ಕೋವಿಡ್ ನಿಯಂತ್ರಣದಲ್ಲಿ ರಾಜ್ಯ, ಕೇಂದ್ರ ವಿಫಲ: ದಿನೇಶ್ ಗುಂಡೂರಾವ್
Team Udayavani, Aug 4, 2020, 7:14 AM IST
ಉಡುಪಿ: ಕೋವಿಡ್ ನಿಯಂತ್ರಣದಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ವಿಫಲವಾಗಿವೆ. ಇಂತಹ ಸಂಕಷ್ಟ ಕಾಲದಲ್ಲಿಯೂ ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಕೋಟ್ಯಂತರ ರೂ. ಹಗರಣ ನಡೆದಿದೆ. ಈ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಮಾಜಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನಗರದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಆಗ್ರಹಿಸಿದರು.
ಕೊರೊನಾ ಆರಂಭದಲ್ಲಿ ಅದನ್ನು ಎದುರಿಸಲು ರಾಜ್ಯ ಮತ್ತು ಕೇಂದ್ರ ಸರಕಾರಗಳಿಗೆ ಪಕ್ಷಾತೀತ ಬೆಂಬಲ ನೀಡಲಾಯಿತು. ಮಾ. 24ರಂದು ಪ್ರಧಾನ ಮಂತ್ರಿಗಳು ಲಾಕ್ಡೌನ್ ಘೋಷಣೆ ಮಾಡಿದಾಗ ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ ಕೇವಲ 564 ಇತ್ತು. ಈ ಸಂದರ್ಭದಲ್ಲಿ ಪ್ರಧಾನ ಮಂತ್ರಿಗಳು 21 ದಿನಗಳಲ್ಲಿ ನಾವು ಕೊರೊನಾ ವಿರುದ್ಧ ಜಯಿಸುತ್ತೇವೆ ಎಂದು ಆಶ್ವಾಸನೆ ನೀಡಿದರು. ಜನರು ಚಪ್ಪಳೆ ತಟ್ಟಿದರು, ಜಾಗಟೆ ಬಾರಿಸಿದರು. ಆದರೂ ಸೋಂಕು ನಿಯಂತ್ರಣಕ್ಕೆ ಬಾರದೆಈಗ 12 ಲಕ್ಷ ಮೀರಿದೆ ಎಂದರು.
ರಾಹುಲ್ ಎಚ್ಚರಿಸಿದ್ದರು
ಕೊರೊನಾವನ್ನು ಗಂಭೀರವಾಗಿ ಪರಿಗಣಿಸುವಂತೆ ರಾಹುಲ್ ಗಾಂಧಿ ಅವರು ಮೊದಲೇ ಕೇಂದ್ರವನ್ನು ಎಚ್ಚರಿಸಿ ದ್ದರು. ಆಡಳಿತ ಪಕ್ಷವನ್ನು ನಿಷ್ಕ್ರಿಯಗೊಳಿಸುವ ಯಾವ ಉದ್ದೇಶವೂ ನಮಗಿರಲಿಲ್ಲ. ಕೊರೊನಾ ಎದುರಿಸಲು ಕಾಂಗ್ರೆಸ್ ಮುಖಂಡರು ಅನೇಕ ಕಾರ್ಯಕ್ರಮ ಗಳನ್ನು ಹಮ್ಮಿಕೊಂಡಿದ್ದಾರೆ ಎಂದರು.
ಭ್ರಷ್ಟಾಚಾರ ಖಚಿತ ವೈದ್ಯಕೀಯ ಉಪಕರಣಗಳ ಖರೀದಿ ಯಲ್ಲಿ ರಾಜ್ಯದಲ್ಲಿ ಶೇ. 50ರಷ್ಟು ಹಗರಣ ನಡೆದಿದೆ. ಡಿಕೆಶಿಯವರು ಹಗರಣಗಳ ಬಗ್ಗೆ ಮಾಹಿತಿ ನೀಡುವಂತೆ ಕೇಳಿದಾಗ 24 ಗಂಟೆಯೊಳಗೆ ನೀಡುವುದಾಗಿ ತಿಳಿಸಿದ್ದರು; ಆದರೆ ನೀಡಿಲ್ಲ. ಇಂತಹ ಸಂದರ್ಭ ದಲ್ಲೂ ರಾಜ್ಯ ಸರಕಾರ ಲೂಟಿಗೆ
ಇಳಿದಿರುವುದು ಸರಿಯಲ್ಲ ಎಂದರು.
ಮರಳು ಅಕ್ರಮ ಸಾಗಾಟ: ಅಧಿವೇಶನದಲ್ಲಿ ಚರ್ಚೆ
ಕೊರೊನಾವನ್ನು ನೆಪವಾಗಿಟ್ಟುಕೊಂಡು ಬಿಜೆಪಿ ಸರಕಾರವು ಪ್ರತಿಯೊಂದನ್ನೂ ಹರಾಜಿಗಿಟ್ಟಿದೆ. ಭೂಸುಧಾರಣೆ ಕಾನೂನು ನಿಷ್ಕ್ರಿಯ ಮಾಡಿದೆ. ಎಪಿಎಂಸಿ ಆ್ಯಕ್ಟ್ ಬದಲಾಗಿದೆ. ಪೆಟ್ರೋಲ್, ಡೀಸೆಲ್ ದರ ಏರಿಸಲಾಗಿದೆ. ಇದಕ್ಕೂ ಕೊರೊನಾಕ್ಕೂ ಏನು ಸಂಬಂಧ ಎಂದು ದಿನೇಶ್ ಪ್ರಶ್ನಿಸಿದರು. ಕೊರೊನಾ ಲಾಕ್ಡೌನ್ ನಡುವೆ ಉಡುಪಿ ಜಿಲ್ಲೆಯಲ್ಲಿ ಸಿಮೆಂಟ್, ಮರಳು ದಂಧೆ ನಡೆದಿದೆ. ಇದರಲ್ಲಿ ಅಧಿಕಾರಿಗಳು ಹಾಗೂ ಶಾಸಕರು ನೇರವಾಗಿ ಶಾಮೀಲಾಗಿದ್ದಾರೆ. ಈ ಬಗ್ಗೆ ಅಧಿವೇಶನದಲ್ಲಿಯೂ ಚರ್ಚೆ ಮಾಡಲಾಗುವುದು. ಜೈಶ್ರೀರಾಮ್ ಹೆಸರು ಹೇಳಿಕೊಂಡು ಬಿಜೆಪಿಯವರು ದೇವರಿಗೆ ಮೋಸ ಮಾಡುತ್ತಿದ್ದಾರೆ. ಪ್ರಧಾನ ಮಂತ್ರಿಯಿಂದ ಹಿಡಿದು ಆಡಳಿತ ಪಕ್ಷದ ಎಲ್ಲ ಜನಪ್ರತಿನಿಧಿಗಳು ಸುಳ್ಳು ಹೇಳುತ್ತಿದ್ದಾರೆ. ಜನರಿಗೆ ಇದು ಅರ್ಥವಾಗುತ್ತಿದೆ.
– ದಿನೇಶ್ ಗುಂಡೂರಾವ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
MUST WATCH
ಹೊಸ ಸೇರ್ಪಡೆ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