ಅಂಬೇಡ್ಕರ್‌ ಭವನಕ್ಕೆ ಇನ್ನೂ ಬೀಳದ ಅಡಿಗಲ್ಲು!

ವಸತಿ ಶಿಕ್ಷಣ ಸಂಸ್ಥೆಗಳ ಸಂಘ ವಿಳಂಬ ನೀತಿ, ಸಚಿವರ ಸಮಯಾವಕಾಶಕ್ಕೆ ಕಾತರ

Team Udayavani, Jan 29, 2022, 4:58 PM IST

ಅಂಬೇಡ್ಕರ್‌ ಭವನಕ್ಕೆ ಇನ್ನೂ ಬೀಳದ ಅಡಿಗಲ್ಲು!

ಕಾರ್ಕಳ: ತಾಲೂಕು ಕೇಂದ್ರ ಸ್ಥಾನದಲ್ಲಿ ಡಾ| ಬಿ.ಆರ್‌. ಅಂಬೇಡ್ಕರ್‌ ಭವನ ನಿರ್ಮಾಣ ದಶಕಗಳ ಕನಸಾಗಿದೆ. ಭವನ ನಿರ್ಮಾಣಕ್ಕೆ ಇನ್ನು ಅಡಿಗಲ್ಲು ಬಿದ್ದಿಲ್ಲ. ಪರಿಶಿಷ್ಟ ಜಾತಿ, ಪಂಗಡಗಳ ಸಮುದಾಯದಲ್ಲಿ ಈ ಬಗ್ಗೆ ಬೇಸರವಿದೆ.

2016ರಲ್ಲಿ ನೀಲ ನಕ್ಷೆ ತಯಾರಿ
ನಗರದ ಕಾಬೆಟ್ಟು ವಾರ್ಡ್‌ನಲ್ಲಿ 1 ಎಕರೆ ಜಾಗವನ್ನು ತಾ| ಅಂಬೇಡ್ಕರ್‌ ಭವನಕ್ಕಾಗಿ ಮೀಸಲಿಡಲಾಗಿದೆ. ಏಳು ವರ್ಷಗಳಿಂದ ಅಂಬೇಡ್ಕರ್‌ ಭವನಕ್ಕೆ ಪ್ರಯತ್ನಗಳು ನಡೆದಿತ್ತು. 2016ರಲ್ಲಿ ನೀಲ ನಕ್ಷೆ ತಯಾರಿಸಲಾಗಿತ್ತು. ಅನಂತರದ ದಿನಗಳಲ್ಲಿ ಅಂಬೇ ಡ್ಕ ರ್‌ ಭವನ ನಿರ್ಮಾಣ ಪ್ರಯತ್ನಗಳು ನಡೆದಿದ್ದವು.

ಆರಂಭದಲ್ಲಿ 100 ಮಂದಿ ಸಾಮರ್ಥ್ಯದ ಭವನ ನಿರ್ಮಾಣಕ್ಕೆ ಅಂದಾಜು ಪಟ್ಟಿ ಸಿದ್ಧಪಡಿಸಲಾಗಿತ್ತು. ಸಾಲದು ಎಂದು 1 ಸಾವಿರ ಮಂದಿ ಸಾಮರ್ಥ್ಯದ ಭವನ ನಿರ್ಮಾಣಕ್ಕೆ ಯೋಜ ನೆ ಸಿದ್ಧಪಡಿಸಲಾಗಿತ್ತು. ಸುಮಾರು 750 ಮಂದಿ ಸಾಮರ್ಥ್ಯದ ಸುಸಜ್ಜಿತ ಭವನಕ್ಕೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವತಿಯಿಂದ ಅಂದಾಜು ಪಟ್ಟಿ ಮತ್ತು ನಕ್ಷೆಯನ್ನು ಸಿದ್ಧಪಡಿಸಿ, ಆಡಳಿತಾತ್ಮಕ ಒಪ್ಪಿಗೆಯನ್ನು ಸರಕಾರದ ಆದೇಶದನ್ವಯ ಪಡೆಯಲಾಗಿದೆ.
2020-21ನೇ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆಯು ಭವನಗಳ ನಿರ್ಮಾಣಕ್ಕೆ ಪರಿಶಿಷ್ಟ ಜಾತಿಯ ಅಭಿವೃದ್ಧಿ ಕಾರ್ಯಕ್ರಮಗಳ ಬಂಡವಾಳ ಲೆಕ್ಕ ಶೀರ್ಷಿಕೆಯಡಿ ನಿಗದಿಪಡಿಸಿದ್ದ ಅನುದಾನದ ಮೊತ್ತದಲ್ಲಿ ಕಾರ್ಕಳ ತಾ| ಅಂಬೇ ಡ್ಕ ರ್‌ ಭವನಕ್ಕೆ ಮಂಜೂರಾತಿ ಪಡೆದ 1.5 ಕೋ.ರೂ. ಅನುದಾನದ ಪೈಕಿ 75 ಲಕ್ಷ ರೂ. ಮೊದಲ ಕಂತಿನ ಹಣ ಕಾರ್ಯನಿರ್ವಾಹಕ ನಿರ್ದೇಶಕರು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಬೆಂಗಳೂರು ಇವರ ಖಾತೆಗೆ ಜಮೆಯಾಗಿದೆ.

