ಶ್ರೀ ಕೃಷ್ಣಮಠ: ಧನ್ವಂತರಿ ಚಿಕಿತ್ಸಾಲಯ ಲೋಕಾರ್ಪಣೆ
Team Udayavani, Apr 15, 2019, 6:30 AM IST
ಉಡುಪಿ: ದೇವರ ಅನುಗ್ರಹ ವಿದ್ದರೆ ಸಕಲ ರೋಗಗಳು ವಾಸಿಯಾಗಲಿವೆ ಎಂದು ಪರ್ಯಾಯ ಪಲಿಮಾರು ಮಠದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ನುಡಿದರು.
ಶ್ರೀ ಕೃಷ್ಣಮಠ ಹಾಗೂ ಪರ್ಯಾಯ ಪಲಿಮಾರು ಮಠದ ಸಹಯೋಗದಲ್ಲಿ ಆಯೋಜಿಸಿದ್ದ ಧನ್ವಂತರಿ ಚಿಕಿತ್ಸಾಲಯದ ನೂತನ ಕಟ್ಟಡವನ್ನು ಶ್ರೀಪಾದರು ಉದ್ಘಾಟಿಸಿ ಮಾತನಾಡಿದರು.
ರಕ್ತದಾನದ ಮೂಲಕ ಇತರರ ಜೀವವನ್ನು ರಕ್ಷಿಸಬಹುದಾಗಿದೆ. ಈ ನಿಟ್ಟಿನಲ್ಲಿ ಧನ್ವಂತರಿ ಚಿಕಿತ್ಸಾಲಯದಲ್ಲಿ ದಾನಿಗಳ ಹಾಗೂ ಸರಕಾರಿ ಆಸ್ಪತ್ರೆಯ ಸಹಯೋಗದಲ್ಲಿ ಬ್ಲಡ್ ಬ್ಯಾಂಕ್ ತೆರೆಯುವಲ್ಲಿ ಸಂಕಲ್ಪವಿದೆ. ಧನ್ವಂತರಿ ಚಿಕಿತ್ಸಾಲಯ ಕೇವಲ ಭಕ್ತರಿಗೆ ಮಾತ್ರವಲ್ಲ. ಆವಶ್ಯಕತೆಯುಳ್ಳವರಿಗೆ ವೈದ್ಯಕೀಯ ಸೇವೆ ಸಿಗಲಿದೆ ಎಂದರು.
ಅದಮಾರು ಮಠದ ಕಿರಿಯ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಆಶೀರ್ವಚನ ನೀಡಿದರು.
ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ ಡಾ| ಜಿ. ಶಂಕರ್ ಮಾತನಾಡಿ, ಧನ್ವಂತರಿ ಚಿಕಿತ್ಸಾಲಯಕ್ಕೆ ಅಗತ್ಯವಿರುವ ಇಸಿಜಿ ಯಂತ್ರ , ಔಷಧಿ ವೆಚ್ಚವನ್ನು ಭರಿಸುವುದಾಗಿ ಭರವಸೆ ನೀಡಿದರು.
ಡಾ| ಎ.ವಿ. ಬಾಳಿಗಾ ಆಸ್ಪತ್ರೆಯ ಮನೋವೈದ್ಯ ಡಾ| ಪಿ.ವಿ. ಭಂಡಾರಿ, ಡಾ| ಡಿ. ಸುಧನ್ವ, ಗುರುರಾಜ್, ಚ್ಯವನ ಲ್ಯಾಬ್ನ ಎ.ಪಿ. ಭಟ್, ನೊವೆಲ್ಟಿ ಜುವೆಲರಿಯ ಜಯ ಆಚಾರ್ಯ, ಪದ್ಮರಾಜ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.