ಪಡುತೋನ್ಸೆ, ಕೋಡಿಬೆಂಗ್ರೆಯ ಸ್ವರ್ಣಾ ನದಿಯಲ್ಲಿ  ತೇಲಲಿದೆ ದೋಣಿ ಮನೆ


Team Udayavani, Apr 3, 2017, 7:28 PM IST

02-UDUPI-2.jpg

ಮಲ್ಪೆ: ಕೇರಳ ಮಾದರಿಯ ಬೋಟ್‌ ಹೌಸ್‌ ಇನ್ನು ಮುಂದೆ ಕೋಡಿಬೆಂಗ್ರೆ ಸ್ವರ್ಣಾ ನದಿಯಲ್ಲೂ ತೇಲಲಿದೆ. ಇದೀಗ ದೇಶ ವಿದೇಶದ ಪ್ರವಾಸಿಗರಿಗಾಗಿ ಉಡುಪಿ ಜಿಲ್ಲೆಯ ಪಡುತೋನ್ಸೆ, ಕೋಡಿಬೆಂಗ್ರೆ ಸ್ವರ್ಣ ನದಿಯಲ್ಲಿ ಪಾಂಚಜನ್ಯ ಕ್ರೂಸ್‌ನ ಬೋಟ್‌ ಹೌಸ್‌ ಆರಂಭಗೊಳ್ಳಲಿದ್ದು ಎ. 8 ರಿಂದ ಸಾರ್ವಜನಿಕವಾಗಿ ತೆರೆದುಕೊಳ್ಳಲಿದೆ.

ಐಷಾರಾಮಿ ಮನೆ
35ರಿಂದ 40 ಮಂದಿಯ ಸಾಮರ್ಥ್ಯವನ್ನು ಹೊಂದಿರುವ ಈ ಅತ್ಯಾಧುನಿಕ ಶೈಲಿಯಲ್ಲಿ ವಿನ್ಯಾಸಗೊಳಿಸಿದ ದೋಣಿ ಮನೆಯಲ್ಲಿ ಒಂದು ಹವಾನಿಯಂತ್ರಿತ ಬೆಡ್‌ರೂಂ, ಬೆಡ್‌ರೂಂ ಅಟ್ಯಾಚ್‌ಡ್‌ ಮತ್ತು ಪ್ರತ್ಯೇಕ ಬಾತ್‌ರೂಂ, ಅಡುಗೆ ಕೋಣೆ, ಆಕರ್ಷಕ ಲಿವಿಂಗ್‌ರೂಮ್‌, ವರ್ಕ್‌ಶಾಪ್‌, ಸಣ್ಣ ಪಾರ್ಟಿ ಆಯೋಜನೆ ಮಾಡಲು ಸ್ಥಳಾವಕಾಶವನ್ನು ಹೊಂದಿದೆ. ಸುಂದರ ಪರಿಸರದ ದೃಶ್ಯವನ್ನು ನೋಡಲು ಬಾಲ್ಕನಿ ಇದ್ದು ಆಧುನಿಕ ಸೌಲಭ್ಯಗಳ ಎಲ್ಲಾ ಅನುಕೂಲತೆಯನ್ನು ಹೊಂದಿದೆ. ಅಡುಗೆ ತಯಾರು ಮಾಡಲು ಒಬ್ಬ ಅಡುಗೆಯವನು, ಒಬ್ಬ ಸಹಾಯಕ, ವೈಟರ್‌, ದೋಣಿ ನಿಯಂತ್ರಕ ಮತ್ತು ಪ್ರವಾಸಿಗರ ಸುರಕ್ಷತೆಗೆ ನುರಿತ ಈಜು ತಜ್ಞರನ್ನು ಬೋಟಿನಲ್ಲಿ ಇರಿಸಲಾಗಿದ್ದು ಒಟ್ಟು 5 ಮಂದಿ ಬೋಟಿನಲ್ಲಿ ಖಾಯಂ ಆಗಿ ಇರುತ್ತಾರೆ.

