ಹೊಟೇಲು ತೆರೆದರೂ ಎದುರಿಸಬೇಕಿದೆ ಸವಾಲು

 ಜೂ. 8ರಿಂದ ಹೊಟೇಲುಗಳು ಮತ್ತೆ ಕಾರ್ಯಾರಂಭ

Team Udayavani, Jun 1, 2020, 5:39 AM IST

ಹೊಟೇಲು ತೆರೆದರೂ ಎದುರಿಸಬೇಕಿದೆ ಸವಾಲು

ಸಾಂದರ್ಭಿಕ ಚಿತ್ರ

ಉಡುಪಿ: ಕೋವಿಡ್‌-19 ಹೆಮ್ಮಾರಿ ಮನುಷ್ಯನಿಗೆ ಮಾತ್ರವಲ್ಲದೆ ಹಲವಾರು ಉದ್ಯಮಕ್ಕೂ ದೊಡ್ಡ ಕಂಟಕವಾಗಿ ಪರಿಣಮಿಸಿದ್ದು, ಇದರಿಂದ ಹೊಟೇಲು ಉದ್ಯಮವೂ ಅಪಾರ ನಷ್ಟಕ್ಕೆ ಒಳಗಾಗಿದೆ.

ಜೂನ್‌ 8ರ ಬಳಿಕ ಜಿಲ್ಲೆಯಲ್ಲಿ ಹೊಟೇಲುಗಳು ಬಾಗಿಲು ತೆರೆದುಕೊಳ್ಳಲಿವೆ. ಸರಕಾರ ಈಗಾಗಲೇ 5.0 ಮಾರ್ಗಸೂಚಿಯಲ್ಲಿ ಅವಕಾಶ ಕಲ್ಪಿಸಿದೆ. ಹೊಟೇಲುಗಳು ಪುನಾರಂಭಕ್ಕೆ ಸಜ್ಜಾಗುತ್ತಿವೆ. ಲಾಕ್‌ಡೌನ್‌ ತೆರವಾದರೂ ಹೊಟೇಲ್‌ಗ‌ಳನ್ನು ಮತ್ತೆ ಪ್ರಾರಂಭ ಮಾಡುವುದು, ಮೊದಲಿನಂತೆ ವ್ಯಾಪಾರ ವಹಿವಾಟು ನಡೆಸುವುದು ಹೊಟೇಲು ಉದ್ಯಮಿಗಳಿಗೆ ದೊಡ್ಡ ಸವಾಲೇ ಆಗಿದೆ. ಕೆಲ ಹೊಟೇಲುಗಳು ಬಾಗಿಲು ತೆರೆಯುವುದು ಕೂಡ ಅನುಮಾನವಾಗಿದೆ.

ವ್ಯಾಪಾರ ಕಷ್ಟ
ಉಡುಪಿ ನಗರದಲ್ಲಿ 4 ಸಾವಿರದಷ್ಟು ಹೊಟೇಲುಗಳಿವೆ. 25 ಸ್ಟಾರ್‌ ಹೊಟೇಲುಗಳಿವೆ. ಸಾಮಾನ್ಯ ಹೊಟೇಲುಗಳು, ಮಿನಿ ಕ್ಯಾಂಟೀನ್‌ಗಳು ಇವೆ. ಹೊಟೇಲುಗಳು, ಉಪಾಹಾರ ಮಂದಿರಗಳು ನಷ್ಟದ ಹಾದಿಯಲ್ಲಿವೆ. ಲಾಕ್‌ಡೌನ್‌ ತೆರವಾದರೂ ಹಲವು ಮಾಲಕರು ಹೊಟೇಲು ನಡೆಸುವ ಆಸಕ್ತಿ ಹೊಂದಿಲ್ಲ. ಸಾಮಾಜಿಕ ಅಂತರ ಕಾಯ್ದುಕೊಂಡು ಕುಳಿತು ಊಟ ವಿತರಿಸುವುದು ಇಂತಹ ಹಲವು ಸವಾಲಿನ ನಡುವೆ ಮತ್ತೆ ಈ ಹಿಂದಿನಂತೆ ವ್ಯಾಪಾರ ನಡೆಸುವ ಯಾವುದೇ ಸಾಧ್ಯತೆ ಕಂಡು ಬರುತ್ತಿಲ್ಲ.

