ಮೊಬೈಲ್‌ ಸೌಲಭ್ಯ ಇಲ್ಲದ ವಿದ್ಯಾರ್ಥಿಗಳಿಗೆ ಶಿಕ್ಷಕರಿಂದ ಪಾಠ; ವಿದ್ಯಾಗಮ ಯೋಜನೆಯಡಿ ಸರ್ವೇ


Team Udayavani, Aug 13, 2020, 6:05 AM IST

ಮೊಬೈಲ್‌ ಸೌಲಭ್ಯ ಇಲ್ಲದ ವಿದ್ಯಾರ್ಥಿಗಳಿಗೆ ಶಿಕ್ಷಕರಿಂದ ಪಾಠ; ವಿದ್ಯಾಗಮ ಯೋಜನೆಯಡಿ ಸರ್ವೇ

ಸಾಂದರ್ಭಿಕ ಚಿತ್ರ

ಉಡುಪಿ/ಮಂಗಳೂರು: ವಿದ್ಯಾಗಮ ಯೋಜನೆಯಡಿಯಲ್ಲಿ 1-10ನೇ ತರಗತಿ ವಿದ್ಯಾರ್ಥಿಗಳಿಗೆ ಆನ್‌ಲೈನ್‌/ಆಫ್‌ಲೈನ್‌ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ದ.ಕ. ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ಸರ್ವೇ ಕಾರ್ಯ ಆರಂಭವಾಗಿದೆ. ಸ್ಮಾರ್ಟ್‌ಫೋನ್‌ ಹೊಂದಿರುವ, ನೆಟ್‌ವರ್ಕ್‌ ಸಮಸ್ಯೆ ಇರುವ ಮತ್ತು ಮೊಬೈಲ್‌ ಸೌಲಭ್ಯವೇ ಇಲ್ಲದಿರುವ ವಿದ್ಯಾರ್ಥಿಗಳ ಮಾಹಿತಿ ಕಲೆ ಹಾಕುವ ಕೆಲಸ ಇಲಾಖೆಯಿಂದ ನಡೆಯುತ್ತಿದೆ. ಉಡುಪಿ ಜಿಲ್ಲೆಯಲ್ಲಿ ಸರ್ವೇ ಕೆಲಸ ಮುಕ್ತಾಯಗೊಂಡು ಮನೆ ಪಾಠ ಆರಂಭಗೊಂಡಿದೆ.

ಕೊರೊನಾದಿಂದ ಇನ್ನೂ ಶಾಲೆಗಳು ಆರಂಭವಾಗದ ಕಾರಣ ವಿದ್ಯಾರ್ಥಿಗಳ ಕಲಿಕೆಗೆ ಹಿನ್ನಡೆಯಾಗಬಾರದೆಂಬ ಉದ್ದೇಶದಿಂದ ಸರಕಾರ ವಿದ್ಯಾಗಮ ಯೋಜನೆಯನ್ನು ಘೋಷಿಸಿದೆ. ಇದರಡಿ ಶಾಲಾರಂಭದವರೆಗೆ ಆನ್‌ಲೈನ್‌ ಮತ್ತು ಆಫ್‌ಲೈನ್‌ ಕಲಿಕೆಗೆ ಒತ್ತು ನೀಡುವುದು ಸರಕಾರದ ಉದ್ದೇಶವಾಗಿದೆ.