3 ವಿಭಾಗದಲ್ಲಿ ಯಾನ
ಕ್ರೂಸಿಂಗ್‌ ದರ ರೂ. 12 ಸಾವಿರ ನಿಗದಿ ಪಡಿಸಲಾಗಿದ್ದು, ಬೆಳಗ್ಗೆ 11 ರಿಂದ ಸಂಜೆ 4 ರವರೆಗೆ, ಸಂಜೆ 5 ರಿಂದ  ರಾತ್ರಿ 9 ಗಂಟೆ ಮತ್ತು  ರಾತ್ರಿ 9 ರಿಂದ ಬೆಳಗ್ಗೆ 9 ಗಂಟೆಯ ವರೆಗೆ ಒಟ್ಟು ಮೂರು ವಿಭಾಗದಲ್ಲಿ ಕ್ರೂಸಿಂಗ್‌ ನಡೆಸಲಾಗುತ್ತದೆ. ಬೆಳಗ್ಗಿನ ಕ್ರೂಸಿಂಗ್‌ನಲ್ಲಿ ಆರು ಮಂದಿ, ಸಂಜೆಯ ಪ್ಯಾಕೇಜ್‌ನಲ್ಲಿ 4 ಮಂದಿಗೆ ಮತ್ತು ರಾತ್ರಿಯಲ್ಲಿ  ಮಗು ಸೇರಿ ಮೂರು ಮಂದಿಗೆ ಅವಕಾಶ ನೀಡಲಾಗುತ್ತದೆ. ಹೆಚ್ಚು ಜನ ಇದ್ದಲ್ಲಿ  ಒಬ್ಬರಿಗೆ ತಲಾ 1 ಸಾವಿರದಂತೆ ಹೆಚ್ಚುವರಿ ನೀಡಬೇಕಾಗುತ್ತದೆ ಎಂದು ಬೋಟ್‌ ಹೌಸ್‌ ಮಾಲಕರು ತಿಳಿಸಿದ್ದಾರೆ.

ಊಟದ ಮೆನು
ಕೊಚ್ಚಿಗೆ ಅಥವಾ ಬೆಳ್ತಿಗೆ ಅನ್ನ,  ದಾಲ್‌, ರಸಂ, ಪಲ್ಯ, ಚಪಾತಿ, ಕೋರಿ ರೋಟ್ಟಿ, ಮೀನು ಅಥವಾ ಚಿಕನ್‌ ಸುಕ್ಕ ಇದ್ದು, ದೋಣಿ ಒಳಗೆ ಪ್ರವೇಶಸಿದಾಗಲೇ ವೆಲ್‌ಕಂ ಜ್ಯೂಸ್‌, ಸ್ಥಳೀಯ ತಿನಸು ಮತ್ತು ಕಾಫಿ, ಟೀ ನೀಡಲಾಗುತ್ತದೆ. ಇದಲ್ಲದೆ ಪ್ರವಾಸಿಗರು ಬಯಸಿದ ಆಹಾರ ಪದಾರ್ಥಗಳನ್ನು ಮಾಡಿಕೊಡಲಾಗುತ್ತದೆ ಆದರೆ ಹೆಚ್ಚುವರಿ ದರವನ್ನು ನೀಡಬೇಕು. ಬೋಟ್‌ನಲ್ಲಿಯೇ ರಾತ್ರಿಯನ್ನು ಕಳೆಯ ಬೇಕೆನಿಸಿದವರಿಗೆ ಮಂದ ಬೆಳಕಿನ ವ್ಯವಸ್ಥೆಯನ್ನು ಹೊಂದಿದೆ. ಪ್ರವಾಸಿಗರಿಗೆ ಸ್ವರ್ಣ ನದಿಯಲ್ಲಿ 8 ರಿಂದ 10 ಕಿ.ಮೀ ದೂರ ಸುತ್ತಾಡಬಹುದಾಗಿದೆ.