ಚೇತರಿಸಿಕೊಳ್ಳುವ ಲಕ್ಷಣ ಕಾಣಿಸ್ತಿಲ್ಲ
ನಗರದಲ್ಲಿ ಬಹುತೇಕ ಹೊಟೇಲುಗಳು ಉಪಾಹಾರ ಮಂದಿರಗಳು ಬಾಡಿಗೆ ಕಟ್ಟಡದಲ್ಲಿವೆ. ವ್ಯಾಪಾರದಲ್ಲಿ ಪೈಪೋಟಿ ಕೂಡ ಇದೆ. ದುಬಾರಿ ಬಾಡಿಗೆ ಕೊಟ್ಟು ವ್ಯಾಪಾರ ನಡೆಸುವುದು ಈಗಿನ ಪರಿಸ್ಥಿತಿಯಲ್ಲಿ ಕಷ್ಟ. ಲಾಕ್‌ಡೌನ್‌ ತೆರವಿನ ಬಳಿಕವೂ ಗ್ರಾಹಕರು ಈ ಹಿಂದಿನಂತೆ ಬರುವುದು ಅನುಮಾನ. ಇದರಿಂದ ಬಾಡಿಗೆ ಕಟ್ಟಲು ಕೂಡ ಕಷ್ಟ. ಮುಚ್ಚಿದ ಹೊಟೇಲುಗಳನ್ನು ತೆರೆದು ಮತ್ತೆ ವ್ಯಾಪಾರ ಹಿಡಿಯುವುದು ಬಹುದೊಡ್ಡ ಸವಾಲಿನ ಕಾರ್ಯ ಎಂದು ನಗರದಲ್ಲಿ ಹೊಟೇಲು ನಡೆಸುತ್ತಿರುವ ರಾಮಚಂದ್ರ ಹೇಳುತ್ತಾರೆ.

ಉತ್ತಮ ಸೇವೆಯಿತ್ತು
ನಗರದ ಪ್ರತಿಷ್ಠಿತ ಹೊಟೇಲುಗಳು, ಸಾಮಾನ್ಯ ಹೊಟೇಲುಗಳು ನಗರ ಹಾಗೂ ಸುತ್ತಮುತ್ತ ನಡೆಯುವ ವಿವಿಧ ಶುಭ ಸಮಾರಂಭಗಳಿಗೆ ಆಹಾರ ಪೂರೈಕೆ ಮಾಡುತ್ತಿದ್ದವು. ಆನ್‌ಲೈನ್‌ ಮೂಲಕವು ಆಹಾರ ಬುಕ್ಕಿಂಗ್‌ ಮಾಡಿ ಪೂರೈಸುತ್ತಿದ್ದವು. ಅದಕ್ಕೆಲ್ಲ ಈಗ ಬ್ರೇಕ್‌ ಬಿದ್ದಿದೆ. ಸದ್ಯದ ಸ್ಥಿತಿ ನೋಡಿದರೆ ಹೊಟೇಲು ಉದ್ಯಮ ಚೇತರಿಸಿಕೊಳ್ಳುವ ಲಕ್ಷಣಗಳು ಕಾಣಿಸುತ್ತಿಲ್ಲ.

ಹಳ್ಳಿ ಬದುಕು ಇಂಗಿತ,
ತವರು ಸೇರಿದ ವಲಸೆ ಕಾರ್ಮಿಕರು
ಹೊಟೇಲು ಆರಂಭಿಸಿದರೂ ಮುಖ್ಯವಾಗಿ ಅದಕ್ಕೆ ಅಡುಗೆ ಸಹಾಯಕರು ಹಾಗೂ ಸಿಬಂದಿ ಸಮಸ್ಯೆ ತೀವ್ರವಾಗಿ ಕಾಡಲಿದೆ. ಈಗಾಗಲೆ ಹೊರ ರಾಜ್ಯಗಳ ಸಿಬಂದಿ ಕೋವಿಡ್‌-19 ಭಯಕ್ಕೆ ತಮ್ಮ ಊರುಗಳಿಗೆ ಹಿಂದಿರುಗಿದ್ದಾರೆ. ಅವರು ಕನಿಷ್ಠ ಒಂದೆರಡು ವರ್ಷ ಮರಳಿ ಬರುವುದಿಲ್ಲ. ಸ್ಥಳಿಯವಾಗಿ ಅಡುಗೆಯವರು ಸಿಗುವುದಿಲ್ಲ. ಹಲವರು ಹಳ್ಳಿಗಳಲ್ಲಿ ಬದುಕು ಕಟ್ಟಿಕೊಳ್ಳುವ ಇಂಗಿತ ವ್ಯಕ್ತಪಡಿಸುತ್ತಿರುವ ಕಾರಣ ಸಿಬಂದಿ ಕೊರತೆ ಕಾಣಿಸಿಕೊಳ್ಳಲಿದೆ ಎಂಬುದು ಹೊಟೇಲ್‌ ಉದ್ಯಮಿಗಳ ಅಭಿಪ್ರಾಯ. ಸದಾ ತುಂಬಿ ತುಳು ಕುತ್ತಿದ್ದ ನೂರಾರು ಹೊಟೇಲುಗಳು ಸದ್ಯಕ್ಕಂತೂ ಮೊದಲಿನಂತೆ ಕಾಣುವುದಕ್ಕೆ ವರ್ಷವೇ ಬೇಕಾಗಬಹುದು ಎಂಬ ಆತಂಕವೂ ಇದೆ.

