ಸಂಚಾರಕ್ಕೆ ಅಯೋಗ್ಯವಾದ ಕಾಪು ಪೇಟೆಯ ಮುಖ್ಯ ರಸ್ತೆ


Team Udayavani, Oct 30, 2019, 5:13 AM IST

kaup-city

ಕಾಪು: ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದೇ ಮಳೆ ನೀರು ರಸ್ತೆಯಲ್ಲೇ ಹರಿದು ಕಾಪು ಪೇಟೆಯ ಮುಖ್ಯ ರಸ್ತೆಯ ತುಂಬೆಲ್ಲ ಹೊಂಡ – ಗುಂಡಿಗಳು ಬಿದ್ದಿವೆ. ಇದರಿಂದಾಗಿ ತಾಲೂಕು ಕೇಂದ್ರ, ಪುರಸಭೆಗೆ ಬರುವವರ ಸಂಚಾರಕ್ಕೆ ಸಂಚಕಾರ ಎದುರಾಗಿದೆ.

ಪಿಡಬ್ಲ್ಯುಡಿ ವ್ಯಾಪ್ತಿಗೆ ಬರುವ ಕಾಪು ಹಳೇ ಎಂಬಿಸಿ ರಸ್ತೆಯ ಮಧ್ಯದಲ್ಲಿ ಸಿಗುವ ಕಾಪು ಹೊಸ ಮಾರಿಗುಡಿ ರಸ್ತೆಯಿಂದ ಪೊಲೀಸ್‌ ವೃತ್ತ ನಿರೀಕ್ಷಕರ
ಕಚೇರಿ ಬಳಿಯ ಸಿಂಡಿಕೇಟ್‌ ಬ್ಯಾಂಕ್‌ ಮುಂಭಾಗದ ವರೆಗಿನ ಸುಮಾರು 300 ಮೀ. ರಸ್ತೆಯ ಉದ್ದಕ್ಕೂ ಹೊಂಡ, ಗುಂಡಿಗಳು ಬಿದ್ದಿದ್ದು ಜಲ್ಲಿಗಳು ಕಿತ್ತು ಹೋಗಿವೆ.

ಸಮರ್ಪಕ ಚರಂಡಿಯ ಕೊರತೆಯೊಂದಿಗೆ, ಎರಡು ವರ್ಷಗಳ ಹಿಂದೆ ಒಳಚರಂಡಿ ಯೋಜನೆಗಾಗಿ ಅಗೆದ ರಸ್ತೆಯನ್ನು ಕೂಡ ಸಮರ್ಪಕವಾಗಿ ಪುನರ್‌ ನಿರ್ಮಿಸದೇ ಇರುವ ಪರಿಣಾಮ ರಸ್ತೆ ಸಂಪೂರ್ಣ ಹದಗೆಟ್ಟಿದೆ. ಪೇಟೆಯಲ್ಲಿ ಕಟ್ಟಡ ನಿರ್ಮಾಣದ ಸಂದರ್ಭ ಕಟ್ಟಡಗಳ ಮಾಲಕರು ಸೆಟ್‌ಬ್ಯಾಕ್‌ ನಿಯಮಗಳನ್ನು ಪಾಲಿಸದೇ ಇರುವುದರಿಂದ ಮಳೆ ನೀರು ರಸ್ತೆಯಲ್ಲಿಯೇ ಹರಿದು ಹೋಗುವಂತಾಗಿದೆ ಎನ್ನುತ್ತಾರೆ ಸ್ಥಳೀಯರು.

ಮಳೆ ನೀರು ನಿಂತು ರಸ್ತೆಯೇ ಕಾಣದೇ ಹಲವು ಅಪಘಾತಗಳು ನಡೆದಿರುವ ಉದಾಹರಣೆಗಳೂ ಇವೆ. ಮಳೆ ಬಂದಾಗ ಪಾದಚಾರಿಗಳು ಮತ್ತು ಅಂಗಡಿಗಳ ಮಂದಿಗೆ ನಿತ್ಯ ಕೆಸರಿನ ಸಿಂಚನವಾದರೆ, ಬಿಸಿಲಿರುವಾಗ ರಸ್ತೆಯ ಸುತ್ತಲೂ ಧೂಳು ಆವರಿಸಿ ತೊಂದರೆಯಾಗುತ್ತಿದೆ. ಕಾಪು ತಾಲೂಕಿನ ಹೃದಯ ಭಾಗದ ರಸ್ತೆಯೇ ಹೀಗಾದ್ರೆ ಉಳಿದ ರಸ್ತೆಗಳ ಪಾಡೇನು ಎಂಬ ಪ್ರಶ್ನೆಯೂ ಸಾರ್ವಜನಿಕರಿಂದ ಕೇಳಿಬರುತ್ತಿದ್ದು, ಜನಪ್ರತಿನಿಧಿಗಳಾಗಲೀ ಅಥವಾ ಅಧಿಕಾರಿಗಳಾಗಲೀ ಈ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ದೂರುತ್ತಿದ್ದಾರೆ.

