ಕಾಮಗಾರಿಗಾಗಿ ತಿಂಗಳ ಹಿಂದೆ ಅಗೆದು ಹಾಕಿದ ರಸ್ತೆಯಿಂದ ಸಮಸ್ಯೆ

ಉದ್ಯಾವರ-ಪಿತ್ರೋಡಿ: ಸಂಚಾರಿಗಳು ಬಾಣಲೆಯಿಂದ ಬೆಂಕಿಗೆ

Team Udayavani, Jun 20, 2022, 2:58 PM IST

13

ಕಟಪಾಡಿ: ಈಗಾಗಲೇ ಹದಗೆಟ್ಟು ಸಂಕಟದ ಸಂಚಾರ ನಡೆಸುತ್ತಿದ್ದ ಉದ್ಯಾವರ-ಪಿತ್ರೋಡಿ ರಸ್ತೆ ಸಂಚಾರಿಗಳದ್ದು ಬಾಣಲೆಯಿಂದ ಬೆಂಕಿಗೆ ಬಿದ್ದ ಪರಿಸ್ಥಿತಿಯಂತಾಗಿದೆ.

ಉದ್ಯಾವರ ಪೇಟೆಯಿಂದ ಪಿತ್ರೋಡಿ ಸಂಪರ್ಕದ ಈ ಪ್ರಮುಖ ರಸ್ತೆಯು ಸದಾ ವಾಹನ ದಟ್ಟಣೆ, ಜನನಿಬಿಡವಾಗಿರುತ್ತದೆ. ಗ್ರಾ.ಪಂ. ಕಚೇರಿ, ಮೆಸ್ಕಾಂ ಕಚೇರಿ, ಸರಕಾರಿ ಪದವಿ ಪೂರ್ವ ಕಾಲೇಜು, ವಸತಿ ಸಂಕೀರ್ಣಗಳು, ವಾಣಿಜ್ಯ ಸಂಕೀರ್ಣಗಳು, ಸಾಕಷ್ಟು ಜನವಸತಿ ಪ್ರದೇಶವನ್ನು ಹೊಂದಿರುವ ಈ ಭಾಗದಲ್ಲಿನ ಪ್ರಮುಖ ಸಂಪರ್ಕ ರಸ್ತೆಯು ಹೊಂಡಗುಂಡಿಯಿಂದ ಕೂಡಿದ್ದು ರಸ್ತೆಯ ವಿಸ್ತರಣೆ ಯೊಂದಿಗೆ ಸುಸಜ್ಜಿತ ರಸ್ತೆಯ ಆವಶ್ಯಕತೆಯ ಬಗ್ಗೆ ಉದಯವಾಣಿಯು ಈ ಹಿಂದೆಯೂ ವರದಿಯನ್ನು ಪ್ರಕಟಿಸಿತ್ತು.

ಕಾಮಗಾರಿ ಆರಂಭದ ಸಂತಸ

ಆ ನಿಟ್ಟಿನಲ್ಲಿ ʼನಮ್ಮ ಗ್ರಾಮ ನಮ್ಮ ರಸ್ತೆ’ ಯೋಜನೆಯಡಿ ಕಾಮಗಾರಿಯು ಮಂಜೂರು ಗೊಂಡಿದ್ದು ರಸ್ತೆ ಕಾಂಕ್ರಿಟ್‌ಗಾಗಿ ಉದ್ಯಾವರ ಗ್ರಾ.ಪಂ. ಮುಂಭಾಗದಿಂದ ಪಶ್ಚಿಮಕ್ಕೆ ಸುಮಾರು 1 ಕಿ.ಮೀ. ರಸ್ತೆಯನ್ನು ಅಗೆದು ಹಾಕಲಾಗಿದ್ದು, ಈ ಭಾಗದ ಸಂಚಾರಿಗಳಲ್ಲಿ ರಸ್ತೆಯ ಅಭಿವೃದ್ಧಿ ಕಾಮಗಾರಿಯ ಆರಂಭದ ಮುನ್ಸೂಚನೆಯು ಸಂತಸವನ್ನು ತಂದಿತ್ತು.

