ಮೀನುಗಾರರನ್ನು ಪದೇ ಪದೇ ಕಾಡುತ್ತಿರುವ ಹವಾಮಾನದ ವೈಪರೀತ್ಯ!

ನಿರಂತರ ಮಳೆಯಿಂದ ಸಾಕಷ್ಟು ಸಮಸ್ಯೆ

Team Udayavani, Sep 24, 2020, 4:40 AM IST

ಮೀನುಗಾರರನ್ನು ಪದೇ ಪದೇ ಕಾಡುತ್ತಿರುವ ಹವಾಮಾನದ ವೈಪರೀತ್ಯ!

ಮೀನುಗಾರಿಕೆಗೆ ತೆರಳದೆ ಲಂಗರು ಹಾಕಿರುವ ಬೋಟ್‌ಗಳು.

ಮಲ್ಪೆ: ಇತ್ತೀಚಿನ ವರ್ಷಗಳಲ್ಲಿ ಆಗಾಗ್ಗೆ ಸಂಭವಿಸುತ್ತಿರುವ ಹವಾಮಾನ ವೈಪರೀತ್ಯ ಕರಾವಳಿಯ ಮೀನುಗಾರರನ್ನು ಕಂಗೆಡಿಸುವಂತೆ ಮಾಡಿದೆ. ಈ ಮೊದಲು ಮತ್ಸ್ಯ ಕ್ಷಾಮದಿಂದ ಬಳಲುತ್ತಿದ್ದ ಮೀನುಗಾರರು ಕಳೆದ ಒಂದೂವರೆ ವರ್ಷದಿಂದ ಹವಾಮಾನದ ವೈಪರೀತ್ಯವನ್ನು ಎದುರಿಸುತ್ತಿದ್ದಾರೆ. ಇದು ಉಳಿದ ವ್ಯಾಪಾರ ವ್ಯವಹಾರದ ಮೇಲೂ ಪರೋಕ್ಷವಾಗಿ ಪರಿಣಾಮವನ್ನು ಬೀರಿದೆ.

ಕಳೆದ ವರ್ಷ ಓಖೀ, ಕ್ಯಾರ್‌, ಮಹಾ, ಅಂಫಾನ್‌ ಸೇರಿದಂತೆ ಆರು ಚಂಡ ಮಾರುತಗಳು ಮೀನುಗಾರರ ಬದುಕನ್ನು ಕಸಿದಿತ್ತು. ಪರಿಣಾಮ ಬೋಟ್‌ ಒಂದಷ್ಟು ಕಾಲ ದಡದಲ್ಲಿ ಉಳಿಯಬೇಕಾಯಿತು. ಅಕ್ಟೋಬರ್‌ ನಂತರ ಸ್ವಲ್ಪಮಟ್ಟಿಗೆ ಮೀನುಗಾರಿಕೆ ಚುರುಕು ಕಂಡು, ಡಿಸೆಂಬರ್‌ವರೆಗೆ ಮುಂದುವರಿದರೂ ಜನವರಿಯಿಂದ ಮೀನಿನ ಲಭ್ಯತೆ ಕಡಿಮೆ
ಯಾಯಿತು. ಉಳಿದ ಅವಧಿಯಲ್ಲಿ ಒಂದಷ್ಟು ದುಡಿದು ಕಳೆದುಕೊಂಡಿರುವ ಅರ್ಧದಷ್ಟಾದರೂ ಪಡೆಯೋಣ ಎಂಬ ನಿರೀಕ್ಷೆಯಲ್ಲಿ ಮೀನುಗಾರಿಕೆಗೆ ತೊಡಗಿದರೆ ಮುಂದೆ ಕಾಡಿದ್ದು ಮಹಾಮಾರಿ ಕೊರೊನಾ. ಪರಿಣಾಮ ಕನಿಷ್ಠ ಮೂರು ತಿಂಗಳ ಕಾಲ ಮೀನುಗಾರಿಕೆ ನಡೆಸಲು ಸಾಧ್ಯ
ವಾಗಲಿಲ್ಲ.