ಜಲ್ಲಿ ಕಲ್ಲುಗಳ ರಾಶಿ
ಕಾಪು ಪೇಟೆಯ ಮುಖ್ಯ ರಸ್ತೆಯಲ್ಲಿ ಹೊಂಡಗಳು ಬಿದ್ದಿವೆ. ಇವುಗಳನ್ನು ತಪ್ಪಿಸಲು ಹೋಗಿ ಬೈಕ್‌ ಸವಾರರು ಬಿದ್ದು ಗಾಯಗೊಂಡ ಘಟನೆಗಳು ಕಣ್ಣಮುಂದೆಯೇ ನಡೆದಿವೆ. ಕೆಲವು ಕಡೆಗಳಲ್ಲಿ ಜಲ್ಲಿ ಕಲ್ಲುಗಳು ರಾಶಿ ಬಿದ್ದಿದ್ದು, ವಾಹನಗಳ ಚಕ್ರಗಳಿಗೆ ಸಿಲುಕಿ ಅಂಗಡಿಗಳ ಗಾಜುಗಳು ಕೂಡ ಪುಡಿಯಾಗಿವೆ. ಪುರಸಭೆ ಇಲ್ಲಿನ ಸಮಸ್ಯೆಗಳಿಂದ ಜನರಿಗೆ ಮುಕ್ತಿ ದೊರಕಿಸಿಕೊಡಬೇಕಿದೆ.
-ಸುಬ್ರಹ್ಮಣ್ಯ ಐತಾಳ್‌, ಉದ್ಯಮಿ

75 ಲಕ್ಷ ರೂ. ಅನುದಾನ ಬಿಡುಗಡೆ
ಕಾಪು ಪೇಟೆಯ ಮುಖ್ಯ ರಸ್ತೆಯಲ್ಲಿ ಮಳೆ ನೀರು ಹರಿದು ಹೋಗಲು ಸಮರ್ಪಕವಾದ ಚರಂಡಿ ವ್ಯವಸ್ಥೆ ಇಲ್ಲದಿರುವುದರಿಂದ ವಿವಿಧ ಸಮಸ್ಯೆಗಳು ಎದುರಾಗಿವೆ. ಈ ಬಗ್ಗೆ ಪುರಸಭೆಗೆ ಹಲವು ಬಾರಿ ಮನವಿ ಮಾಡಿಕೊಳ್ಳಲಾಗಿದೆ. ಇಲ್ಲಿನ ಹೊಂಡ ಮುಚ್ಚಲು ಪುರಸಭೆ ಕಾರ್ಯೋನ್ಮುಖವಾಗಿದ್ದು, ಮಳೆ ನಿಂತ ಕೂಡಲೇ ಸಮಸ್ಯೆಯನ್ನು ತಾತ್ಕಾಲಿಕವಾಗಿ ಪರಿಹರಿಸುವ ಭರವಸೆ ದೊರಕಿದೆ. ಈ ರಸ್ತೆಯು ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಗೆ ಬರುವ ಹಿನ್ನೆಲೆಯಲ್ಲಿ ಶಾಸಕ ಲಾಲಾಜಿ ಆರ್‌. ಮೆಂಡನ್‌ ಅವರು ಮುತುವರ್ಜಿ ವಹಿಸಿ 75 ಲಕ್ಷ ರೂ. ಅನುದಾನ ಬಿಡುಗಡೆಗೊಳಿಸಿದ್ದು, ಮಳೆಯ ಕಾರಣ ಕಾಮಗಾರಿ ವಿಳಂಬವಾಗಿದ್ದು, ಶೀಘ್ರ ನಡೆಯಬಹುದೆಂಬ ನಿರೀಕ್ಷೆ ಇದೆ.
– ಅನಿಲ್‌ ಕುಮಾರ್‌, ವಾರ್ಡ್‌ ಸದಸ್ಯರು, ಕಾಪು ಪುರಸಭೆ

ಸ್ಪಂದಿಸುವ ಭರವಸೆ
ಕಾಪು ಪೇಟೆಯ ಮುಖ್ಯ ರಸ್ತೆಯು ಲೋಕೋಪಯೋಗಿ ಇಲಾಖೆಯ ಅಧೀನಕ್ಕೆ ಬರುತ್ತದೆ. ಅದರೊಂದಿಗೆ ಇಲ್ಲಿ ಒಳಚರಂಡಿ ಯೋಜನೆಯ ಕಾಮಗಾರಿಯೂ ನಡೆದಿರುವುದರಿಂದ ಕೆಲವೊಂದು ಸಮಸ್ಯೆಗಳು ಎದುರಾಗಿವೆ. ರಸ್ತೆ ಅವ್ಯವಸ್ಥೆ ಬಗ್ಗೆ ಎರಡೂ ಇಲಾಖೆಗಳೊಂದಿಗೆ ಮಾತುಕತೆ ನಡೆಸಲಾಗಿದೆ. ಎರಡೂ ಇಲಾಖೆಗಳೂ ಈ ಬಗ್ಗೆ ಸ್ಪಂದಿಸುವ ಭರವಸೆ ನೀಡಿವೆ. ರಸ್ತೆ ಬದಿಯ ಚರಂಡಿಗಳು ಹೂಳು ತುಂಬಿ ಮುಚ್ಚಲ್ಪಟ್ಟಿರುವುದರಿಂದ ಹೀಗಾಗಿದೆ. ಮಳೆ ಮುಗಿದ ಅನಂತರ ತೇಪೆ ಕಾರ್ಯ ನಡೆಸಲಾಗುವುದು. ಮುಂದಿನ ಮಳೆಗಾಲದ ಮೊದಲು ಚರಂಡಿಯನ್ನು ತೆರೆದು ಕೊಟ್ಟು ಪೂರ್ಣ ಕಾಮಗಾರಿ ನಡೆಸಲಾಗುವುದು.
– ವೆಂಕಟೇಶ್‌ ನಾವಡ, ಮುಖ್ಯಾಧಿಕಾರಿ, ಕಾಪು ಪುರಸಭೆ

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.