Cattle;ಬೇಸಗೆ ಧಗೆ; ಜಾನುವಾರುಗಳಿಗೆ ಸುಸ್ತು-ಸಂಕಟ


Team Udayavani, Apr 14, 2023, 3:54 PM IST

cowಬೇಸಗೆ ಧಗೆ; ಜಾನುವಾರುಗಳಿಗೆ ಸುಸ್ತು-ಸಂಕಟ

ಉಡುಪಿ: ಚರ್ಮಗಂಟು ರೋಗ ಇಳಿಮುಖ ವಾಗಿದ್ದು ಹೈನುಗಾರರು ಚೇತರಿಸಿ ಕೊಳ್ಳುವಷ್ಟರಲ್ಲಿ ಬಿಸಿಲ ಬೇಗೆ ಇನ್ನಷ್ಟು ಸಮಸ್ಯೆ ತಂದೊಡ್ಡುತ್ತಿದೆ.

ಜಿಲ್ಲೆಯಲ್ಲಿ ಬೇಸಗೆ ಧಗೆ ಪ್ರತಿಕೂಲ ಹವಾಮಾನ ಪರಿಣಾಮ ಜಾನುವಾರುಗಳು ಸಂಕಟಪಡು ವಂತಾಗಿದೆ. ಬಹುತೇಕ ಹಸುಗಳು ಬೇಸಗೆ ಬಿಸಿಲಿನಿಂದ ಬಸವಳಿಯುತ್ತಿದ್ದು, ಅನಾರೋಗ್ಯದಿಂದ ವರ್ತಿಸುತ್ತಿದೆ. ಕೆಲವು ಹಸುಗಳು ಕುಳಿತಲ್ಲಿಯೇ ಇದ್ದು ಮೇಲೆ ಎದ್ದೇಳಲು, ಓಡಾಡಲು ಆಗುತ್ತಿಲ್ಲ, ಒಟ್ಟಾರೆ ಬಹುತೇಕ ಜಾನುವಾರುಗಳು ಬಿಸಿಲ ಪರಿಣಾಮ ಸುಸ್ತು ಸಂಕಟದಿಂದ ನರಳಾಡುತ್ತಿವೆ. ಬಿಸಿಲಿನ ತಾಪದಲ್ಲಿ ಜಾನುವಾರುಗಳ ಆರೋಗ್ಯ ರಕ್ಷಣೆಗೆ ಪಶು ಸಂಗೋಪನೆ ಇಲಾಖೆ ಹೈನು ಗಾರರಿಗೆ ಮಾರ್ಗಸೂಚಿ ಹೊರಡಿಸಿದೆ.

ಮುಂಜಾನೆ, ಸಾಯಂಕಾಲ ಮಾತ್ರ ಮೇಯಿಸಲು ಬಿಡಬೇಕು. ಮಧ್ಯಾಹ್ನ ಸಮಯದಲ್ಲಿ ಜಾನುವಾರುಗಳನ್ನು ಕೊಟ್ಟಿಗೆಯಲ್ಲಿ ಕಟ್ಟಬೇಕು. ರಾಸುಗಳಿಗೆ ಪೌಷ್ಟಿಕ ಆಹಾರ, ಹಸುರು ಹುಲ್ಲು ನೀಡಬೇಕು. ದೇಹದ ಉಷ್ಣತೆಯನ್ನು ಕಾಪಾಡಲು ಗೋಣಿಚೀಲವನ್ನು ನೀರಲ್ಲಿ ತೋಯಿಸಿ ಜಾನುವಾರುಗಳ ಮೈಮೇಲೆ ಹಾಕಬೇಕು ಎಂಬುದು ಪಶುವೈದ್ಯರ ಸಲಹೆಯಾಗಿದೆ.

ನಿರ್ಜಲೀಕರಣ ಸಮಸ್ಯೆ
ಬೇಸಗೆ ಅಧಿಕ ತಾಪಮಾನ ದಿಂದ ಮನುಷ್ಯರಂತೆ ಜಾನು ವಾರುಗಳಲ್ಲಿಯೂ ನಿರ್ಜಲೀಕರಣ ಸಮಸ್ಯೆ ಸಂಭವಿಸುತ್ತದೆ. ಇದರಿಂದ ದೇಹದಲ್ಲಿ ನೀರಿನ ಅಂಶ ಕಡಿಮೆಯಾಗಿ ತೀವ್ರ ಸುಸ್ತು ಅನುಭವಿಸುತ್ತವೆ. ದಿನಕ್ಕೆ 2ರಿಂದ 3 ಸಲ ಶುದ್ಧವಾದ ನೀರನ್ನು ಕುಡಿಸಬೇಕು. ಬಿಸಿಲಿನಲ್ಲಿ ಜಾಸ್ತಿ ಓಡಾಡಲು ಬಿಡಬಾರದು. ದಿನಕ್ಕೆ ಒಂದರಿಂದ ಎರಡು ಸಲ ಮೈ ತೊಳೆಯಬೇಕು ಎಂದು ಪಶುವೈದ್ಯರು ಸಲಹೆ ನೀಡಿದ್ದಾರೆ.

