ಮಹಿಳಾ ಮತದಾರರ ಗಮನ ಸೆಳೆಯುತ್ತಿರುವ ಸಖೀ ಮತಗಟ್ಟೆಗಳು


Team Udayavani, Apr 18, 2019, 6:30 AM IST

sakhi

ಕಾಪು : ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ 121ನೇ ಕಾಪು ವಿಧಾನಸಭಾ ಕ್ಷೇತ್ರವು ಲೋಕಸಭಾ ಚುನಾವಣೆಗೆ ಸನ್ನದ್ಧವಾಗಿದ್ದು, ಕಾಪು ಕ್ಷೇತ್ರದಲ್ಲಿ ಮಹಿಳಾ ಮತದಾರರನ್ನು ವಿಶೇಷ ರೀತಿಯಲ್ಲಿ ಸ್ವಾಗತಿಸಲು 5 ಸಖೀ ಮತಗಟ್ಟೆಗಳು ಸಿದ್ಧವಾಗಿ ನಿಂತಿವೆ.

208 ಮತಗಟ್ಟೆಗಳನ್ನು ಹೊಂದಿರುವ ಕಾಪು ವಿಧಾನಸಭಾ ಕ್ಷೇತ್ರದ 1,84,246 ಮತದಾರರಲ್ಲಿ 96,486 ಮಹಿಳಾ ಮತದಾರರಿದ್ದಾರೆ. ಮಹಿಳೆಯರೇ ಅಧಿಕ ಸಂಖ್ಯೆಯಲ್ಲಿರುವ ಕಾಪು ಕ್ಷೇತ್ರದ 5 ಕಡೆಗಳಲ್ಲಿ ಸಖೀ ಮತಗಟ್ಟೆಗಳನ್ನು ತೆರೆಯಲಾಗಿದ್ದು, ಇಲ್ಲಿ ಸಂಪೂರ್ಣವಾಗಿ ಮಹಿಳಾ ಅಧಿಕಾರಿಗಳು ಮತ್ತು ಸಿಬಂದಿಗಳೇ ಕಾರ್ಯನಿರ್ವಹಿಸಲಿದ್ದಾರೆ.

ಎಲ್ಲೆಲ್ಲಿ ಸಖೀ ಮತಗಟ್ಟೆಗಳು
ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜು, ಉದ್ಯಾವರ ಸೈಂಟ್‌ ಫ್ರಾನ್ಸಿಸ್‌ ಸ್ಕೂಲ್‌, ಸೈಂಟ್‌ ಜೋನ್ಸ್‌ ಶಂಕರಪುರ – 1, ಸೈಂಟ್‌ ಜೋನ್ಸ್‌ ಶಂಕರಪುರ – 2 ಮತ್ತು ಕುರ್ಕಾಲು ಗ್ರಾಮ ಪಂಚಾಯತ್‌ನಲ್ಲಿ ಸಖೀ ಮತಗಟ್ಟೆಗಳಿವೆ.

ಪ್ರತೀ ಸಖೀ ಮತಗಟ್ಟೆಗಳಲ್ಲಿ ನಾಲ್ಕು ಮಂದಿ ಮಹಿಳಾ ಮತಗಟ್ಟೆ ಅಧಿಕಾರಿಗಳು ಇರಲಿದ್ದು, ಅವರೊಂದಿಗೆ ಮಹಿಳಾ ಪೊಲೀಸ್‌ ಸಿಬಂದಿಗಳು ಕೂಡಾ ಕಾರ್ಯನಿರ್ವಹಿಸಲಿದ್ದಾರೆ. ಹಿಂದಿನ ಚುನಾವಣೆಯ ಸಂದರ್ಭ ಅತೀ ಹೆಚ್ಚು ಮಹಿಳಾ ಮತದಾರರು ಮತದಾನ ಮಾಡಿರುವ ಮತಗಟ್ಟೆಗಳು ಮತ್ತು ಮಹಿಳಾ ಮತದಾರೇ ಹೆಚ್ಚಾಗಿರುವ ಮತಗಟ್ಟೆಗಳನ್ನು ಸಖೀ ಮತಗಟ್ಟೆಗಳೆಂದು ವಿಂಗಡಿಸಲಾಗುತ್ತದೆ.

ಸಖೀ ಮತಗಟ್ಟೆಗಳಲ್ಲಿ ಮಹಿಳೆಯರನ್ನು ಆಕರ್ಷಿಸಲು ವಿವಿಧ ರೀತಿಯ ಸೌಕರ್ಯಗಳನ್ನು ಜೋಡಿಸಲಾಗುತ್ತದೆ. ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯಗಳು, ಮೂಲಭೂತ ಅವಶ್ಯಕತೆಗಳ ಜೋಡಣೆ, ಕಿಡ್ಸ್‌ ಪಾರ್ಕ್‌ಗಳ ಸಹಿತ ವಿಶೇಷ ಆಕರ್ಷಣೀಯ ಕೇಂದ್ರವನ್ನಾಗಿ ಪರಿವರ್ತಿಸಿಡಲಾಗಿದೆ.

ಕಾಪು ಸಖೀ ಮತಗಟ್ಟೆ ಬಗ್ಗೆ ಮೆಚ್ಚುಗೆ
ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಖೀ ಮತಗಟ್ಟೆಯನ್ನು ಪುರಸಭೆಯ ಮುಖ್ಯಾಧಿಕಾರಿ ರಾಯಪ್ಪ ಅವರ ಮುತುವರ್ಜಿಯಲ್ಲಿ ವಿಶೇಷ ರೀತಿಯಲ್ಲಿ ಅಲಂಕರಿಸಲಾಗಿದೆ. ಇಲ್ಲಿನ ವ್ಯವಸ್ಥೆಯನ್ನು ವೀಕ್ಷಿಸಿದ ಉಡುಪಿ ಜಿ.ಪಂ. ಕಾರ್ಯ ನಿರ್ವಹಣಾಧಿಕಾರಿ ಸಿಂಧೂ ರೂಪೇಶ್‌, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನಿರ್ದೇಶಕಿ ಗ್ರೇಸಿ ಗೋನ್ಸಾಲ್ವಿಸ್‌ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.