ಕಾಮಗಾರಿಯೇಕೆ ವಿಳಂಬಕ್ಕೆ ಅಸಮಾಧಾನ
ವಸತಿ ಶಿಕ್ಷಣ ಸಂಸ್ಥಗಳ ಸಂಘದ ವಿಳಂಬ ನೀತಿ, ಅನಂತರದಲ್ಲಿ ಚುನಾವಣೆಗಳು ಎದುರಾದ ಹಿನ್ನೆಲೆ ಯಲ್ಲಿ ಅಂಬೇ ಡ್ಕ ರ್‌ ಭವನ ನಿರ್ಮಾಣಕ್ಕೆ ಸಂಬಂಧಿಸಿದ ಪ್ರಕ್ರಿಯೆಗಳು ನಿಧಾನಗತಿ ಪಡೆದುಕೊಂಡಿದ್ದವು. ಕಟ್ಟಡ ನಿರ್ಮಾಣ ಕಾಮಗಾರಿ ಆರಂಭಿಸಲು ಖಾತೆಯಲ್ಲಿ ಹಣ ಉಳಿದಿದ್ದರೂ ಕಾಮಗಾರಿ ಆರಂಭಿಸುವ ವಿಚಾರದಲ್ಲಿ ವಸತಿ ಶಿಕ್ಷಣ ಸಂಸ್ಥೆ ಉತ್ಸಾಹ ತೋರದೆ ಇರುವುದು, ಸಮಾಜ ಕಲ್ಯಾಣ ಇಲಾಖೆಯಲ್ಲಿ ಸಿಬಂದಿಯಿಲ್ಲದಿರುವುದು, ಇನ್ನಿತರ ಕಾರಣಗಳಿಂದ ವಿಳಂಬವಾಗಿರುವುದು ಸಮುದಾಯದ ಅಸಮಾ ಧಾನಕ್ಕೆ ಕಾರಣವಾಗಿದೆ.
ಆಧುನಿಕ ಅಂಬೇ ಡ್ಕ ರ್‌ ಭವನದಲ್ಲಿ ಸುಸಜ್ಜಿತ ಕಟ್ಟಡ, ವ್ಯವಸ್ಥಿತ ಪಾರ್ಕಿಂಗ್‌, ಗುಣಮಟ್ಟದ ಪೀಠೊಪಕರಣ, ನಿರಂತರ ನೀರು ಸೌಲಭ್ಯ ಹೊಂದಲು ಬೋರ್‌ವೆಲ್‌ ಇತ್ಯಾದಿ ಸೌಕರ್ಯಗಳು, ಸಂವಿಧಾನ ಶಿಲ್ಪಿ ಡಾ| ಬಿ.ಆರ್‌. ಅಂಬೇ ಡ್ಕ ರ್‌ ಅವರ ಪ್ರತಿಮೆಯನ್ನು ಭವನದ ಮುಂಭಾಗ ನಿರ್ಮಿಸಲು ಉದ್ದೇಶಿಸಲಾಗಿದೆ.

1.5 ಕೋ.ರೂ. ಪೈಕಿ 75 ಲಕ್ಷ ರೂ. ಅನುದಾನದ ಹಣದಲ್ಲಿ ಪ್ರಾಥಮಿಕ ಕಾಮಗಾರಿಗೆ ಆರಂಭಿಸಲು ತೊಡಕಿಲ್ಲ. ಈಗ ಕೆಲಸ ಆರಂಭಿಸಿ, ಅನಂತರದಲ್ಲಿ ಅನುದಾನ ಬಂದಲ್ಲಿ ಹೆಚ್ಚುವರಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸಾಧ್ಯವಿದೆ ಎಂದು ಸಮುದಾಯದ ಮುಖಂಡರು ಹೇಳುತ್ತಿದ್ದಾರೆ.

ಸಚಿವರು ಸಮಯ ನಿಗದಿಪಡಿಸಿ ಒಪ್ಪಿಗೆ ನೀಡಿದಲ್ಲಿ ಈ ಕೂಡಲೇ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನಡೆದು ಸುಸಜ್ಜಿತ ಅಂಬೇ ಡ್ಕ ರ್‌ ಭವನ ನಿರ್ಮಾಣವಾಗಲಿದೆ. ನಿಟ್ಟೆ ಹಾಗೂ ಅಜೆಕಾರಿನಲ್ಲೂ ಅಂಬೇ ಡ್ಕ ರ್‌ ಭವನ ನಿರ್ಮಾಣ ಅಂತಿಮ ಹಂತದಲ್ಲಿದೆ.

