ ಮೂಲ ಸೌಕರ್ಯ ಮತ್ತು ಕಂದಾಯ ಸಂಬಂಧಿತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಶ್ರಮಿಸಿದವರು. ಪ್ರತ್ಯೇಕ ಜಿಲ್ಲೆಯಾದ ಬಳಿಕ ಸ್ಪಷ್ಟ ಅಭಿವೃದ್ಧಿ ದೂರದೃಷ್ಟಿಯನ್ನು ಹೊಂದಿದ್ದ ಅವರು, ಎಲ್ಲ ಇಲಾಖೆಯ ಹಿರಿಯ, ಕಿರಿಯ ಅಧಿಕಾರಿಗಳೊಂದಿಗೆ ಸಮನ್ವಯತೆ ಸಾಧಿಸಿ ಜನರ ಆಶೋತ್ತರಗಳಿಗೆ ಸ್ಪಂದಿಸಲು ಪ್ರಯತ್ನಿಸಿದವರು. ವಿವಿಧ ಜಿಲ್ಲೆಯ ಜಿಲ್ಲಾಧಿಕಾರಿಗಳಾಗಿ, ವಿವಿಧ ಇಲಾಖೆಗಳ ಉನ್ನತ ಅಧಿಕಾರಿಯಾಗಿ ಇದೀಗ ನಿವೃತ್ತರಾಗಿದ್ದಾರೆ. ಭಾರತೀಯ ಆಡಳಿತ ಸೇವೆಯಲ್ಲಿ 35 ವರ್ಷಗಳ ಕೆಲಸದ ಅಪಾರ ಅನುಭವ ಪಡೆದಿರುವ ಇವರು ಭೂ ಆಡಳಿತ, ನಗರ ನಿರ್ವಹಣೆ, ಗ್ರಾಮೀಣಾಭಿವೃದ್ಧಿ, ಕ್ರೀಡೆ, ಕಾರ್ಮಿಕ, ಪಶುಸಂಗೋಪನೆ, ಮೀನುಗಾರಿಕೆ, ಸಾರ್ವಜನಿಕ ಕುಂದುಕೊರತೆಗಳು, ಶಿಕ್ಷಣ ಕ್ಷೇತ್ರದ ಶ್ರೇಯೋಭಿವೃದ್ಧಿಗಾಗಿ ಹಲವಾರು ಲೇಖನ, ಸಂಶೋಧನ ಪ್ರಬಂಧಗಳನ್ನು ಪ್ರಕಟಿಸಿದ್ದಾರೆ.

ದಂಧೆಕೋರರಿಗೆ ಬಿಸಿಮುಟ್ಟಿಸಿದ್ದ ಎಸ್‌ಪಿ

1990ರ ಬ್ಯಾಚ್‌ನ ಐಪಿಎಸ್‌ ಅಧಿಕಾರಿಯಾಗಿದ್ದ ಸವಿತಾ ಹಂಡೆ ಅವರು ಮಹಾರಾಷ್ಟ್ರ ಮೂಲದವರು. ಕರ್ನಾಟಕ ಕೇಡರ್‌ನ ಐಪಿಎಸ್‌ ಅಧಿಕಾರಿಯಾಗಿ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸೇವೆ ಸಲ್ಲಿಸಿದ್ದರು. ಉಡುಪಿ ಜಿಲೆಯಲ್ಲಿ ಅವರು ಎಸ್‌ಪಿ ಆದ ಮೇಲೆ ಜನಸ್ನೇಹಿ ಪೊಲೀಸ್‌ ವ್ಯವಸ್ಥೆ ರೂಪಿಸಲು ಶ್ರಮಿಸಿದರು. ಜಿಲ್ಲೆಯಲ್ಲಿ ಕ್ರೈಂ ರೇಟ್‌ ಕಡಿಮೆ ಇದ್ದರೂ ಜೂಜಾಟ, ಮಟ್ಕಾ ಸಹಿತ ಕೆಲವು ಅಕ್ರಮ ಚಟುವಟಿಕೆಗಳು ಹೆಚ್ಚಿದ್ದವು. ಮುಂಬಯಿ ಭೂಗತ ಜಗತ್ತು ಮತ್ತು ಉಡುಪಿ ಸಂಪರ್ಕವಿರುವ ಹಲವು ಅಕ್ರಮ ಚಟುವಟಿಕೆಗಳ ವಿರುದ್ದ ಕಠಿನ ಕ್ರಮ ತೆಗೆದುಕೊಂಡಿದ್ದರು. ಜಿಲ್ಲೆಯ ಕುಖ್ಯಾತ ಭೂಗತ ಪಾತಕಿಯನ್ನು ಮನೆಗೆ ನುಗ್ಗಿ ಅರೆಸ್ಟ್‌ ಮಾಡಿದ್ದ ಅವರ ಧೈರ್ಯಕ್ಕೆ ಜನತೆ ಬೆರಗಾಗಿದ್ದರು. ಮಟ್ಕಾ ದಂಧೆ ಹಾವಳಿಗೆ ವಿಶೇಷ ಕಾರ್ಯಾಚರಣೆ ಮೂಲಕ ಬಿಸಿ ಮುಟ್ಟಿಸಿದ್ದ ಅವರು ಅಕ್ರಮ ದಂಧೆಕೋರರಿಗೆ ಸಿಂಹಿಣಿಯಾಗಿದ್ದರು. ಅನಂತರ ಜಿಲ್ಲೆಯಿಂದ ವರ್ಗಾವಣೆಗೊಂಡ ಅವರು ಕಾಡುಗಳ್ಳ ವೀರಪ್ಪನ್‌ ಸೆರೆ ಹಿಡಿ ಯುವ ಮಹತ್ವದ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. 2000 ಇಸವಿಯಲ್ಲಿ ಕೇಂದ್ರ ಸೇವೆಗೆ ನಿಯೋಜನೆಗೊಂಡು ಪ್ರಸ್ತುತ ಪಾಕಿಸ್ಥಾನದ ಕಾಬುಲ್‌ನಲ್ಲಿ ವಿಶ್ವಸಂಸ್ಥೆ ಭದ್ರತಾ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.