ಬೀದಿನಾಯಿಗಳ ಜತೆ ಸಾಕುನಾಯಿಗಳೂ ಬೀದಿಗೆ ಬಂದರೆ…?


Team Udayavani, Apr 28, 2020, 5:34 AM IST

ಬೀದಿನಾಯಿಗಳ ಜತೆ ಸಾಕುನಾಯಿಗಳೂ ಬೀದಿಗೆ ಬಂದರೆ…?

ಸಾಂದರ್ಭಿಕ ಚಿತ್ರ.

ಉಡುಪಿ: ಬೆಂಗಳೂರಿನಲ್ಲಿ ಭಾರೀ ಕಲಿತ ದೊಡ್ಡ ಕುಳಗಳು ಕೋವಿಡ್ 19 ಸೋಂಕಿಗೆ ಹೆದರಿ ತಾವು ಇದುವರೆಗೆ ಮುದ್ದಿಸುತ್ತಿದ್ದ ಸಾಕು ನಾಯಿಗಳನ್ನು ಕದ್ದುಮುಚ್ಚಿ ಬೀದಿ ಪಾಲು ಮಾಡುತ್ತಿರುವುದು ವರದಿಯಾಗಿದೆ. ಕರಾವಳಿಯಲ್ಲಿ ಕಸಗಳನ್ನು ಕದ್ದುಮುಚ್ಚಿ ಎಸೆದು ಹೋಗುವ ಎಜುಕೇಟೆಡ್‌ಗಳು ಸಾಕು ನಾಯಿಗಳನ್ನು ಬೀದಿಗೆ ಅಟ್ಟಿದರೆ ಬೀದಿ ನಾಯಿಗಳ ಸಮಸ್ಯೆ ಜತೆ ಈ ದುಬಾರಿ ಸಾಕುನಾಯಿಗಳೂ ಸಮಸ್ಯೆ ತಂದೊಡ್ಡಬಹುದು ಎಂಬ ಆತಂಕವಿದೆ.

ಎರಡು ಜಿಲ್ಲೆಗಳಿಗೆ ಸೀಮಿತವಾಗಿದ್ದ ಮಂಗನ ಕಾಯಿಲೆ ಈಗ 12 ಜಿಲ್ಲೆಗಳಿಗೆ ಹರಡಿದೆ. ನಾಯಿಗಳನ್ನು ಬಿಡುವ ಕುರಿತೂ ಸೂಕ್ತ ಕ್ರಮ ಕೈಗೊಳ್ಳದೆ ಹೋದರೆ ಹೊಸ ಹೊಸ ಸಮಸ್ಯೆಗಳು ಹುಟ್ಟಿಕೊಳ್ಳಬಹುದು ಎಂಬ ಆತಂಕವನ್ನು ನಿವೃತ್ತ ಪ್ರಾಧ್ಯಾಪಕ ಡಾ| ಮುರಳೀಧರ ಉಪಾಧ್ಯ ಹಿರಿಯಡಕ ವ್ಯಕ್ತಪಡಿಸುತ್ತಾರೆ.

ಹಂದಿ ಜ್ವರ, ಹಕ್ಕಿ ಜ್ವರ ಇತ್ಯಾದಿಗಳಂತೆ ನಾಯಿ ಮೂಲದಿಂದ ವೈರಾಣುಗಳು ಹರಡಿದರೆ ಪರಿಸ್ಥಿತಿ ಗಂಡಾಂತರವಾಗಲಿದೆ ಎಂಬ ಕಳವಳ ಇದೆ.

ಬೆಂಗಳೂರಿನಲ್ಲಿ ಸಾಕು ನಾಯಿಗಳನ್ನು ಬಿಡುವ ಅಗತ್ಯವಿರಲಿಲ್ಲ. ಅವು ವ್ಯಾಕ್ಸಿನೇಟೆಡ್‌ ಆಗುವೆ. ಐಟಿ, ಬಿಟಿಯವರು ಸುಮ್ಮನೆ ಹೆದರಿ ಬಿಟ್ಟು ಬಂದರು. ಹೀಗೆ ಮಾಡಿದವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಲು ರಾಜ್ಯ ಪ್ರಾಣಿ ಕಲ್ಯಾಣ ಮಂಡಳಿ ಎಚ್ಚರಿಸಿದೆ ಎನ್ನುತ್ತಾರೆ ಪಶುಸಂಗೋಪನ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಡಾ|ಹರೀಶ್‌ ತಮಣಕರ್‌.

ಬಿಟ್ಟು ಹೋದ ನಾಯಿಗಳೂ ಒಳ್ಳೊಳ್ಳೆಯ ತಳಿಗಳಾದ ಕಾರಣ ಎನ್‌ಜಿಒಗಳು ಲಾಭ ಮಾಡಿಕೊಳ್ಳುವ ಅಪಾಯವೂ ಇದೆಯಂತೆ. ಇವರು ಈ ಬಿಟ್ಟು ಹೋದ ನಾಯಿಗಳನ್ನು ಎರಡು ಮೂರು ತಿಂಗಳು ಸಾಕಿ ಅನಂತರ ಒಳ್ಳೆಯ ಬೆಲೆಗೆ ಮಾರುವ ಸಾಧ್ಯತೆ ಇದೆ.

ಉಡುಪಿಯಲ್ಲಿ ಬೀದಿ ನಾಯಿಗಳು, ಬೀದಿ ಹಸುಗಳು, ಹಕ್ಕಿಗಳಿಗೆ ಆಹಾರ ಒದಗಿಸಲು ಜಿಲ್ಲಾಡಳಿತದಿಂದ ಕ್ರಮ ವಹಿಸಲಾಗಿದೆ. ಇದರ ಪೂರ್ಣ ಜವಾಬ್ದಾರಿಯನ್ನು ನಗರ ಮತ್ತು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳಿಗೆ ವಹಿಸಲಾಗಿದೆ ಎಂದು ಡಾ|ಹರೀಶ್‌ ತಮಣಕರ್‌ ತಿಳಿಸಿದ್ದಾರೆ.

ಬೀದಿನಾಯಿಗಳಿಗೆ ಆಹಾರ
ಜಿಲ್ಲೆಯಲ್ಲಿ ಸಾಕು ನಾಯಿಗಳನ್ನು ಬೀದಿಗೆ ಬಿಡುವ ಪ್ರಕರಣ ನಡೆದಿಲ್ಲ. ಬೀದಿನಾಯಿಗಳಿಗೂ ಆಹಾರ ಕೊಡುವ ವ್ಯವಸ್ಥೆ ಮಾಡಲಾಗಿದೆ.
-ಡಾ| ಹರೀಶ್‌ ತಮಣಕರ್‌, ಉಪನಿರ್ದೇಶಕರು, ಪಶುಸಂಗೋಪನ ಇಲಾಖೆ, ಉಡುಪಿ.

ಟಾಪ್ ನ್ಯೂಸ್

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Tiger

Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.