ಸಿಂಡಿಕೇಟ್‌ ಬ್ಯಾಂಕ್‌ ಸ್ಥಾಪನಾ ದಿನ: ಸಾಧಕರಿಗೆ ಸಮ್ಮಾನ


Team Udayavani, Nov 1, 2018, 12:36 PM IST

1-november-8.gif

ಉಡುಪಿ: ಸಿಂಡಿಕೇಟ್‌ ಬ್ಯಾಂಕ್‌ ಸ್ಥಾಪಕರಾದ ಡಾ|ಟಿಎಂಎ ಪೈ, ಉಪೇಂದ್ರ ಪೈ, ವಿ.ಎಸ್‌.ಕುಡ್ವ ಅವರ ಆದರ್ಶಗಳನ್ನು ಪಾಲಿಸಿಕೊಂಡು ಬರಬೇಕೆಂದು ಮಣಿಪಾಲದ ಸಿಂಡಿಕೇಟ್‌ ಬ್ಯಾಂಕ್‌ ಗೋಲ್ಡನ್‌ ಜುಬಿಲಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಿಂಡಿಕೇಟ್‌ ಬ್ಯಾಂಕ್‌ನ 93ನೆಯ ಸ್ಥಾಪನಾ ದಿನಾಚರಣೆಯಲ್ಲಿ ಪಾಲ್ಗೊಂಡ ಗಣ್ಯರು, ಸಾಧಕರು ಅಭಿಪ್ರಾಯಪಟ್ಟರು.

ಸ್ಥಾಪಕರ ಕುಟುಂಬದ ಸದಸ್ಯರಾದ ಟಿ.ಸತೀಶ್‌ ಯು. ಪೈ, ಟಿ. ನಾರಾಯಣ ಪೈ, ಟಿ.ಅಶೋಕ್‌ ಪೈ, ಗಾಯತ್ರಿ ಪೈ, , ವಸಂತಿ ಆರ್‌. ಶೆಣೈ, ವನಿತಾ ಜಿ. ಪೈ, ಬ್ಯಾಂಕ್‌ನ ಮಾಜಿ ಅಧ್ಯಕ್ಷ ಡಾ|ಎನ್‌.ಕೆ.ತಿಂಗಳಾಯ ಅವರನ್ನು ಸಮ್ಮಾನಿಸಲಾಯಿತು.  ಹಿರಿಯ ಗ್ರಾಹಕರಾದ ಡಾ|ಜಿ.ಎಸ್‌.ಚಂದ್ರಶೇಖರ್‌, ವಿಮಲಾ ಚಂದ್ರಶೇಖರ್‌, ಬ್ರಹ್ಮಾವರದ ಬಿ. ಗೋಕುಲದಾಸ ಪೈ, ಶ್ರೀಧರ ಹಂದೆ, ಕಾರ್ಕಳದ ಪ್ರೊ|ಎಂ. ರಾಮಚಂದ್ರ ದಂಪತಿ, ಮಂಜುನಾಥ ಮಲ್ಯರನ್ನು ಸಮ್ಮಾನಿಸಲಾಯಿತು.

