SSLC ಪರೀಕ್ಷೆ: 14,022 ವಿದ್ಯಾರ್ಥಿಗಳು ಸಜ್ಜು : ಈ ವಸ್ತುಗಳನ್ನು ಕೊಂಡೊಯ್ಯಲು ಅವಕಾಶವಿಲ್ಲ
ಉಡುಪಿ ಜಿಲ್ಲೆಯಲ್ಲಿ 58 ಪರೀಕ್ಷಾ ಕೇಂದ್ರ
Team Udayavani, Mar 26, 2022, 2:22 PM IST
ಉಡುಪಿ : ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಗೆ ಜಿಲ್ಲೆಯಲ್ಲಿ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಮಾ. 28ರಿಂದ ಎ.11ರ ವರೆಗೆ ಸುಗಮವಾಗಿ ಪರೀಕ್ಷೆ ನಡೆಸಲು ಬೇಕಿರುವ ಎಲ್ಲ ಕ್ರಮ ತೆಗೆದುಕೊಳ್ಳಲಾಗಿದೆ.
2 ಖಾಸಗಿ ಕೇಂದ್ರ ಸಹಿತವಾಗಿ 58 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಕೊಠಡಿ ಮೇಲ್ವಿಚಾರಕರು, ವಿಚಕ್ಷಣದ ದಳ ಸಿಬಂದಿ ನಿಯೋಜನೆಯೂ ಪೂರ್ಣಗೊಂಡಿದೆ. ಜಿಲ್ಲೆಯ 266 ಪ್ರೌಢಶಾಲೆಯ 7,229 ಬಾಲಕರು, 6,793 ಬಾಲಕಿಯರು ಸೇರಿ 14,022 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇದರಲ್ಲಿ 13,672 ಹೊಸ ಹಾಗೂ 350 ಪುನರಾವರ್ತಿತ, ಖಾಸಗಿ ವಿದ್ಯಾರ್ಥಿಗಳು ಇದ್ದಾರೆ.
ಪ್ರತೀ ಪರೀಕ್ಷಾ ಕೊಠಡಿಯಲ್ಲಿ ಕನಿಷ್ಠ 20 ವಿದ್ಯಾರ್ಥಿಗಳಿಗೆ ವ್ಯವಸ್ಥೆ ಮಾಡಲಾಗಿದ್ದು ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ವ್ಯವಸ್ಥೆ ಮಾಡಲಾಗಿದೆ. ಡೆಸ್ಕ್ ಮೇಲೆ ವಿದ್ಯಾರ್ಥಿಗಳ ನೋಂದಣಿ ಸಂಖ್ಯೆ ಇರಲಿದೆ.
ಜತೆಗೆ ಕೊಠಡಿಯ ಬೋರ್ಡ್ನಲ್ಲೂ ನೋಂದಣಿ ಸಂಖ್ಯೆಯ ಕ್ರಮಾಂಕ ಬರೆಯಲಾಗುತ್ತದೆ. ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ಗೊಂದಲ ಆಗದಂತೆ ಕೊಠಡಿ ಮಾರ್ಗಸೂಚಕ ಹಾಗೂ ಮಾಹಿತಿ ನೀಡಲು ಸಿಬಂದಿಯೂ ಇರುತ್ತಾರೆ.