ಬೋಟ್‌ ಹೌಸ್‌ನ ಒಟ್ಟು ಉದ್ದ 73 ಅಡಿ, ಅಗಲ 15 ಅಡಿಯನ್ನು ಹೊಂದಿದೆ. ಕಬ್ಬಿಣ ದೋಣಿಯ ಮೇಲೆ ಸಂಪೂರ್ಣ ಮರದಿಂದ ಮನೆಯನ್ನು ಕಲಾತ್ಮಕವಾಗಿ ರಚಿಸಲಾಗಿದೆ. 40 ಅಶ್ವಶಕ್ತಿಯ ಇಂಜಿನ್‌ ಅಳವಡಿಸಲಾಗಿದೆ. ದೋಣಿ ಪಯಣ ಕೇವಲ ಪ್ರವಾಸಿಗರಿಗೆ ಮಾತ್ರವಲ್ಲ ಸ್ಥಳೀಯರಿಗೂ ನಿಜವಾಗಿಯೂ ಇದೊಂದು ಅದ್ಭುತ ಮತ್ತು ಮರೆಯಲಾಗದ ಅನುಭವ. ತೇಲುವ ಮನೆಯಲ್ಲಿ ಒಂದು ಇಡೀ ದಿನ ಕಳೆಯುವುದು ಅವಿಸ್ಮರಣೀಯ ಅನುಭವ. ಇದು ಹೆಚ್ಚು ಹೆಚ್ಚು ಪ್ರವಾಸಿಗರನ್ನು ಆಕರ್ಷಿಸಿ ತನ್ನಡೆಗೆ ಸೆಳೆಯುವ, ಪ್ರವಾಸೋದ್ಯಮಕ್ಕೆ ಹೊಸ ಆಯಾಮವನ್ನು ದೊರಕಿಸಿಕೊಡಲಿದೆ.

ಪ್ರವಾಸೋದ್ಯಮ ಇಲಾಖೆ, ಸ್ಥಳೀಯ ಪಂಚಾಯತ್‌ನಿಂದ ಈಗಾಗಲೇ ಅನುಮತಿ.  ಕೇರಳಕ್ಕಿಂತ ಇಲ್ಲಿ ಸುತ್ತ ಹಸಿರಿನ ಪರಿಸರ, ಸುಂದರ ನದಿಯನ್ನು ಹೊಂದಿದೆ. ಅಲ್ಲಿಲ್ಲಿ ಕುದ್ರು ಗಳಿದ್ದು ನೋಡಲು ಇನ್ನಷ್ಟು ಆಕರ್ಷಣೀಯವಾಗಿದೆ. ಕರಾವಳಿಯಲ್ಲಿ ಪಾರ್ಟಿ ಮಾಡಿ ಸಂಭ್ರಮಿಸುವವರು ಜಾಸ್ತಿ. ಅವರಿಗಾಗಿಯೇ ಹೆಚ್ಚು ವ್ಯವಸ್ಥೆಯನ್ನು ಮಾಡಲಾಗಿದೆ. ಮುಂದೆ ಹೆಚ್ಚು ಬೇಡಿಕೆ ಇದ್ದಲ್ಲಿ ಹೆಚ್ಚುವರಿ ದೋಣಿ ಮನೆಯನ್ನು ವ್ಯವಸ್ಥೆಗೊಳಿಸುವಲ್ಲಿ ಪ್ರಯತ್ನಿಸಲಾಗುವುದು.
ಸುಜಾತಾ ಕಾಮತ್‌, ಬೋಟ್‌ಹೌಸ್‌ ಮಾಲಕರು

ನಟರಾಜ್‌ ಮಲ್ಪೆ

ಟಾಪ್ ನ್ಯೂಸ್

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ ಅಡಿಗೆ ಸಿಲುಕಿದ ಬೈಕ್; ಯಕ್ಷಗಾನ ಕಲಾವಿದ ಸ್ಥಳದಲ್ಲೇ ಮೃತ್ಯು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.