ಆಧುನಿಕವಾಗಿ ನಿರ್ಮಿಸುವ ಹಂಬಲ
ಈಗಿನ 1.5 ಕೋ.ರೂ. ವೆಚ್ಚದಲ್ಲಿ ಕಟ್ಟಡ ನಿರ್ಮಾಣ ಹಾಗೂ ಕೆಲವೊಂದು ಸೌಕರ್ಯ ಹೊಂದಲು ಸಾಧ್ಯವಿದೆ. ಈತನ್ಮಧ್ಯೆ ತಾ| ಅಂಬೇಡ್ಕರ್‌ ಭವನದ ಸಾಮರ್ಥ್ಯ ಹೆಚ್ಚಿಸಿ, ಮತ್ತಷ್ಟೂ ಸುಸಜ್ಜಿತವಾಗಿ, ಆಧುನಿಕವಾಗಿ ನಿರ್ಮಿಸುವ ಉದ್ದೇಶ ಹೊಂದಲಾಗಿದೆ. ಈ ಹಿನ್ನೆಲೆಯಲ್ಲಿ ಕ್ಷೇತ್ರದ ಶಾಸಕರು, ಸಚಿವರೂ ಆದ ವಿ. ಸುನಿಲ್‌ಕುಮಾರ್‌ ಹೆಚ್ಚುವರಿ ಅನುದಾನ ತರುವ ಪ್ರಯತ್ನ ನಡೆಸುತ್ತಿದ್ದು, ಡಾ| ಅಂಬೇಡ್ಕರ್‌ ಭವನವನ್ನು ಆಧುನಿಕ ಶೈಲಿಯಲ್ಲಿ ನಿರ್ಮಿಸಲು ಉತ್ಸುಕರಾಗಿದ್ದು ಪೂರಕ ಯೋಜನೆ ಸಿದ್ಧಪಡಿಸಲು ಸೂಚಿಸಿದ್ದಾರೆ ಎನ್ನಲಾಗಿದೆ. ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಸಮುದಾಯದ ಎಸ್‌. ಅಂಗಾರ ಅವರು ನೇಮಕವಾಗಿದ್ದು, ಅಂಬೇಡ್ಕರ್‌ ಭವನಕ್ಕೆ ವೇಗ ಸಿಗುವುದೇ ಕಾದು ನೋಡಬೇಕಿದೆ.

ಶೀಘ್ರ ಆರಂಭ
ತಾ| ಅಂಬೇಡ್ಕರ್‌ ಭವನ ನಿರ್ಮಾಣಕ್ಕೆ 1.5 ಕೋಟಿ ರೂ. ಅನುದಾನ ಮೀಸಲಿರಿಸಲಾಗಿದೆ. ಆಡಳಿತಾತ್ಮಕ ಒಪ್ಪಿಗೆ ಪಡೆದು ಅದೀಗ ಟೆಂಡರ್‌ ಹಂತದಲ್ಲಿದೆ. ಟೆಂಡರ್‌ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಕಟ್ಟಡ ನಿರ್ಮಾಣ ಕಾಮಗಾರಿ ಶೀಘ್ರ ಆರಂಭಿಸಲಾಗುವುದು. ಸಚಿವರ ಸಮಯಾವಕಾಶವನ್ನು ನಿರೀಕ್ಷಿಸಲಾಗುತ್ತಿದೆ.
-ವಿಜಯಕುಮಾರ್‌,
ಸಮಾಜ ಕಲ್ಯಾಣಾಧಿಕಾರಿ, ಕಾರ್ಕಳ

ಶಂಕುಸ್ಥಾಪನೆ ಆಗಲಿ
ಅಂಬೇಡ್ಕರ್‌ ಭವನದ ನಿರ್ಮಾಣ ಈಗಾಗಲೇ ತಡವಾಗಿದೆ. ಸಚಿವರು ಸಮಯಾವಕಾಶ ಮೀಸಲಿರಿಸಿ, ಶಂಕುಸ್ಥಾಪನೆ ನೆರವೇರಿಸಿದಲ್ಲಿ ಭವನ ಆದಷ್ಟು ಬೇಗ ನಿರ್ಮಾಣವಾಗಿ ಅನುಕೂಲವಾಗಲಿದೆ.
-ಅಣ್ಣಪ್ಪ ನಕ್ರೆ, ದಲಿತ ಮುಖಂಡ

– ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.