ಕುಂಟುತ್ತಿರುವ ವಾರಾಹಿ ಯೋಜನೆ: ಉಡುಪಿಗೆ ಕುಡಿಯುವ ನೀರು

ಕಾಮಗಾರಿ ಅನುಷ್ಟಾನಕ್ಕೆ ಹಲವು ಅಡೆತಡೆಗಳು

Team Udayavani, Jun 2, 2023, 3:21 PM IST

ಕುಂಟುತ್ತಿರುವ ವಾರಾಹಿ ಯೋಜನೆ: ಉಡುಪಿಗೆ ಕುಡಿಯುವ ನೀರು

ಉಡುಪಿ: ನಗರಕ್ಕೆ ದಿನಪೂರ್ತಿ ಶುದ್ಧ ಕುಡಿಯುವ ನೀರು ಪೂರೈಸುವ ಮಹತ್ವದ ಯೋಜನೆ ಆರೇಳು ವರ್ಷಗಳಿಂದ ಕುಂಟುತ್ತ ಸಾಗುತ್ತಿದೆ. ವ್ಯವಸ್ಥಿತವಾಗಿ ಕಾಮಗಾರಿ ಅನುಷ್ಠಾನಕ್ಕೆ ಹಲವು ತಡೆಗಳಿದ್ದು, ಎಲ್ಲವನ್ನು ನಿವಾರಿಸಿ ಮುಂದಿನ ಬೇಸಗೆಯೊಳಗೆ ನೀರು ಕೊಡುವ ಸವಾಲು ಆಡಳಿತ ವ್ಯವಸ್ಥೆ ಮುಂದಿದೆ.ವಾರಾಹಿ ಕುಡಿಯುವ ನೀರಿನ ಯೋಜನೆ ನಗರಸಭೆ ಅಮೃತ್‌, ಎಡಿಬಿ ಅನುದಾನದಿಂದ ಕಾಮಗಾರಿ ಕೈಗೆತ್ತಿಕೊಳ್ಳಲಾಗಿತ್ತು.

ಹಾಲಾಡಿಯಿಂದ
ಉಡುಪಿ ನಗರಕ್ಕೆ ನೀರು ಪೂರೈಸುವ ಯೋಜನೆಯ ಕಾಮಗಾರಿಯನ್ನು ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ (ಕೆಯುಐಡಿಎಫ್ಸಿ) ನಿರ್ವಹಿಸುತ್ತಿದೆ. ಯೋಜನೆ ಆರಂಭಗೊಳ್ಳುವಾಗ 2017ರಲ್ಲಿ ಕೆಯುಐಡಿಎಫ್ಸಿ ಅಧಿಕಾರಿಗಳು, ಜನಪ್ರತಿನಿಧಿಗಳು ಎರಡು ವರ್ಷದ ಒಳಗೆ ಕಾಮಗಾರಿ ಪೂರ್ಣಗೊಂಡು ಉಡುಪಿ ನಗರದ ಜನತೆಗೆ ನೀರು ಲಭ್ಯವಾಗಲಿದೆ ಎಂದು ಭರವಸೆ ನೀಡಿದ್ದರು.