ಚರ್ಮಗಂಟು ರೋಗ ಶೂನ್ಯಕ್ಕೆ ಇಳಿಕೆ
ಪ್ರಸ್ತುತ ಜಿಲ್ಲೆಯಲ್ಲಿ ಚರ್ಮಗಂಟು ರೋಗ ಶೂನ್ಯಕ್ಕೆ ತಲುಪಿದ್ದು ಹೈನುಗಾರರು ನಿಟ್ಟುಸಿರು ಬಿಡುವಂತಾಗಿದೆ. ವೈದ್ಯರು, ಸಿಬಂದಿ ಕೊರತೆ ನಡುವೆಯೂ ಜಿಲ್ಲೆಯಲ್ಲಿ 2.27 ಲಕ್ಷ ಜಾನುವಾರುಗಳಿಗೆ ಬೃಹತ್‌ ಲಸಿಕೆ ಪ್ರಕ್ರಿಯೆ ಪೂರ್ಣಗೊಳಿಸಿ ಶೇ.89 ಗುರಿ ಸಾಧಿಸಲಾಗಿದೆ. ಪರಿಣಾಮ ಚರ್ಮಗಂಟು ರೋಗದ ಆತಂಕ ದೂರವಾಗಿದೆ. ರೋಗದಿಂದ 91 ಹಸು, ಕರುಗಳು ಮೃತಪಟ್ಟಿವೆ. ಜಿಲ್ಲೆಯಲ್ಲಿ 6,375 ಜಾನುವಾರುಗಳಿಗೆ ರೋಗ ಬಾಧಿಸಿದ್ದು, 6,218 ಜಾನುವಾರುಗಳು ಗುಣಮುಖ ಹೊಂದಿದೆ. ಜಿಲ್ಲೆಯಲ್ಲಿ 20,018 ಲಸಿಕೆ ದಾಸ್ತಾನು ಇರಿಸಲಾಗಿದೆ.

ಆತಂಕ ಪಡುವ ಅಗತ್ಯವಿಲ್ಲ
ಬಿಸಿಲ ತಾಪಕ್ಕೆ ಕೆಲವು ಜಾನುವಾರುಗಳಲ್ಲಿ ಸುಸ್ತು, ಬಸವಳಿಯುವ ಲಕ್ಷಣ ಕಂಡು ಬರುತ್ತದೆ. ಜಿಲ್ಲೆಯಲ್ಲಿ ಗಂಭೀರ ಸಮಸ್ಯೆ ಎದುರಾಗಿಲ್ಲ. ನೆರಳು ವಾತಾವರಣದಲ್ಲಿ ಜಾನುವಾರುಗಳನ್ನು ಬಿಡಬೇಕು, ಶುದ್ಧನೀರು ಕುಡಿಸಬೇಕು. ಅವುಗಳ ಆಹಾರ ಕ್ರಮದ ಬಗ್ಗೆಯೂ ನಿಗಾ ವಹಿಸಬೇಕು. ಬಿಸಿಲಿನ ತಾಪದಲ್ಲಿ ಜಾನುವಾರುಗಳ ಆರೋಗ್ಯ ರಕ್ಷಣೆಗೆ ಇಲಾಖೆ ನೀಡಿರುವ ಸಲಹೆಗಳನ್ನು ಪಾಲಿಸಬೇಕು. ಜಿಲ್ಲೆಯಲ್ಲಿ ಜಾನುವಾರುಗಳಿಗೆ ಕುಡಿಯುವ ನೀರು, ಮೇವಿಗೆ ಸಮಸ್ಯೆ ಇಲ್ಲ. ಚರ್ಮಗಂಟು ರೋಗ ಶೂನ್ಯಕ್ಕೆ ಇಳಿದಿದೆ.
– ಡಾ| ಶಂಕರ್‌ ಶೆಟ್ಟಿ, ಉಪ ನಿರ್ದೇಶಕ, ಪಶು ಸಂಗೋಪನೆ ಇಲಾಖೆ

– ಅವಿನ್‌ ಶೆಟ್ಟಿ

ಟಾಪ್ ನ್ಯೂಸ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.