ಡಾ|ಎನ್‌.ಕೆ.ತಿಂಗಳಾಯ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಬ್ಯಾಂಕ್‌ನ ಮಹಾಪ್ರಬಂಧಕ ಭಾಸ್ಕರ ಹಂದೆ ಅಧ್ಯಕ್ಷತೆ ವಹಿಸಿದ್ದರು. ಡಿಜಿಎಂಗಳಾದ ಎಸ್‌.ಇ. ನಟರಾಜ್‌, ಡಾ| ಸ್ವಾಮಿನಾಥನ್‌, ಬಿ.ಆರ್‌.ಹಿರೇಮಠ್, ಪ್ರವೀಣ್‌ ಭಟ್‌, ಪ್ರಸಾದ್‌, ಕೆ.ಕಾಂತಕುಮಾರನ್‌, ಎಸ್‌. ಶಂಕರ್‌, ಶಿವದಾಸನ್‌ ಮತ್ತಿತರರು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ತಮ್ಮ ತಂದೆಯವರು ಮಣಿಪಾಲದ ಸಂಸ್ಥೆಗಳೊಂದಿಗೆ ಇದ್ದ ಸಂಬಂಧವನ್ನು ಸ್ಮರಿಸಿಕೊಂಡ ಗೋಕುಲದಾಸ ಪೈಯವರು, ಡಾ|ಟಿಎಂಎ ಪೈಯವರು ಮಣಿಪಾಲವನ್ನು ಬೆಳೆಸಿದ ಕ್ರಮದ ಬಗೆಯನ್ನು ವಿವರಿಸಿದರು. ತಮ್ಮ ತಂದೆಗೂ ಡಾ|ಪೈಯವರಿಗೂ ಆಗುತ್ತಿದ್ದ ಚರ್ಚೆಯನ್ನು ಅವರು ಉದಾಹರಿಸಿದರು. ಒಂದು ರೂ.ಗಳನ್ನು ಡಬ್ಬಿಗೆ ಹಾಕಿಟ್ಟರೆ ಹತ್ತು ವರ್ಷದ ಅನಂತರವೂ ಒಂದೇ ರೂ. ಇರುತ್ತದೆ. ಆದರೆ ಬ್ಯಾಂಕ್‌ ನಲ್ಲಿರಿಸಿದರೆ ಅದು ಹೆಚ್ಚಿಗೆಯಾಗುತ್ತದೆ. ಹೀಗಾಗಿ ಜನರು ಪಿಗ್ಮಿ ಠೇವಣಿಯನ್ನು ಆರಂಭಿಸಿ ಉಳಿತಾಯ ಮಾಡಬೇಕು ಎಂದು ಡಾ|ಪೈಯವರು ಕರೆ ನೀಡಿದ್ದರು ಎಂದು ಗೋಕುಲದಾಸ ಪೈಯವರು ಹೇಳಿದರು.

ನಿವೃತ್ತ ಪ್ರಾಧ್ಯಾಪಕ ಪ್ರೊ|ಎಂ.ರಾಮಚಂದ್ರ ಅವರು ಮಾತನಾಡಿ ತಾನು ಭುವನೇಂದ್ರ ಕಾಲೇಜಿಗೆ ಸೇರುವ ಕಾಲದಿಂದ ಹಿಡಿದು ಕೊನೆಯವರೆಗೂ ಡಾ|ಟಿಎಂಎ ಪೈಯವರೊಂದಿಗೆ ಇದ್ದ ಒಡನಾಟವನ್ನು ಸ್ಮರಿಸಿಕೊಂಡರು. ಅನಂತರವೂ ಮಣಿಪಾಲದ ಪೈ ಬಂಧುಗಳ ಜತೆಗೆ ಹೊಂದಿದ್ದ ಆತ್ಮೀಯ ಸಂಬಂಧವನ್ನು ಸ್ಮರಿಸಿ ಸಮ್ಮಾನಕ್ಕಾಗಿ ಕೃತಜ್ಞತೆ ಸಲ್ಲಿಸಿದರು.

ಗ್ರಾಹಕರಾದ ಡಾ|ಜಿ.ಎಸ್‌.ಚಂದ್ರಶೇಖರ್‌, ವಿಮಲಾ ಚಂದ್ರಶೇಖರ್‌, ಬ್ರಹ್ಮಾವರದ ಗೋಕುಲದಾಸ ಪೈ, ಶ್ರೀಧರ ಹಂದೆ, ಕಾರ್ಕಳದ ಪ್ರೊ|ಎಂ. ರಾಮಚಂದ್ರ ದಂಪತಿ, ಮಂಜುನಾಥ ಮಲ್ಯರನ್ನು ಸಮ್ಮಾನಿಸಲಾಯಿತು.

ಟಾಪ್ ನ್ಯೂಸ್

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Fraud Case ಟರಿಂಗ್‌ ವ್ಯವಹಾರದ ಕಮಿಷನ್‌ ಹೆಸರಲ್ಲಿ ವಂಚನೆ

Fraud Case ಕ್ಯಾಟರಿಂಗ್‌ ವ್ಯವಹಾರದ ಕಮಿಷನ್‌ ಹೆಸರಲ್ಲಿ ವಂಚನೆ

Udupi 36 ವರ್ಷಗಳ ಹಿಂದಿನ ಆರೋಪಿ ಬಂಧನ

Udupi 36 ವರ್ಷಗಳ ಹಿಂದಿನ ಆರೋಪಿ ಬಂಧನ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Screenshot (2)

Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್‌. ರೈ

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.