ವರ್ಷಗಳು ಉರುಳುತ್ತ ಬಂದರೂ ಜನರಿಗೆ ನೀರು ಮಾತ್ರ ಇನ್ನೂ ಸಿಕ್ಕಿಲ್ಲ. ಯೋಜನೆಯ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿರುವುದರಿಂದ ಮುಂದಿನ ವರ್ಷವೂ ವಾರಾಹಿ ನದಿಯಿಂದ ನೀರು ಪೂರೈಕೆಯಾಗುವುದು ಅನುಮಾನ ಎನ್ನಲಾಗುತ್ತಿದೆ. ಪ್ರಸ್ತುತ ಯೋಜನೆಯ ಸ್ವರೂಪ ಹಾಲಾಡಿ ಭರತ್‌ಕಲ್‌ ಎಂಬಲ್ಲಿ ಡಬ್ಲ್ಯುಟಿಪಿ ಘಟಕ ನಿರ್ಮಿಸಿ ನಿತ್ಯ 45 ಎಂಎಲ್‌ಡಿ ನೀರನ್ನು ಪಂಪ್‌ ಮಾಡಿ ನೀರನ್ನು ಮಣಿಪಾಲಕ್ಕೆ ಪೈಪ್‌ಮೂಲಕ ಪೂರೈಸುವುದು. ಅನಂತರ ಮಣಿಪಾಲದಲ್ಲಿರುವ 25 ಎಂಎಲ್‌ಡಿ ಸಾಮರ್ಥ್ಯದ ಎರಡು ಜಿಎಲ…ಎಸ್‌ಆರ್‌ ಟ್ಯಾಂಕರ್‌ಗಳಲ್ಲಿ ಸಂಗ್ರಹಿಸಿ, ಆ ಬಳಿಕ 7 ಓವರ್‌ಹೆಡ್‌ ಟ್ಯಾಂಕ್‌ಗಳಿಗೆ ನೀರು ಪೂರೈಸಿ ಮನೆಗಳಿಗೆ 24 ಗಂಟೆ ನೀರು ಪೂರೈಸುವುದಾಗಿದೆ.

