ಭಕ್ತರಿಗೆ ತೆರೆದುಕೊಂಡ ದೇಗುಲಗಳು

ಮೊದಲ ದಿನ ವಿರಳ ಸಂಖ್ಯೆಯಲ್ಲಿ ಭಕ್ತರು

Team Udayavani, Jun 9, 2020, 5:32 AM IST

ಭಕ್ತರಿಗೆ ತೆರೆದುಕೊಂಡ ದೇಗುಲಗಳು

ಉಡುಪಿ: ಲಾಕ್‌ಡೌನ್‌ನಿಂದಾಗಿ ಎರಡು ತಿಂಗಳಿಗೂ ಅಧಿಕ ಕಾಲ ಮುಚ್ಚಲಾಗಿದ್ದ ದೇವಸ್ಥಾನಗಳು ಸೋಮವಾರ ತೆರೆದುಕೊಂಡರೂ ಭಕ್ತರ ಸಂಖ್ಯೆ ಮಾತ್ರ ವಿರಳವಾಗಿತ್ತು.ಕೆಲವೇ ಸಂಖ್ಯೆಯ ಭಕ್ತರು ಮಾಸ್ಕ್ ಧರಿಸಿ ಒಳ ಪ್ರವೇಶಿಸಿದರು. ಥರ್ಮಲ್‌ ಸ್ಕ್ರೀನಿಂಗ್‌ ಪರೀಕ್ಷೆ, ಸ್ಯಾನಿಟೈಸರ್‌ ವ್ಯವಸ್ಥೆಗಳನ್ನು ದೇವಸ್ಥಾನ ಗಳ ಹೊರಭಾಗದಲ್ಲಿ ಕಲ್ಪಿಸಲಾಗಿತ್ತು. ಸರಕಾರ ತೀರ್ಥ ಬಳಕೆಗೆ ಅವಕಾಶ ಇಲ್ಲ ಎಂದು ಹೇಳಿದರೂ ಕೆಲವು ದೇವಸ್ಥಾನಗಳಲ್ಲಿ ತೀರ್ಥ ನೀಡಲಾಗುತ್ತಿತ್ತು.

ಬನ್ನಂಜೆಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಅಂಬಲಪಾಡಿಯ ಶ್ರೀ ಮಹಾಕಾಳಿ ದೇವಸ್ಥಾನ, ಕಡಿಯಾಳಿ, ಬೈಲೂರು, ಇಂದ್ರಾಣಿ, ಪುತ್ತೂರು, ಕನ್ನರ್ಪಾಡಿ ದೇವಸ್ಥಾನಗಳಲ್ಲಿ ಭಕ್ತರ ಸಂಖ್ಯೆ ವಿರಳವಾಗಿತ್ತು. ವಿಶೇಷ ಪೂಜೆ ಗಳು ಇರಲಿಲ್ಲ. ದೇವರ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು. ಅಂಬಲಪಾಡಿಯ ಶ್ರೀ ಮಹಾಕಾಳಿ ದೇವಸ್ಥಾನದಲ್ಲಿ ಥರ್ಮಲ್‌ ಸ್ಕ್ರೀನಿಂಗ್‌ ಮಾಡಲಾಗುತ್ತಿತ್ತು. ದೇವಸ್ಥಾನದ ಸಿಬಂದಿ ಮುಖಗವಸು, ಕೈಗವಸು ಹಾಕಿಕೊಂಡು ಭಕ್ತರಿಗೆ ಥರ್ಮಲ್‌ ಸ್ಕ್ರೀನಿಂಗ್‌ ಮಾಡುತ್ತಿದ್ದರು. ಉಳಿದಂತೆ ಬೆಳಗ್ಗೆ ಹಾಗೂ ಸಂಜೆ ವೇಳೆ ಮಾತ್ರ ಪೂಜೆ ಸೇವೆಗಳು ನೆರವೇರಿದವು. ಯಾವುದೇ ವಿಶೇಷ ಸೇವೆ ಇರಲಿಲ್ಲ.

ಗಣಪತಿ ಹೋಮ
ಶ್ರೀ ಅನಂತೇಶ್ವರ ಮತ್ತು ಚಂದ್ರಮೌಳೀಶ್ವರ ದೇವಸ್ಥಾನಗಳಲ್ಲಿ ಬೆಳಗ್ಗೆ ಎಂದಿನಂತೆ ಪೂಜೆ ನೆರವೇರಿತು. ಅನಂತರ ಗಣಪತಿ ಹೋಮ ನಡೆ ಯಿತು. ಭಕ್ತರಿಗೆ ಸ್ಯಾನಿಟೈಸರ್‌, ಥರ್ಮಲ್‌ ಸ್ಕ್ರೀನಿಂಗ್‌ ಕಡ್ಡಾಯವಾಗಿ ಮಾಡಲಾಗಿತ್ತು.

