ಪ್ರತಿಕೂಲ ಪರಿಸ್ಥಿತಿಯಲ್ಲೂ ಕೃಷಿಕನ ಮೊಗದಲ್ಲಿ ಕಿಲಕಿಲ


Team Udayavani, Apr 7, 2022, 12:17 PM IST

watermelon

ಕಾಪು: ಸಮರ್ಪಕ ಬೀಜದ ಕೊರತೆ, ಬಿರು ಬಿಸಿಲಿನಿಂದ ಒಣಗಿ ಹೋದ ತರಕಾರಿ ಗದ್ದೆ, ನವಿಲು, ಹೆಗ್ಗಣ ಮತ್ತು ಹಂದಿಗಳ ಕಾಟದ ನಡುವೆಯೂ ಛಲದೊಂದಿಗೆ ಕೃಷಿ ಕಾಯಕದಲ್ಲಿ ನಿರತರಾಗಿರುವ ಪ್ರಗತಿಪರ ಕೃಷಿಕ ಶೇಖರ್‌ ಸಾಲ್ಯಾನ್‌ ಅವರ ಮೊಗದಲ್ಲಿ ಕಲ್ಲಂಗಡಿ ಹಣ್ಣು ಮತ್ತು ಸೌತೆಕಾಯಿ ಬೆಳೆಯು ಮತ್ತೆ ನಗು ತರಿಸಿದೆ.

ಕಾಪು ಪಡುಗ್ರಾಮದ ಹಿರಿಯ, ಪ್ರಗತಿಪರ ಕೃಷಿಕರಾಗಿರುವ ಶೇಖರ್‌ ಸಾಲ್ಯಾನ್‌ ಪ್ರತೀ ವರ್ಷ ಭತ್ತದ ಬೆಳೆಯನ್ನು ಬೆಳೆದು, ಬಳಿಕ ವಾಣಿಜ್ಯ ಬೆಳೆಗಳ ಜತೆಗೆ ಕಲ್ಲಂಗಡಿ, ಸೌತೆಕಾಯಿ ಸಹಿತ ವಿವಿಧ ತರಕಾರಿ ಮತ್ತು ಹಣ್ಣು ಹಂಪಲುಗಳನ್ನು ಬೆಳೆಸಿಕೊಂಡು ಪ್ರತೀ ವರ್ಷ ಲಕ್ಷ ರೂ. ಲಾಭ ಗಳಿಸುತ್ತಿದ್ದರು.

ಆದರೆ ಈ ಬಾರಿ ಪ್ರತಿಕೂಲ ವಾತಾ ವರಣ ದಿಂದಾಗಿ ಇತರೆಲ್ಲ ಬೆಳೆಗಳು ಕೈಕೊಟ್ಟಿದ್ದರೂ ಕಲ್ಲಂಗಡಿ ಹಣ್ಣು ಮತ್ತು ಸೌತೆ ಕಾಯಿ ಬೆಳೆ ಮಾತ್ರ ಭರ್ಜರಿ ಇಳುವರಿಯೊಂದಿಗೆ ಶೇಖರ್‌ ಸಾಲ್ಯಾನ್‌ ಅವರ ಕೈ ಹಿಡಿದಿದೆ.

ಭತ್ತದ ಕೃಷಿಯ ಬಳಿಕ ಗದ್ದೆಯಲ್ಲಿ ವಾಣಿಜ್ಯ ಬೆಳೆಗಳಾದ ಎಳ್ಳು, ಉದ್ದು, ಆವಡೆ ಬೆಳೆಸುತ್ತಾರೆ. ಕಲ್ಲಂಗಡಿ, ಸೌತೆಕಾಯಿ, ಅಲಸಂಡೆ, ಗೆಣಸು, ಬೂದು ಕುಂಬಳಕಾಯಿ, ಹರಿವೆ, ಪಡುವಲಕಾಯಿ, ಸೋರೆಕಾಯಿ, ಹೀರೆಕಾಯಿ, ಸಿಹಿ ಕುಂಬಳ ಕಾಯಿ, ಮೂಲಂಗಿ, ಬೆಂಡೆ, ಅವರೆ ಕಾಯಿ ಇತ್ಯಾದಿ ಬೆಳೆಗಳನ್ನು ಬೆಳೆಸುತ್ತಾರೆ.