ಯೋಜನೆ ಸ್ವರೂಪ ಬದಲಾಯಿತು
ಹಾಲಾಡಿಯಿಂದ ಬಜೆಗೆ ನೀರನ್ನು ಪೂರೈಸಿ ಬಜೆಯಲ್ಲಿ ನೀರನ್ನು ಶುದ್ದೀಕರಣಗೊಳಿಸಿ ಅಲ್ಲಿಂದ ಉಡುಪಿಗೆ ನೀರು ಪೂರೈಸುವುದು ಯೋಜನೆಯ ಉದ್ದೇಶ. ಪೈಪ್‌ಲೈನ್‌ ಹಾದು ಹೋಗಿರುವ ಗ್ರಾ.ಪಂ.ಗಳಿಗೆ ಉಚಿತವಾಗಿ ನೀರು ಕೊಡಲು ನಿರ್ಧರಿಸಲಾಗಿತ್ತು. ಹಾಲಾಡಿಯಿಂದ ಬಜೆಯವರೆಗೆ ಪೈಪ್‌ಲೈನ್‌ ಹಾದುಹೋಗುವ ಗ್ರಾಮೀಣ ಭಾಗದ ಜನರು ನಮಗೂ ಶುದ್ಧೀಕರಿಸಿದ ನೀರುಬೇಕು ಎಂದು ಪಟ್ಟು ಹಿಡಿದು ಅರ್ಜಿ ಸಮಿತಿಗೆ ಮನವಿ ಮಾಡಲಾಯಿತು. ಪರಿಣಾಮ ಶುದ್ಧೀಕರಣ ಘಟಕವನ್ನು ಹಾಲಾಡಿ ಭರತ್ಕಲ್‌ನಲ್ಲಿ ರೂಪಿಸುವ ಬಗ್ಗೆ ಅರ್ಜಿ ಸಮಿತಿ ಸೂಚಿಸಿದ ಮೇರೆಗೆ ಶುದ್ಧೀಕರಣ ಘಟಕವನ್ನು ಭರತ್‌ಕಲ್‌ನಲ್ಲಿ ನಿರ್ಮಿಸುವ ನಿರ್ಧಾರ ತೆಗೆದುಕೊಳ್ಳಲಾಯಿತು. ಇದಕ್ಕೆ 4 ಎಕ್ರೆ ಜಾಗದ ಖರೀದಿ ಪ್ರಕ್ರಿಯೆ ವಿಳಂಬವಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅರಣ್ಯ ಇಲಾಖೆ, ಪಿಡಬ್ಲ್ಯುಡಿ ಒಪ್ಪಿಗೆ ಸಿಕ್ಕಿಲ್ಲ
ಈ ವರ್ಷ ಡಿಸೆಂಬರ್‌ ಅಥವಾ ಬೇಸಗೆ ಒಳಗೆ ವಾರಾಹಿ ನೀರು ನಗರಕ್ಕೆ ಬರುವುದು ಬಹುತೇಕ ಅನುಮಾನ ಎನ್ನಲಾಗುತ್ತಿದೆ. ಅದಕ್ಕೆ ಪುಷ್ಟಿ ಕೊಡುವಂತೆ ಕೆಲವು ಕೆಲಸಗಳು ವಿಳಂಬವಾಗಿ ಸಾಗುವ ಹಂತದಲ್ಲಿದೆ. ಹಾಲಾಡಿಯಿಂದ ಭರತ್‌ಕಲ್‌ಗೆ ಪೈಪ್‌ಲೈನ್‌ ಭೂಸ್ವಾಧೀನ ಪ್ರಕ್ರಿಯೆ ಆಗಬೇಕು. ಇಲ್ಲಿ ಖಾಸಗಿ ಮತ್ತು ಅರಣ್ಯ ಇಲಾಖೆ ಭೂಮಿ ಪರಾಭಾರೆ ಮಾಡಿಕೊಳ್ಳಬೇಕು. ಇದಕ್ಕೆ ಇನ್ನೂ ಸಹ ಒಪ್ಪಿಗೆ ಸಿಕ್ಕಿಲ್ಲ. ಅಲ್ಲದೆ ಮಡಿಸಾಲು, ಸೀತಾ, ವಾರಾಹಿ, ಸ್ವರ್ಣಾ, ಬೆನಗಲ್‌ ಹೊಳೆಯನ್ನು ಪೈಪ್‌ಲೈನ್‌ ಕ್ರಾಸಿಂಗ್‌ ಮಾಡಬೇಕು. ಇದರಲ್ಲಿ ಕೆಲವು ಕಡೆಗಳಲ್ಲಿ ಕಾಮಗಾರಿ ಪ್ರಗತಿ ಇದೆ. ಸ್ವರ್ಣಾ ನದಿ ಶೀಂಬ್ರಾದಲ್ಲಿ ಈಗಾಗಲೆ ನಿರ್ಮಾಣಗೊಂಡ ಸೇತುವೆಯಲ್ಲಿ ಪೈಪ್‌ಲೈನ್‌ ತರುವ ಯೋಜನೆ ಇತ್ತು. ಇಲ್ಲಿ ಪೈಪ್‌ಲೈನ್‌ ರೂಪಿಸಿಲು ಲೋಕೋಪಯೋಗಿ ಇಲಾಖೆ ಒಪ್ಪಿಗೆ ನೀಡಿಲ್ಲ. ಇದಕ್ಕೆ ಮೇಲ್ಮನವಿ ಪ್ರಕ್ರಿಯೆ ನಡೆಯುತ್ತಿದೆ. ಇಲ್ಲದಿದ್ದರೆ ಸೇತುವೆ ನಿರ್ಮಾಣ ಅನಿವಾರ್ಯ. ಇದಕ್ಕೆ ಕನಿಷ್ಠ ಒಂದು ವರ್ಷವಾದರೂ ಬೇಕು ಎನ್ನಲಾಗುತ್ತಿದೆ. ಒಟ್ಟಾರೆ ಯೋಜನೆ ಪೂರ್ಣಗೊಳ್ಳಲು ಎರಡು ವರ್ಷವಾದರೂ ಹಿಡಿಯಬಹುದು ಎನ್ನಲಾಗುತ್ತಿದೆ. ಅಧಿಕಾರಿಗಳು ಈ ಬೇಸಗೆಯೊಳಗೆ ಪೂರ್ಣಗೊಳಿಸುವುದಾಗಿ ಭರವಸೆ ನೀಡಿದ್ದಾರೆ.