ಇದೀಗ ರಸ್ತೆ ಅಗೆದು ಹಾಕಿ ಸುಮಾರು 30 ದಿನಗಳು ಕಳೆದರೂ ಯಾವುದೇ ಕಾಮಗಾರಿಯು ನಡೆದಿಲ್ಲ. ಶಾಲಾ ವಾಹನಗಳು, ಬಸ್‌, ರಿಕ್ಷಾ, ಸಹಿತ ನೂರಾರು ವಾಹನಗಳು ಇದೇ ರಸ್ತೆಯನ್ನು ಬಳಸಿ ಸಂಚರಿಸಬೇಕಿದೆ.

ಇದೀಗ ಅಗೆದು ಹಾಕಿದ ರಸ್ತೆಯಲ್ಲಿ ಸಂಚರಿಸುವ ದ್ವಿಚಕ್ರವಾಹನ, ಸೈಕಲ್‌, ರಿಕ್ಷಾದಂತಹ ವಾಹನಗಳ ಬಿಡಿಭಾಗಗಳು ಉದುರಿ ಬೀಳುವ ದುಸ್ಥಿತಿ ಇದೆ. ರಿಕ್ಷಾದಲ್ಲಿ ಪ್ರಯಾಣಿಕರು ಸುಸ್ಥಿತಿಯಲ್ಲಿ ಕುಳಿತುಕೊಳ್ಳಲು ಆಗದ ಪರಿಸ್ಥಿತಿಯನ್ನು ತಂದೊಡ್ಡಿದೆ ಎಂದು ರಿಕ್ಷಾ ಚಾಲಕರು ಪರಿತಪಿಸುತ್ತಿದ್ದಾರೆ. ಅವ್ಯವಸ್ಥೆ ಸಹಜ, ನಿರ್ಲಕ್ಷ್ಯ ಸಲ್ಲ

ಅಭಿವೃದ್ಧಿ ಕೆಲಸ ಕಾರ್ಯಗಳು ನಡೆಯುವ ಸಂದರ್ಭದಲ್ಲಿ ಇಂತಹ ಅವ್ಯವಸ್ಥೆಯು ಆಗುವುದು ಸಹಜ. ಆದರೂ ಒಂದು ತಿಂಗಳಿಂದ ಅಗೆದು ಹಾಕಿರುವ ರಸ್ತೆಯ ಭಾಗದಲ್ಲಿ ಕಾಮಗಾರಿಯನ್ನು ನಡೆ ಸದೆ ಸಂಬಂಧಪಟ್ಟ ಅಧಿಕಾರಿಗಳು, ಗುತ್ತಿಗೆ ದಾರರ ನಿರ್ಲಕ್ಷ್ಯದಿಂದ ಜನರ ತಾಳ್ಮೆಯನ್ನು ಪರೀಕ್ಷಿಸುವುದು ಸರಿಯಲ್ಲ ಎಂದು ವಾಹನಗಳ ಚಾಲಕರು, ಮಾಲಕರು ತಮ್ಮ ಅಸಹನೆಯನ್ನು ವ್ಯಕ್ತಪಡಿಸುತ್ತಿದ್ದು, ಜನಪ್ರತಿನಿಧಿಗಳು ಈ ಬಗ್ಗೆ ಗಮನ ಹರಿಸುವಂತೆ ಒತ್ತಾಯಿಸುತ್ತಿದ್ದಾರೆ.