ಇದನ್ನೂ ಓದಿ : ಕೊಲ್ಲೂರು ದೇವಳದಲ್ಲಿ ಟಿಪ್ಪು ಹೆಸರಿನ ಸಲಾಂ ಆರತಿ ನಿಲ್ಲಿಸಿ: ವಿಶ್ವ ಹಿಂದೂ ಪರಿಷತ್ ಆಗ್ರಹ
ಕೊರೊನಾ ಮುಂಜಾಗೃತಿ
ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ವಿದ್ಯಾರ್ಥಿಯಿಲ್ಲ. ಆದರೂ, ಪರೀಕ್ಷಾ ಕೇಂದ್ರವನ್ನು ಸಂಪೂರ್ಣವಾಗಿ ಸುರಕ್ಷಿತವಾಗಿಡಲು ಸ್ಯಾನಿಟೈಸೇಷನ್ ಮಾಡಲಾಗಿದೆ. ವಿದ್ಯಾರ್ಥಿಗಳಿಗೆ, ಮೇಲ್ವಿಚಾರಕರಿಗೆ ಹಾಗೂ ಭದ್ರತಾ ಸಿಬಂದಿ ಸಹಿತ ಎಲ್ಲರಿಗೂ ಮಾಸ್ಕ್ ಕಡ್ಡಾಯ ಮಾಡಲಾಗಿದೆ. ಎಲ್ಲ ಕೇಂದ್ರದಲ್ಲೂ ವಿಶೇಷ ಕೊಠಡಿ ಇರುತ್ತದೆ. ಆರೋಗ್ಯ ತಪಾಸಣೆ, ಥರ್ಮಲ್ ಸ್ಕ್ರೀನಿಂಗ್ ನಡೆಸಲಾಗುತ್ತದೆ. ದಿಢೀರ್ ಅಸ್ವಸ್ಥತೆಗೆ ಒಳಗಾದ ವಿದ್ಯಾರ್ಥಿಗೆ ವಿಶೇಷ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಲಾಗಿದೆ.
ಯಾವುದಕ್ಕೆಲ್ಲ ಅವಕಾಶವಿಲ್ಲ?
ಪರೀಕ್ಷಾ ಕೊಠಡಿಯ ಒಳಗೆ ಮೊಬೈಲ್, ಸ್ಮಾರ್ಟ್ ವಾಚ್, ಕೆಮರಾ, ಅತ್ಯಾಧುನಿಕ ಕ್ಯಾಲ್ಕುಲೇಟರ್ ಸಹಿತವಾಗಿ ಯಾವುದೇ ಎಲೆಕ್ಟ್ರಾನಿಕ್ಸ್ ವಸ್ತುಗಳನ್ನು ಕೊಂಡೊಯ್ಯಲು ಅವಕಾಶ ಇಲ್ಲ. ಪರೀಕ್ಷಾ ಕೇಂದ್ರದ ಮೊಬೈಲ್ ಸ್ವಾಧೀನ ಅಧಿಕಾರಿಗಳು ಮೇಲ್ವಿಚಾರಣೆ ಮಾಡಲಿದ್ದಾರೆ.
ಸಕಲ ವ್ಯವಸ್ಥೆ
ಜಿಲ್ಲೆಯಲ್ಲಿ ವಿದ್ಯಾರ್ಥಿಗಳು ಸುಗಮವಾಗಿ ಪರೀಕ್ಷೆ ಬರೆಯಲು ಬೇಕಾದ ಎಲ್ಲ ವ್ಯವಸ್ಥೆ ಮಾಡಿದ್ದೇವೆ. ಪರೀಕ್ಷಾ ದಿನ ಗ ಳಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ.
-ಗೋವಿಂದ ಮಡಿವಾಳ, ಡಿಡಿಪಿಐ, ಉಡುಪಿ
ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ವಿದ್ಯಾರ್ಥಿಗಳು ಇಲ್ಲ. ಆದರೆ, ಎಲ್ಲ ಕೇಂದ್ರದಲ್ಲೂ ವಿದ್ಯಾರ್ಥಿಗಳ ಸುರಕ್ಷತೆಗೆ ಆದ್ಯತೆ ನೀಡಲಾಗಿದೆ. ಮಾಸ್ಕ್ ಕಡ್ಡಾಯವಾಗಿದೆ.
– ಜಾಹ್ನವಿ ಸಿ., ಎಸೆಸೆಲ್ಸಿ ಜಿಲ್ಲಾ ನೋಡಲ್ ಅಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