ಟ್ರಾಫಿಕ್‌ ನಿಯಮ ಉಲ್ಲಂಘನೆ : ಸವಾರರಿಗೆ ಹೊಸ ದರ ಬಿಸಿ; ಶೀಘ್ರ ಕಟ್ಟುನಿಟ್ಟು


Team Udayavani, Jul 3, 2019, 3:43 PM IST

04200107ASTRO10

ಉಡುಪಿ: ರಾಜ್ಯ ಸರಕಾರವು ರಸ್ತೆ ಸುರಕ್ಷೆಯ ದೃಷ್ಟಿಯಿಂದ ಸಂಚಾರ ನಿಯಮ ಉಲ್ಲಂ ಸುವವರ ಮೇಲೆ ಭಾರೀ ದಂಡ ವಿಧಿಸಲು ಆದೇಶಿಸಿದ್ದು, ನಿಧಾನಕ್ಕೆ ಅನುಷ್ಠಾನವಾಗುತ್ತಿದೆ. ಈ ನಡುವೆ ಪೊಲೀಸರು ನಿಯಮ ಮೀರು ವವರ ವಿರುದ್ಧ ಕಾರ್ಯಾಚರಣೆಯನ್ನು ಬಿಗಿಗೊಳಿಸಿದ್ದಾರೆ. ದಂಡದ ಪ್ರಮಾಣವನ್ನು 10ರಿಂದ 20 ಪಟ್ಟು ಹೆಚ್ಚಿಸು ವಂತೆ ಜೂ.25ರಂದು ರಾಜ್ಯ ಸರಕಾರ ಆದೇಶ ಹೊರಡಿ ಸಿದೆ. ರಾಜಧಾನಿಯ ಕೆಲವೆಡೆ ಜೂ.27ರಿಂದ ಜಾರಿಯಾಗಿದೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ದಿನಗಳಿಂದ ಹೊಸ ದರದ ಅನ್ವಯ ದಂಡ ವಿಧಿಸಲಾಗುತ್ತಿದೆ.

ಹೇಗಿದೆ ಹೊಸ ದರ?
ವಾಹನ ಚಾಲನೆ ಮಾಡುವಾಗ ಮೊಬೈಲ್‌ ಫೋನ್‌ ಬಳಸಿದರೆ ದಂಡದ ಮೊತ್ತ 1 ಸಾವಿರ ರೂ.ಗೆ ಏರಿಸಲಾಗಿದೆ. ಅನಂತರದಲ್ಲಿ ಎಷ್ಟೇ ಬಾರಿ ಸಿಕ್ಕಿ ಬಿದ್ದರೂ 2 ಸಾವಿರ ರೂ. ಕಕ್ಕಬೇಕು. ನೋ ಪಾರ್ಕಿಂಗ್‌ ಜಾಗದಲ್ಲಿ ವಾಹನ ನಿಲ್ಲಿಸಿದರೆ ಮತ್ತು ನಿಗದಿತ ವೇಗಮಿತಿ ಮೀರಿದರೆ ವಿಧಿಸುವ ದಂಡವನ್ನು 1,000 ರೂ.ಗೆ ಹೆಚ್ಚಿಸಲಾಗಿದೆ. ವಿಮೆ ರಹಿತ ವಾಹನ ಚಾಲನೆಗೂ ದಂಡ 1 ಸಾವಿರ ರೂ. ನೋಂದಣಿಯಾಗದ ವಾಹನ ಚಾಲನೆಗೆ ಮೊದಲ ಬಾರಿ 5 ಸಾವಿರ ರೂ. ಮತ್ತು ಅನಂತರದಲ್ಲಿ 10 ಸಾವಿರ ರೂ. ದಂಡ ವಿಧಿಸಲಾಗುತ್ತದೆ. ಫಿಟೆ°ಸ್‌ ಪ್ರಮಾಣಪತ್ರ ಇಲ್ಲದ ವಾಹನಗಳಿಗೆ ಮೊದಲ ಬಾರಿ 2 ಸಾವಿರ ರೂ. ಮತ್ತು ಅನಂತರದಲ್ಲಿ 5 ಸಾವಿರ ರೂ. ದಂಡ ವಿಧಿಸಲಾಗುತ್ತದೆ.