ಎಷ್ಟು ಕೆಲಸ ಬಾಕಿ ಇದೆ ?
ಭರತ್‌ಕಲ್‌ನಲ್ಲಿ ನಿರ್ಮಿಸಲಾಗುವ ಡಬ್ಲ್ಯುಟಿಪಿ ಘಟಕದ ಸಿವಿಲ್‌ ವರ್ಕ್‌ ಪೂರ್ಣಗೊಂಡಿಲ್ಲ. ಶೇ.40 ಮಾತ್ರ ಕೆಲಸವಾಗಿದೆ. ಘಟಕ ಅನುಷ್ಠಾನ, ಯಂತ್ರೋಪಕರಣ ಅಳವಡಿಕೆ ಸಹಿತ ಸಾಕಷ್ಟು ಕಾಮಗಾರಿ ನಡೆಯುವುದು ಇನ್ನೂ ಬಾಕಿ ಇದೆ. ನಗರಕ್ಕೆ ನೀರು ಪೂರೈಸುವಾಗ ಒಟ್ಟು ಐದು ಹೊಳೆಗಳಲ್ಲಿ ಪೈಪ್‌ಲೈನ್‌ ಸಾಗಬೇಕಿದೆ. ಕಿರಿದಾದ ಸೇತುವೆ ಮಾದರಿಯಲ್ಲಿ ಸಪೋರ್ಟಿಂಗ್‌ ಸೇತುವೆ ನಿರ್ಮಿಸಿ ಪೈಪ್‌ ಅಳವಡಿಸಬೇಕು. ಈ ಕೆಲಸ ಇನ್ನೂ ನಡೆದಿಲ್ಲ. ಪ್ರಸ್ತುತ ಉಡುಪಿ ನಗರದಲ್ಲಿ ಶೇ.80 ರಷ್ಟು ಪೈಪ್‌ಲೈನ್‌ ಕೆಲಸ ಪೂರ್ಣಗೊಂಡಿದೆ. ಮಣಿಪಾಲ ಅಂಗನವಾಡಿ, ಅನಂತನಗರ, ಇಂದ್ರಾಳಿ, ಮಂಚಿ, ಸಂತೆಕಟ್ಟೆ, ಮಿಶನ್‌ ಕಂಪೌಂಡ್‌ , ಕಕ್ಕುಂಜೆಯಲ್ಲಿ ಓವರ್‌ ಹೆಡ್‌ ಟ್ಯಾಂಕ್‌ ನಿರ್ಮಾಣವಾಗಲಿದ್ದು, ಕಕ್ಕುಂಜೆ ಹೊರತುಪಡಿಸಿ ಮತ್ತೆಲ್ಲವೂ ಅಂತಿಮಗೊಂಡಿದೆ.

ಪೈಪ್‌ಲೈನ್‌ ವರ್ಕ್‌ ಶೀಘ್ರ ಪೂರ್ಣ
ಉಡುಪಿ ನಗರದ ವಾರಾಹಿ ಯೋಜನೆ ಪೈಪ್‌ಲೈನ್‌, ಸಿವಿಲ್‌ವರ್ಕ್‌ ಕಾಮಗಾರಿ ಶೀಘ್ರ ಮುಗಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರತ್ಯೇಕ ಸಭೆ ಕರೆದು ಅಧಿಕಾರಿಗಳು, ಎಂಜಿನಿಯರ್‌ಗಳ ಜತೆಗೆ ಚರ್ಚಿಸಿದ್ದೇನೆ. ಈ ವರ್ಷ ಡಿಸೆಂಬರ್‌ ಒಳಗೆ ನಗರಕ್ಕೆ ನೀರು ಪೂರೈಸಬೇಕು ಎಂದು ಸೂಚನೆ ನೀಡಿದ್ದೇನೆ. ಕಾಮಗಾರಿಗೆ ಇರುವ ಅಡೆತಡೆಗಳ ಬಗ್ಗೆ ಅರಣ್ಯ ಇಲಾಖೆ, ಲೋಕೋಪಯೋಗಿ ಇಲಾಖೆ ಅಧಿಕಾರಿಗಳೊಂದಿಗೂ ಮಾತುಕತೆ ನಡೆಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗುವುದು. ನಗರಕ್ಕೆ ನೀರು ಪೂರೈಸುವ ಈ ಯೋಜನೆ ವ್ಯವಸ್ಥಿತವಾಗಿ ಕಾಮಗಾರಿ ನಡೆಸಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ನಿರಂತರ ಪರಿಶೀಲನೆ ನಡೆಸುತ್ತೇನೆ.
-ಯಶ್‌ಪಾಲ್‌ ಸುವರ್ಣ,
ಶಾಸಕರು. ಉಡುಪಿ.

-ಅವಿನ್‌ ಶೆಟ್ಟಿ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.