ಪೊಲೀಸರು ಅವಕಾಶ ನೀಡಿದರೆ ಶೀರೂರು ಶ್ರೀ ಆರಾಧನೆ


Team Udayavani, Jul 28, 2018, 10:25 AM IST

soder.png

ಉಡುಪಿ: ತನಿಖೆಯ ಉದ್ದೇಶದಿಂದ ಶೀರೂರು ಮೂಲ ಮಠ ಈಗ ಪೊಲೀಸ್‌ ಸುಪರ್ದಿಯಲ್ಲಿದೆ. ಪೊಲೀಸರು ಅವಕಾಶ ನೀಡಿದರೆ ಶೀರೂರು ಶ್ರೀಗಳ ಆರಾಧನೆಯನ್ನು ನಿಗದಿತ ದಿನಾಂಕದಂದೇ ನಡೆಸಲಾಗುವುದು ಎಂದು ಶೀರೂರು ಮಠದ ದ್ವಂದ್ವ ಮಠವಾಗಿರುವ ಸೋದೆ ಮಠಾಧೀಶ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರು ತಿಳಿಸಿದ್ದಾರೆ.
ಶುಕ್ರವಾರ ತಮ್ಮನ್ನು ಭೇಟಿಯಾದ ಪತ್ರಕರ್ತರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಶ್ರೀಗಳು, ಶೀರೂರು ಶ್ರೀಗಳು ಅಸ್ತಂಗತ ರಾದ 13ನೇ ದಿನಕ್ಕೆ ಅಂದರೆ ಜು. 31ರಂದು ಆರಾಧನೆಯ ವಿಧಿವಿಧಾನಗಳು ನಡೆಯಬೇಕಾಗಿವೆ. ಆದರೆ ಪ್ರಸ್ತುತ ತನಿಖೆಯ ಉದ್ದೇಶದಿಂದ ಪೊಲೀಸರು ಮಠದೊಳಗೆ ಸಾರ್ವಜನಿಕರಿಗೆ ಪ್ರವೇಶ ನೀಡುತ್ತಿಲ್ಲ. ಈ ಕುರಿತು ಎಸ್‌ಪಿ ಜತೆಗೆ ಮಾತನಾಡಿದ್ದೇವೆ. ಅವರು ಈ ಕುರಿತು ಶೀಘ್ರ ತಿಳಿಸುವುದಾಗಿ ಹೇಳಿದ್ದಾರೆ. ಒಂದು ವೇಳೆ ಜು. 31 ರೊಳಗೆ ಪೊಲೀಸ್‌ ಸುಪರ್ದಿಯಿಂದ ಮುಕ್ತ ವಾದರೆ ಇಲ್ಲವೇ ಆರಾಧನೆಗೆ ಅವಕಾಶ ನೀಡಿದರೆ ಅಂದೇ ನಡೆಯಲಿದೆ.

ಇಲ್ಲವಾದಲ್ಲಿ ಅನಿವಾರ್ಯವಾಗಿ ಮುಂದೆ ಬೇರೊಂದು ದಿನ ಸಂಪ್ರದಾಯ ಪ್ರಕಾರ ನಡೆಸಲಾಗುವುದು. ನಮ್ಮ ವಿಧಿವಿಧಾನಗಳಿಂದ ಪೊಲೀಸ್‌ ತನಿಖೆಗೆ ಅಡ್ಡಿಯಾಗಬಾರದು. ವೃಂದಾವನ ನಿರ್ಮಾಣ ಶಾಸ್ತ್ರದಂತೆ ಒಂದು ವರ್ಷದ ಬಳಿಕವೇ ನಡೆಯುತ್ತದೆ. ಮೂಲಮಠದಲ್ಲಿ ನಿತ್ಯಪೂಜೆ, ಪ್ರತಿ ಶನಿವಾರ ರಂಗಪೂಜೆ ನಡೆಯುತ್ತಿದೆ. ಆದರೆ ಭಕ್ತರು ಪಾಲ್ಗೊಳ್ಳಲು ಅವಕಾಶವಿಲ್ಲ ಎಂದರು.