ಮೂರು ವಿಭಾಗ
ಸರ್ವೇಯಡಿ ಪಡೆದ ಸಂಖ್ಯೆಯನುಸಾರ ವಿದ್ಯಾರ್ಥಿಗಳನ್ನು ಇಂಟೆಲಿಜೆಂಟ್‌, ಬ್ರಿಲಿಯೆಂಟ್‌ ಮತ್ತು ಜೀನಿಯಸ್‌ ಎಂಬ ಮೂರು ವಿಭಾಗಗಳಾಗಿ ಪ್ರತ್ಯೇಕಿಸಲಾಗುತ್ತದೆ. ಸ್ಮಾರ್ಟ್‌ಫೋನ್‌ ಮತ್ತು ಇಂಟರ್ನೆಟ್‌ ಸೌಲಭ್ಯ ಹೊಂದಿರುವ ವಿದ್ಯಾರ್ಥಿಗಳು -ಇಂಟೆಲಿಜೆಂಟ್‌, ಕೀಪ್ಯಾಡ್‌ ಮೊಬೈಲ್‌ ಹೊಂದಿರುವವರು -ಬ್ರಿಲಿಯೆಂಟ್‌ ಮತ್ತು ಫೋನ್‌, ಇಂಟರ್ನೆಟ್‌ ಇಲ್ಲದವರು – ಜೀನಿಯಸ್‌ ವಿಭಾಗ ದಡಿ ಬರುತ್ತಾರೆ. ಬ್ರಿಲಿಯೆಂಟ್‌ ಮತ್ತು ಜೀನಿಯಸ್‌ ವಿಭಾಗದಡಿ ಬರುವ ಮಕ್ಕಳಿಗೆ ಶಿಕ್ಷಕರೇ ನೇರವಾಗಿ ಪಾಠ ಮಾಡಬೇಕಾಗುತ್ತದೆ.

ಶಿಕ್ಷಕರಿಗೆ ವಿದ್ಯಾರ್ಥಿಗಳ ಹಂಚಿಕೆ
ದ.ಕ. ಜಿಲ್ಲೆಯಲ್ಲಿ ಸರಕಾರಿ, ಅನುದಾನಿತ, ಅನುದಾನರಹಿತ ಶಾಲೆಗಳಲ್ಲಿ ಒಟ್ಟು 3,22,426 ವಿದ್ಯಾರ್ಥಿಗಳು 1-10ನೇ ತರಗತಿ ವ್ಯಾಸಂಗ ಮಾಡುತ್ತಿದ್ದಾರೆ. ಬಹುತೇಕ ಗ್ರಾಮೀಣ ಭಾಗದವರೇ ಆಗಿರುವುದರಿಂದ ಸ್ಮಾರ್ಟ್‌ಫೋನ್‌ನಂತಹ ಸೌಲಭ್ಯಗಳನ್ನು ಬಹುತೇಕ ವಿದ್ಯಾರ್ಥಿಗಳ ಹೆತ್ತವರು ಹೊಂದಿಲ್ಲ. ಮೊಬೈಲ್‌ ಇದ್ದರೂ ನೆಟ್‌ವರ್ಕ್‌ ಸಮಸ್ಯೆ ಇರುತ್ತದೆ. ಇಂತಹ ವಿದ್ಯಾರ್ಥಿಗಳನ್ನು ವಿಭಾಗಿಸಿ ಓರ್ವ ಶಿಕ್ಷಕನಿಗೆ 10-25 ವಿದ್ಯಾರ್ಥಿಗಳಂತೆ ಹಂಚಿಕೆ ಮಾಡಲಾಗುತ್ತದೆ.

ಉಡುಪಿ ಸರ್ವೇ ಮುಕ್ತಾಯ
ಉಡುಪಿ ಜಿಲ್ಲೆಯಲ್ಲಿ ಸರಕಾರಿ, ಅನುದಾನಿತ, ಅನುದಾನರಹಿತ ಶಾಲೆಗಳಲ್ಲಿ ಒಟ್ಟು 1.60 ವಿದ್ಯಾರ್ಥಿಗಳು 1-10ನೇ ತರಗತಿ ವ್ಯಾಸಂಗ ಮಾಡುತ್ತಿದ್ದಾರೆ. ಅವರಲ್ಲಿ ಮೊಬೈಲ್‌ ವ್ಯವಸ್ಥೆ ಇರುವವರು 1,49,088, ಸ್ಮಾರ್ಟ್‌ಫೋನ್‌ 1,24,876, ಇಂಟರ್‌ನೆಟ್‌ 1,14,976, ಟಿವಿ /ರೇಡಿಯೋ ವ್ಯವಸ್ಥೆ ಇರುವವರು 1,44,822, ಇ-ಮೇಲ್‌ 10,512 ವಿದ್ಯಾರ್ಥಿಗಳಲ್ಲಿ ವ್ಯವಸ್ಥೆ ಇದೆ.

