ಲಂಚಕ್ಕೆ ಬೇಡಿಕೆ ಇಟ್ಟರೆ ಅಮಾನತು
Team Udayavani, Aug 24, 2020, 10:46 PM IST
ಉಡುಪಿ: ಕೋವಿಡ್-19 ವಿಚಾರದಲ್ಲಿ ಯಾವುದೇ ಅಧಿಕಾರಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರೆ ಅಥವಾ ಸೀಲ್ಡೌನ್ ತೆಗೆಯಲು ಹಣ ಪಡೆದಿದ್ದರೆ ಜಿಲ್ಲೆಯಲ್ಲಿರುವ ಐದು ಮಂದಿ ಶಾಸಕರಿಗೆ ಮಾಹಿತಿ ನೀಡಿ. ಎಷ್ಟೇ ದೊಡ್ಡ ಅಧಿಕಾರಿಯಾಗಿದ್ದರೂ ಅವರನ್ನು 24 ಗಂಟೆಯೊಳಗೆ ಅಮಾನತು ಮಾಡಲಾಗುವುದು ಎಂದು ಶಾಸಕ ರಘುಪತಿ ಭಟ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಕೋವಿಡ್ ಪರಿಕ್ಷೆಯಲ್ಲಿ ಭಾರೀ ಗೋಲ್ಮಾಲ್ ಆಗುತ್ತಿದೆ. ಹಣ ಮಾಡಲು ಕೋವಿಡ್ ಸಂಖ್ಯೆ ಹೆಚ್ಚಿಸುತ್ತಿದ್ದಾರೆ ಎಂಬ ಸಂಶಯಗಳು ಜನರಲ್ಲಿವೆ. ಈ ಮೂಲಕ ಅಪಪ್ರಚಾರ ಮಾಡಲಾಗುತ್ತಿದೆ. ಕೋವಿಡ್ ವಿಚಾರದಲ್ಲಿ ಯಾರಿಗೂ ಯಾವುದೇ ಕಮಿಷನ್ ಸಿಗುವುದಿಲ್ಲ. ಜನರು ವದಂತಿಗಳಿಗೆ ಕಿವಿಗೊಡಬಾರದು ಎಂದರು.
ದಾಖಲೆ ನೀಡಿ
ಕೊರೊನಾ ಪರೀಕ್ಷೆ ಹೆಚ್ಚಳದಿಂದ ಪಾಸಿಟಿವ್ ಇದ್ದವರ ಸೋಂಕು ಮತ್ತಷ್ಟು ಜನರಿಗೆ ಹಬ್ಬುವುದು ತಪ್ಪುತ್ತದೆ. ಸಾಮಾಜಿಕ ಜಾಲತಾಣಗಳಲ್ಲಿ ಕೊರೊನಾ ದಂಧೆ ವಿಚಾರ ಸತ್ಯಕ್ಕೆ ದೂರವಾದುದು. ಕೊರೊನಾ ವಿಚಾರದಲ್ಲಿ ಭ್ರಷ್ಟಾಚಾರ ನಿಜವಾಗಿದ್ದರೆ ಸೂಕ್ತ ದಾಖಲೆಗಳನ್ನು ಸಂಬಂಧಪಟ್ಟವರಿಗೆ ನೀಡಿ ತನಿಖೆಗೆ ಒತ್ತಾಯಿಸಬಹುದು. ಆರೋಗ್ಯಇಲಾಖೆಯ ಸಿಬಂದಿ ಕಳೆದ 6 ತಿಂಗಳಿನಿಂದ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ವಿನಾಕಾರಣ ಆರೋಪದಿಂದ ಅವರ ಮಾನಸಿಕ ಸ್ಥೈರ್ಯಕ್ಕೆ ಧಕ್ಕೆ ತಂದಂತಾಗುತ್ತದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