![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ತಂತ್ರಜ್ಞಾನದ ಕ್ಷಿಪ್ರ ಬೆಳವಣಿಗೆ ಮಾನವನ ಸಂತಸಕ್ಕೆ ಪೂರಕವಾಗಲಿ
Team Udayavani, Jul 9, 2018, 10:41 AM IST
![nitte.png](https://www.udayavani.com/wp-content/uploads/2018/07/9/nitte.png)
ಕಾರ್ಕಳ: ತಂತ್ರಜ್ಞಾನದ ಬೆಳ ವಣಿಗೆಯಲ್ಲಿ ಯಶಸ್ವೀ ಎಂಜಿನಿಯರ್ಗಳ ಪಾತ್ರ ಅಸ್ಮರಣೀಯವಾದುದು. 20ನೇ ಶತಮಾನದ ಹಲವಾರು ಆವಿಷ್ಕಾರಗಳು ಹಾಗೂ 21ನೇ ಶತಮಾನದ ತಾಂತ್ರಿಕ ಪ್ರವೃತ್ತಿಗಳು ತಂತ್ರಜ್ಞಾನದ ಬೆಳವಣಿಗೆಗೆ ಹಿಡಿದ ಕೈಗನ್ನಡಿಯಾಗಿವೆ. ಕ್ಷಿಪ್ರ ಬೆಳವಣಿಗೆ ಮಾನವನ ಸಂತಸಕ್ಕೆ ಪೂರಕವಾಗಿರಲಿ ಎಂದು ಕುವೆಂಪು ವಿವಿಯ ನಿವೃತ್ತ ಉಪಕುಲಪತಿ ಡಾ| ಕೆ.ಚಿದಾನಂದ ಗೌಡ ಹೇಳಿದರು.
ಜು. 7ರಂದು ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಕಾಲೇ ಜಿನ ಸದಾನಂದ ಸಭಾಂಗಣದಲ್ಲಿ ನಡೆದ 2017-18ನೇ ಶೈಕ್ಷಣಿಕ ಸಾಲಿನ ಪದವಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಮೌಲ್ಯಯುತವಾದ ತಾಂತ್ರಿಕ ಬೆಳ ವಣಿಗೆಯಿಂದ ರಾಜ್ಯ, ರಾಷ್ಟ್ರ ಮತ್ತು ವಿಶ್ವವನ್ನೇ ಪ್ರಗತಿಯ ಪಥದಲ್ಲಿ ನಡೆಸ ಬಹುದಾಗಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ನಿಟ್ಟೆ ಎಜುಕೇಶನ್ ಟ್ರಸ್ಟ್ನ ಅಧ್ಯಕ್ಷ ಎನ್. ವಿನಯ ಹೆಗ್ಡೆ ಮಾತನಾಡಿ, ಪದವಿ ಸ್ವೀಕಾರದ ನಿಜವಾದ ಸಾರ್ಥಕತೆಯು ತಮ್ಮ ಪ್ರಾಮಾಣಿಕ ಬದುಕಿನಲ್ಲಿ ಪ್ರತಿಬಿಂಬಿಸುತ್ತದೆ. ಪ್ರಾಮಾಣಿಕ ಪ್ರಯತ್ನವೇ ನಮ್ಮ ಯಶಸ್ಸಿಗೆ ಶಕ್ತಿ ಎನ್ನುವುದನ್ನು ಮರೆಯಬಾರದು. ಸಮಾಜವನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯುವ ಜವಾಬ್ದಾರಿ ಇಂದಿನ ಯುವಕರಿಗಿದೆ ಎಂದರು.
ಬಿ.ಇ, ಎಂ.ಟೆಕ್ ಹಾಗೂ ಎಂ.ಸಿ.ಎ.ವಿದ್ಯಾರ್ಥಿಗಳಿಗೆ ಡಿಗ್ರಿ ಪ್ರದಾನ ಮಾಡಲಾಯಿತು. ಶೈಕ್ಷಣಿಕ ಸಾಧನೆಗೈದ ವಿದ್ಯಾರ್ಥಿಗಳಿಗೆ ಚಿನ್ನ ಹಾಗೂ ಬೆಳ್ಳಿಪದಕ ನೀಡಿ ಗೌರವಿಸಲಾಯಿತು.ಡಾ| ಪರಮೇಶ್ವರನ್, ಡಾ| ಸುಬ್ರಹ್ಮಣ್ಯ ಭಟ್, ಡಾ| ಐ.ಆರ್. ಮಿತ್ತಂತಾಯ ಉಪಸ್ಥಿತರಿದ್ದರು. ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ| ನಿರಂಜನ್ ಎನ್. ಚಿಪ್ಳೂಣRರ್ ಸ್ವಾಗತಿಸಿದರು. ಉಪ ಪ್ರಾಂಶುಪಾಲ ಡಾ| ಶ್ರೀನಿವಾಸ್ ರಾವ್ ಬಿ.ಆರ್. ವಂದಿಸಿದರು. ಶಶಾಂಕ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.