ಮನೆಯೇ ಮಾರುಕಟ್ಟೆ

ಕಲ್ಲಂಗಡಿ ಬೆಳೆಯ ಇಳುವರಿಯನ್ನು ಮಾರುಕಟ್ಟೆಗೆ ಕೊಂಡೊಯ್ದು ಮಾರಾಟ ಮಾಡದೆ ಮನೆಯಲ್ಲೇ ಗ್ರಾಹಕರಿಗೆ ಪೂರೈಸುತ್ತಿದ್ದಾರೆ. ಕೆಲವು ವರ್ಷಗಳ ಹಿಂದೆ ಅಪಘಾತದಲ್ಲಿ ಗಾಯಗೊಂಡು ಮೂಲೆ ಸೇರಿ, ಪ್ರಸ್ತುತ ಸುಧಾರಿಸಿಕೊಳ್ಳುತ್ತಿರುವ ಮಗ ಸಂದೇಶ್‌ ಸಾಲ್ಯಾನ್‌ ಅವರಿಗೆ ಮನೆಯಲ್ಲೇ ಈ ಕೆಲಸ ಕೊಟ್ಟು ಮಗನ ಬದುಕಿಗೂ ಆಧಾರವಾಗಿದ್ದಾರೆ. ಬ್ರಹ್ಮಾವರದಲ್ಲಿ ಉದ್ಯಮ ನಡೆಸುತ್ತಿರುವ ಅವರು ಕಾಪುವಿನಲ್ಲಿ ವಿವಿಧ ಸಂಘ – ಸಂಸ್ಥೆಗಳ ಮೂಲಕವಾಗಿ ಸಂಘ ಜೀವಿಯಾಗಿದ್ದಾರೆ.

ಸಾವಯವ ಗೊಬ್ಬರ

ಕುಟುಂಬದ ಕೃಷಿ ಭೂಮಿಯೊಂದಿಗೆ ಇತರರ ಜಮೀನನ್ನು ಗೇಣಿಗೆ ಪಡೆದುಕೊಂಡು ಕೃಷಿ ನಡೆಸುತ್ತಿರುವ ಅವರು ಸಂಪೂರ್ಣ ಸಾವಯವ ಗೊಬ್ಬರವಾದ ಹಟ್ಟಿ ಗೊಬ್ಬರ ಮತ್ತು ಸುಡು ಮಣ್ಣುಗಳನ್ನು ಬಳಸುತ್ತಾರೆ. ಅವಶ್ಯ ಬಿದ್ದಲ್ಲಿ ಇತರ ಹೈನುಗಾರರಿಂದಲೂ ಗೊಬ್ಬರವನ್ನು ಪಡೆಯುತ್ತಾರೆ.

‌ಶ್ರದ್ಧೆಯಿದ್ದರೆ ಕೃಷಿ ಲಾಭಕರ

ತಂದೆ-ತಾಯಿಯಿಂದ ಬಳುವಳಿಯಾಗಿ ಬಂದ ಕೃಷಿ ಕಾರ್ಯದ ಪರಂಪರೆಯನ್ನು ಉಳಿಸಿಕೊಂಡು ಬರುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮುಂದುವರಿಸಿದ್ದೇನೆ. ಕೃಷಿ ಕಾರ್ಯಕ್ಕೆ ಪತ್ನಿ, ಮಕ್ಕಳು ಸಂಪೂರ್ಣ ಸಹಕಾರ ನೀಡುತ್ತಿದ್ದಾರೆ. ಬೈಲು ಪ್ರದೇಶದಲ್ಲಿ ನೂರಾರು ಎಕರೆ ಕೃಷಿ ಭೂಮಿ ಹಡಿಲು ಬಿದ್ದಿರುವುದನ್ನು ನೋಡಿದರೆ ಹೊಟ್ಟೆಯುರಿ ಬರುತ್ತದೆ. ತರಕಾರಿ-ಹಣ್ಣು ಸಹಿತವಾಗಿ ಕೃಷಿ ಕಾರ್ಯವನ್ನು ಶ್ರದ್ಧೆಯಿಂದ ನಡೆಸಿದರೆ ಖಂಡಿತವಾಗಿಯೂ ಲಾಭದಾಯಕವಾಗಿದ್ದು ಯುವಕರು ಹೆಚ್ಚು ಹೆಚ್ಚಾಗಿ ಕೃಷಿ ಕಾರ್ಯದತ್ತ ಒಲವು ತೋರಿಸಬೇಕಿದೆ. -ಶೇಖರ್‌ ಸಾಲ್ಯಾನ್‌, ಪ್ರಗತಿಪರ ಕೃಷಿಕ, ಕಾಪು  

-ರಾಕೇಶ್‌ ಕುಂಜೂರು

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.