ಬೇಸರ ವ್ಯಕ್ತಪಡಿಸಿದ ಶ್ರೀಗಳು
ಕೆಲವು ಮಾಧ್ಯಮಗಳ ವರದಿಯಿಂದ ತುಂಬಾ ಬೇಸರವಾಗಿದೆ. ಅರಗಿಸಿಕೊಳ್ಳಲು ಆಗದಂತಹ ವರದಿಗಳು ಬಂದಿವೆ. ಅನ್ಯಾಯ ಮಾಡಿದವರು ಸಹಿಸಿಕೊಳ್ಳಬಹುದು. ಆದರೆ ನಾವು ಯಾರಿಗೂ ಅನ್ಯಾಯ ಮಾಡಿಲ್ಲ. ನಾವು ಮನುಷ್ಯರಲ್ಲವೆ? ಪೊಲೀಸರಿಗೆ ಸಹಕಾರ ನೀಡುತ್ತಿದ್ದೇವೆ. ಪೊಲೀಸರು ಮತ್ತು ನಮ್ಮ ನಡುವೆ ಭಿನ್ನಾಭಿಪ್ರಾಯಗಳು ಇಲ್ಲ. ಚಿನ್ನಾಭರಣಗಳು ಕೂಡ ಪೊಲೀಸರ ಸುಪರ್ದಿಯಲ್ಲಿಯೇ ಇವೆ ಎಂದು ಶ್ರೀಗಳು ಹೇಳಿದರು.

ಯೋಗ್ಯ ವಟುವಿನ ಆಯ್ಕೆ
ಶೀರೂರು ಮಠದ ಉತ್ತರಾಧಿಕಾರಿಯನ್ನಾಗಿ ಯೋಗ್ಯ ವಟುವನ್ನೇ ಆಯ್ಕೆ ಮಾಡಲಾಗುವುದು. ಯೋಗ್ಯರು ಸಿಕ್ಕಿದ ಕೂಡಲೇ ಶಿಷ್ಯ ಸ್ವೀಕಾರ ನಡೆಯಲಿದೆ. ಅದುವರೆಗೆ ಮಠದ ಆಸ್ತಿಗಳ ಉಸ್ತುವಾರಿ ನೋಡಿಕೊಳ್ಳುವ ಉದ್ದೇಶದಿಂದ ಐವರು ಸದಸ್ಯರನ್ನೊಳಗೊಂಡ ಉಸ್ತುವಾರಿ ಸಮಿತಿ ರಚಿಸುವ ಪ್ರಕ್ರಿಯೆ ನಡೆಯುತ್ತಿದೆ. ಶೀರೂರು ಮಠ ಅನಾಥವಾಗುತ್ತಿದೆ ಎಂಬ ವರದಿಗಳಿಗೆ ಅರ್ಥವಿಲ್ಲ. ದ್ವಂದ್ವ ಮಠ ಇರುವಾಗ ಆ ಪ್ರಶ್ನೆ ಉದ್ಭವಿಸುವುದಿಲ್ಲ. ಈ ಹಿಂದೆ ಶೀರೂರು ಮಠದಲ್ಲಿದ್ದವರನ್ನೇ ಈಗ ವ್ಯವಸ್ಥಾಪಕರನ್ನಾಗಿ ನಿಯೋಜಿಸಲಾಗಿದೆ. ಮಠಕ್ಕೆ ಇರುವ ಸಾಲದ ವಿಚಾರ ಗೊತ್ತಾಗಿಲ್ಲ. ಅವೆಲ್ಲವೂ ಇನ್ನಷ್ಟೇ ತಿಳಿಯಬೇಕಿದೆ. ಮಠದ ದಾಖಲೆಗಳು ಸೇರಿದಂತೆ ಯಾವುದೇ ವಸ್ತು ಗಳನ್ನು ಮುಟ್ಟಲು ಹೋಗಿಲ್ಲ. ಎಲ್ಲ ಮಠಗಳು ಸಹಕಾರ ನೀಡುತ್ತಿವೆ ಎಂದು ಸೋದೆ ಶ್ರೀಗಳು ಪ್ರತಿಕ್ರಿಯಿಸಿದರು. 

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.