ದೇವಸ್ಥಾನಗಳಲ್ಲಿ ಜಾಗೃತಿ ಫ‌ಲಕ
ಎಲ್ಲ ದೇವಸ್ಥಾನಗಳಲ್ಲಿಯೂ ಜಾಗೃತಿ ಫ‌ಲಕ ಅಳವಡಿಸಲಾಗಿತ್ತು. ಕೈ ತೊಳೆದು ಕೊಂಡು ದೇಗುಲಕ್ಕೆ ಪ್ರವೇಶ, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್ ಧರಿಸಿ ಎಂಬ ಫ‌ಲಕಗಳು ಭಕ್ತರನ್ನು ಮತ್ತಷ್ಟು ಜಾಗೃತರನ್ನಾಗಿಸಿತು.ಬ್ರಹ್ಮಾವರದ ವಿವಿಧ ದೇಗುಲ, ಪಡುಬಿದ್ರಿ ಮಹಾಲಿಂಗೇಶ್ವರ, ಉಚ್ಚಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ, ಕೋಟ ಅಮೃತೇಶ್ವರೀ ದೇಗುಲದಲ್ಲೂ ಪರಿಸ್ಥಿತಿ ಭಿನ್ನವಾಗಿರಲಿಲ್ಲ.

ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ, ಎಲ್ಲೂರು ಶ್ರೀ ವಿಶ್ವೇಶ್ವರ ದೇವಸ್ಥಾನ, ಕುಂಜೂರು ಶ್ರೀ ದುರ್ಗಾ ದೇವಸ್ಥಾನ, ಉಳಿಯಾರು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನ, ಮಜೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಜಲಂಚಾರು ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ, ಪಾಂಗಾಳ ಶ್ರೀ ಜನಾರ್ದನ ದೇವಸ್ಥಾನ, ಕೊಪ್ಪಲಂಗಡಿ ಶ್ರೀ ವಾಸುದೇವ ದೇವಸ್ಥಾನ, ಉಂಡಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನವೂ ಸೇರಿದಂತೆ ಕಾಪು ತಾಲೂಕಿನ ಬಹುತೇಕ ದೇವಸ್ಥಾನಗಳು ಸೋಮವಾರ ಮುಂಜಾನೆಯಿಂದಲೇ ದೇವರ ದರ್ಶನ ಕ್ಕಾಗಿ ತೆರೆದುಕೊಂಡಿದ್ದು ಭಕ್ತರ ಸಂಖ್ಯೆ ವಿರಳವಾಗಿತ್ತು.

ಎರಡು ಮಾರಿಗುಡಿಗಳು ಓಪನ್‌
ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಒಳಪಟ್ಟಿರುವ ಕಾಪು ಹೊಸ ಮಾರಿಗುಡಿ ಮತ್ತು ಮೂರನೇ ಮಾರಿಗುಡಿಯೂ ಸೋಮವಾರ ತೆರೆದಿತ್ತು.
ಕಾಪು ಪೇಟೆಯ ಗೌಡ ಸಾರಸ್ವತ ಸಮಾಜದ ಹತ್ತು ಸಮಸ್ತರ ಆಡಳಿತಕ್ಕೊಳಪಟ್ಟಿರುವ ಶ್ರೀ ಹಳೇ ಮಾರಿಗುಡಿ ದೇವಸ್ಥಾನ ಮತ್ತು ಶ್ರೀ ವೆಂಕಟರಮಣ ದೇವಸ್ಥಾನಗಳು ಜು. 15ರ ಬಳಿಕವಷ್ಟೇ ಸಾರ್ವಜನಿಕರಿಗಾಗಿ ತೆರೆದು ಕೊಳ್ಳಲಿವೆ.

ಯಾವುದೇ
ಸೇವಾದಿಗಳು ನಡೆದಿಲ್ಲ
ಕೋವಿಡ್-19ದಿಂದಾಗಿ ಎಲ್ಲ ಕ್ಷೇತ್ರಗಳಿಗೂ ನಷ್ಟ ಉಂಟಾಗಿದೆ. ದೇವರ ದರ್ಶನವೂ ನಿಲುಗಡೆ ಯಾಗಿತ್ತು. ಸೋಮವಾರ ದಿಂದ ಭಕ್ತರಿಗೆ ದೇವರ ದರ್ಶನ ಸೇವೆ ಆರಂಭಗೊಂಡಿದೆ. ಯಾವುದೇ ಸೇವಾದಿಗಳು ನಡೆದಿಲ್ಲ. ಗಣಪತಿ ಹೋಮ ನಡೆದಿದೆ.
-ಸಗ್ರಿ ವೇದವ್ಯಾಸ ಐತಾಳ್‌, ಮುಖ್ಯ ಅರ್ಚಕರು,
ಶ್ರೀ ಅನಂತೇಶ್ವರ ದೇವಸ್ಥಾನ, ಉಡುಪಿ

ಟಾಪ್ ನ್ಯೂಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.