ಆರ್ಥಿಕ ವ್ಯವಸ್ಥೆ ಚೇತರಿಕೆ
ಬಸ್‌, ರೈಲು, ವಾಹನ ಸಂಚಾರ ಆರಂಭವಾಗಿರುವುದರಿಂದ ಹೊಟೇಲುಗಳ ತೆರೆದುಕೊಳ್ಳುವುದು ಈಗ ಅವಶ್ಯಕ. ರಾಜ್ಯದಲ್ಲಿ 50 ಸಾವಿರಕ್ಕೂ ಹೆಚ್ಚು ಹೊಟೇಲುಗಳಿದ್ದು, 2 ಲಕ್ಷಕ್ಕೂ ಹೆಚ್ಚು ಕಾರ್ಮಿಕರಿದ್ದಾರೆ. ಇದನ್ನೆ ನೆಚ್ಚಿ ಬದುಕು ಸವೆಸುತ್ತಿದ್ದಾರೆ. ಕಳೆದ ಎರಡು ತಿಂಗಳಿಂದ ಇವರು ಆದಾಯವಿಲ್ಲದೆ ಅತಂತ್ರರಾಗಿದ್ದಾರೆ. ಹೊಟೇಲುಗಳ ಮರು ಪ್ರಾರಂಭದಿಂದ ಆರ್ಥಿಕ ವ್ಯವಸ್ಥೆಯೂ ಚೇತರಿಕೆ ಕಾಣುವ ಸಾಧ್ಯತೆಯಿದೆ. ಕೇಂದ್ರ ಗೃಹ ಇಲಾಖೆ ಹೊರಡಿಸುವ ಮಾರ್ಗಸೂಚಿಗಳನ್ನು ಪಾಲಿಸಿ, ಸಾಮಾಜಿಕ ಅಂತರದ ನಿಯಮ ಪಾಲಿಸಿಕೊಂಡು ಹೊಟೇಲುಗಳು ತೆರೆದುಕೊಳ್ಳಲಿವೆ.

ಸುಲಭವಲ್ಲ
ಸರಕಾರದ ಮಾರ್ಗಸೂಚಿಯಂತೆ ಜಿಲ್ಲೆಯಲ್ಲಿ ಜೂ. 8 ರಿಂದ ಹೊಟೇಲುಗಳನ್ನು ತೆರೆಯಲು ನಿರ್ಧರಿಸಿದ್ದೇವೆ. ಪೂರ್ಣ ಪ್ರಮಾಣದಲ್ಲಿ ಕಷ್ಟ. ಹೊಟೇಲು ನಡೆಸುವುದು ಇನ್ನು ಮುಂದಕ್ಕೆ ಅಷ್ಟು ಸಲೀಸಲ್ಲ. ಕಾರ್ಮಿಕರ ಕೊರತೆ, ಗ್ರಾಹಕರ ಕೊರತೆ ಕಾಡುವ ಸಾಧ್ಯತೆಗಳು ದಟ್ಟವಾಗಿವೆ.
-ತಲ್ಲೂರು ಶಿವರಾಮ ಶೆಟ್ಟಿ, ಅಧ್ಯಕ್ಷ, ಹೊಟೇಲು ಮಾಲಕರ ಸಂಘ ಉಡುಪಿ

ಟಾಪ್ ನ್ಯೂಸ್

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.