ಬೋಟ್‌ಗಳ ಢಿಕ್ಕಿ, ಕೋಟ್ಯಂತರ ರೂ. ನಷ್ಟ
ಹವಾಮಾನದ ವೈಪರೀತ್ಯಗಳಾದಾಗ ಬೋಟುಗಳು ಬಂದರಿನಲ್ಲಿ ಲಂಗರು ಹಾಕುತ್ತವೆ. ಈ ವೇಳೆಯೂ ಸಾಕಷ್ಟು ಹಾನಿಯಾಗಿವೆ. ಹೊಳೆಬದಿ ಲಂಗರು ಹಾಕಿ ನಿಲ್ಲಿಸಲಾಗಿದ್ದ ಮೀನುಗಾರಿಕೆ ಬೋಟುಗಳು ನದಿ ನೀರಿನ ಹರಿವಿನ ರಭಸಕ್ಕೆ ಕಟ್ಟಿದ ಹಗ್ಗ ತುಂಡಾಗಿ ತೇಲಿ ಹೋದರೆ,ಇನ್ನು ಕೆಲವು ಒಂದಕ್ಕೊಂದು ಢಿಕ್ಕಿಯಾಗಿ ಹಾನಿಗೊಂಡಿದೆ. ನಿರಂತರ ಮಳೆಯಿಂದಾಗಿ ನದಿಯಲ್ಲಿ ನೀರು ಪ್ರವಾಹ ವೇಗದಲ್ಲಿ ಹರಿಯುತ್ತಿದ್ದು ನೀರಿನ ಹೊಯ್ದಾಟಕ್ಕೆ ಕಟ್ಟಿದ ಬೋಟುಗಳು ಒಂದಕ್ಕೊಂದು ಢಿಕ್ಕಿ ಹೊಡೆದುಕೊಂಡು ಸಾಕಷ್ಟು ನಷ್ಟ ಉಂಟಾಗಿತ್ತು. ಮೀನುಗಾರಿಕೆ ಆರಂಭಗೊಂಡಂದಿನಿಂದ ಆದಾಯಗಳಿಸುವುದಕ್ಕಿಂತ ಬೋಟಿನ ದುರಸ್ತಿ ಕೆಲಸದ ಖರ್ಚು ಹೆಚ್ಚಾಗಿದೆ.

ಹವಾಮಾನ ಏರಿಳಿತ
ಕಳೆದ ಸಾಲಿನಲ್ಲಿ 6 ಚಂಡಮಾರುತ ಬಂದಿತ್ತು. ಈ ಸಲ ಮೀನುಗಾರಿಕೆ ಆರಂಭಗೊಂಡು ಒಂದು ತಿಂಗಳಲ್ಲಿ ಎರಡು ಹವಾಮಾನ ಏರಿಳಿತ ಕಂಡಿದೆ. ಹೀಗೆ ವೈಪರೀತ್ಯಗಳಿದ್ದರೆ ಮೀನುಗಾರರು ದುಡಿಮೆ ಮಾಡುವುದು ಹೇಗೆ ?  ದಿನದಿಂದ ದಿನಕ್ಕೆ ಮೀನುಗಾರರ  ಸ್ಥಿತಿ ಶೋಚನೀಯವಾಗುತ್ತಿದೆ.
-ಕೃಷ್ಣ ಎಸ್‌. ಸುವರ್ಣ, ಅಧ್ಯಕ್ಷರು, ಮೀನುಗಾರರ ಸಂಘ ಮಲ್ಪೆ

ಟಾಪ್ ನ್ಯೂಸ್

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Hebri; ಸ್ಕೂಟಿಗೆ ಕಾರು ಢಿಕ್ಕಿ,ಸವಾರ ಸ್ಥಳದಲ್ಲೇ ಸಾವು

Hebri; ಸ್ಕೂಟಿಗೆ ಕಾರು ಢಿಕ್ಕಿ,ಸವಾರ ಸ್ಥಳದಲ್ಲೇ ಸಾವು

9-temple

Temple History: ಶ್ರೀ ವಡಭಾಂಡೇಶ್ವರ ಬಲರಾಮ ದೇವಸ್ಥಾನ; ಹಿನ್ನೆಲೆ, ಇತಿಹಾಸ,ವಿಶೇಷಗಳು

5-kaup

Kaup: ಅಯೋಧ್ಯೆಯಂತೆ ಮಾರಿಗುಡಿಯ ಜೀರ್ಣೋದ್ಧಾರವೂ ಸಾಂಗವಾಗಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.