ಉಡುಪಿ 1,224 ಶಾಲೆಗಳು
ಜಿಲ್ಲೆಯಲ್ಲಿ 1,224 ಶಾಲೆಗಳಿದ್ದು 1ರಿಂದ 10ನೇ ತರಗತಿ ವರೆಗೆ 1.60 ಲಕ್ಷ ವಿದ್ಯಾರ್ಥಿ ಗಳಿದ್ದಾರೆ. ಆದರೆ ಎಲ್ಲರ ಮನೆಯಲ್ಲಿ ಮೊಬೈಲ್‌, ಟಿವಿ ಮತ್ತಿತರ ವ್ಯವಸ್ಥೆಗಳಿಲ್ಲ. ಇಂತಹ ವಿದ್ಯಾರ್ಥಿಗಳಿಗೆ ಶಿಕ್ಷಕರು 20 ವಿದ್ಯಾರ್ಥಿಗಳನ್ನು ಸೇರಿಸಿ ಮನೆ, ದೇವಾಲಯ, ಸಮುದಾಯ ಭವನ ಸೇರಿದಂತೆ ಮತ್ತಿತರ ಕಡೆಗಳಲ್ಲಿ ಮಕ್ಕಳನ್ನು ಒಂದೆಡೆ ಸೇರಿಸಿ ಪಾಠ ಮಾಡುತ್ತಿದ್ದಾರೆ.

ಸರ್ವೇ ಬಳಿಕ ನಿಖರ ಸಂಖ್ಯೆ
ಸದ್ಯ ವಿದ್ಯಾರ್ಥಿಗಳ ಸರ್ವೇಕಾರ್ಯ ನಡೆಯುತ್ತಿದೆ. ಇಂಟರ್ನೆಟ್‌ ಸಂಪರ್ಕ ಇಲ್ಲದ ವಿದ್ಯಾರ್ಥಿಗಳ ನಿಖರ ಸಂಖ್ಯೆ ಲಭ್ಯವಾಗಲು ಕೆಲವು ದಿನಗಳು ಬೇಕಾಗುತ್ತದೆ. ಸರ್ವೇ ಪೂರ್ಣವಾದ ಬಳಿಕ ನಿಖರ ಸಂಖ್ಯೆ ದೊರಕಲಿದ್ದು, ಆ ಬಳಿಕವಷ್ಟೇ ವಿದ್ಯಾರ್ಥಿಗಳ ಸಂಖ್ಯೆಗನುಗುಣವಾಗಿ ಶಿಕ್ಷಕರಿಗೆ ಹಂಚಿಕೆ ಮಾಡಲಾಗುತ್ತದೆ.
ಮಲ್ಲೇಸ್ವಾಮಿ, ದ.ಕ. ಡಿಡಿಪಿಐ

ಮನೆ ಪಾಠ ಪ್ರಾರಂಭ
ಜಿಲ್ಲೆಯಲ್ಲಿ ಟಿವಿ, ಮೊಬೈಲ್‌, ಇಂಟರ್‌ನೆಟ್‌ ವ್ಯವಸ್ಥೆ ಇರುವ ಮಕ್ಕಳ ಬಗ್ಗೆ ಮಾಹಿತಿ ಪಟ್ಟಿ ಮಾಡಲಾಗಿದೆ. ಈ ವ್ಯವಸ್ಥೆಗಳು ಇಲ್ಲದ ಮಕ್ಕಳಿಗೂ ಶಿಕ್ಷಣ ತಲುಪಿಸುವ ನಿಟ್ಟಿನಲ್ಲಿ ಶಿಕ್ಷಕರು ಮನೆಗೆ ತೆರಳಿ ವಿದ್ಯಾರ್ಥಿಗಳನ್ನು ಒಂದು ಕಡೆ ಸೇರಿಸಿ ಕೋವಿಡ್‌ ನಿಯಮಾವಳಿ ಅನ್ವಯ ತರಗತಿ ತೆಗೆದುಕೊಳ್ಳುತ್ತಿದ್ದಾರೆ.
– ಶೇಷಶಯನ ಕಾರಿಂಜ, ಉಡುಪಿ ಡಿಡಿಪಿಐ

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.