ಆದೇಶ ಬಂದಿದೆ
ಹೊಸದರ ಅನುಷ್ಠಾನಗೊಳಿಸುವಂತೆ ಈಗಾಗಲೇ ಆದೇಶ ಬಂದಿದೆ. ಆದರೆ ಎಲೆಕ್ಟ್ರಾನಿಕ್‌ ಡಿವೈಸ್‌ಗೆ ಹೊಸದರ ಅಪ್‌ಡೇಟ್‌ ಆಗಬೇಕಿದೆ. ಈ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಆದೇಶ ಕಟ್ಟುನಿಟ್ಟಾಗಿ ಜಾರಿಗೆ ಬರಲಿದೆ. – ನಿಶಾ ಜೇಮ್ಸ್‌
ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು

ಬೆಂಗಳೂರಿನಲ್ಲಿ ಮಾತ್ರ ಡಿವೈಸ್‌ ಅಪ್‌ಡೇಟ್‌
ಹೊಸ ದರವನ್ನು ಟ್ರಾಫಿಕ್‌ ಪೊಲೀಸರ ಡಿವೈಸ್‌ ಸಾಫ್ಟ್ ವೇರ್‌ಗೆ ಅಪ್‌ಡೇಟ್‌ ಬೆಂಗಳೂರಿನಲ್ಲಿ ಮಾತ್ರ ಮಾಡಲಾಗುತ್ತಿದೆ. ಎಲ್ಲ ಜಿಲ್ಲೆಯ ಡಿವೈಸ್‌ಗಳಿಗೆ ಇದನ್ನು ಅಳವಡಿಸಲು ಸಾಕಷ್ಟು ಸಮಯಾವಕಾಶ ಬೇಕು. ಉಭಯ ಜಿಲ್ಲೆಯಲ್ಲಿ ನೋಂದಾಯಿತ ಡಿವೈಸ್‌ ಅಪ್‌ಡೇಟ್‌ ಮಾಡುವ ಸೆಂಟರ್‌ಗಳನ್ನು ಗುರುತಿಸುವ ಕೆಲಸವೂ ನಡೆಯುತ್ತಿದೆ.
ಸರಕಾರದ ಅಧಿಸೂಚನೆ ತತ್‌ಕ್ಷಣದಿಂದ ಜಾರಿಗೊಳಿಸುವ ನಿಟ್ಟಿನಲ್ಲಿ ಬಂದ ಮಾಹಿತಿಯಂತೆ ಈಗಾಗಲೇ ಪೊಲೀಸ್‌ ಠಾಣೆಗಳಿಗೆ ಒದಗಿಸಿರುವ ಪಿಡಿಎ ಉಪಕರಣಗಳಲ್ಲಿ ಪರಿಷ್ಕೃತ ದರವನ್ನು ಅಡಕಗೊಳಿ ಸಲು ಸಂಬಂಧಪಟ್ಟ ಠಾಣಾಧಿ ಕಾರಿಗಳು ಕ್ರಮ ಕೈಗೊಳ್ಳುವಂತೆ ಮತ್ತು ಪಿಡಿಎ ಉಪಕರಣಗಳಲ್ಲಿ ಪರಿಷ್ಕೃತ ದರವನ್ನು ಅಡಕಗೊಳಿಸುವ ತನಕ ಹಳೆಯ ವಿಧಾನದ ಪ್ರಕಾರ ದಂಡ ವಸೂಲಾತಿ ಪುಸ್ತಕದಲ್ಲಿಯೇ ಪರಿಷ್ಕೃತ ದರದಲ್ಲಿಯೇ ಪ್ರಕರಣಗಳನ್ನು ಕಡ್ಡಾಯವಾಗಿ ದಾಖಲಿಸಲು ಸೂಚಿಸಲಾಗಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.