ಧಾರಾಕಾರ ಮಳೆ ಸುರಿದಲ್ಲಿ ಶಾಲಾ ವಾಹನಗಳಲ್ಲಿ ಸಂಚರಿಸುವ ವಿದ್ಯಾರ್ಥಿಗಳ ಪಾಡು, ದ್ವಿಚಕ್ರ ವಾಹನ ಸವಾರರ ಪಾಡು, ಪಾದಚಾರಿಗಳ ಸಂಚಾರದ ಸರ್ಕಸ್‌, ಶಾಲೆಯ ಮಕ್ಕಳು, ಸರಕಾರಿ ಕಚೇರಿಗಳಿಗೆ ಬರುವ ಗ್ರಾಮಸ್ಥರ ಪಾಡು ಹೇಳತೀರದಾಗಿದೆ. ಕೂಡಲೇ ಸಂಬಂಧಪಟ್ಟ ಇಲಾಖೆಯು ಎಚ್ಚೆತ್ತು ವಾಹನಗಳ ಸಂಚಾರಕ್ಕೆ ಅನುಕೂಲವಾಗುವಂತೆ ರಸ್ತೆಯನ್ನು ಮುಚ್ಚದೆ ಕಾಮಗಾರಿಯನ್ನು ನಡೆಸಿ ಸುಗಮ ಸಂಚಾರಕ್ಕೆ ಸುವ್ಯವಸ್ಥೆಯನ್ನು ಕಲ್ಪಿಸುವಂತೆ ವಾಹನ ಮಾಲಕರು, ಚಾಲಕರು, ನಿತ್ಯ ಸಂಚಾರಿಗಳು ಆಗ್ರಹಿಸಿದ್ದಾರೆ.

ದುಡಿದ ಹಣ ಗ್ಯಾರೇಜ್‌ ಗೆ: ಮೊದಲೇ ಹೊಂಡ ಗುಂಡಿಯಿಂದ ಕೂಡಿದ್ದ ರಸ್ತೆ. ಇದೀಗ ಕಳೆದ ಒಂದು ತಿಂಗಳಿಂದ ಅಗೆದು ಹಾಕಿದ್ದು, ಗಟ್ಟಿ ಕಲ್ಲುಗಳಿಂದ ಕೂಡಿದ್ದು ರಿಕ್ಷಾ ಸಂಚರಿಸುವಾಗ ಸ್ಪೇರ್‌ ಪಾರ್ಟ್ಸ್ ಉದುರುವಂತಾಗಿದೆ. ಬಾಡಿಗೆಯಲ್ಲಿ ದುಡಿದ ಹಣವನ್ನು ಗ್ಯಾರೇಜ್‌ಗೆ ವಿನಿಯೋಗಿಸು ವಂತಾಗಿದೆ. ಪ್ರಯಾಣಿಕರು ರಿಕ್ಷಾದಲ್ಲಿ ಕುಳಿತು ಕೊಳ್ಳಲು ಅವಸ್ಥೆ ಪಡುವಂತಾಗಿದೆ. ರಸ್ತೆಯನ್ನು ಬಂದ್‌ ಮಾಡದೆ, ವಾಹನ ಸಂಚಾರಕ್ಕೆ ಅವಕಾಶವನ್ನು ನೀಡಿ ಕೂಡಲೇ ಕಾಮಗಾರಿಯನ್ನು ಕೈಗೆತ್ತಿಕೊಂಡು ಪೂರ್ಣಗೊಳಿಸು ವಂತೆ ಆಗ್ರಹಿಸುತ್ತೇವೆ. –ಗಣೇಶ್‌ ಕೋಟ್ಯಾನ್‌, ಅಧ್ಯಕ್ಷರು, ರಿಕ್ಷಾ ಚಾಲಕರ ಮಾಲಕರ ಸಂಘ, ಉದ್ಯಾವರ

ಶೀಘ್ರ ಕಾಮಗಾರಿ:  ಸುಮಾರು 2 ಕಿ.ಮೀ. ವ್ಯಾಪ್ತಿಯಲ್ಲಿ 7.5 ಮೀ. ಅಗಲದ ಸುಸಜ್ಜಿತ ರಸ್ತೆಯ ಕಾಮಗಾರಿಯು ನಡೆಯಲಿದೆ. ಟೆಂಡರ್‌ ಅವಧಿಯೊಳಗೆ ಕಾಮಗಾರಿಯನ್ನು ಪೂರೈಸಲಾಗುತ್ತದೆ. ಸಾರ್ವಜನಿಕರ ಸಹಕಾರ ನೀಡಬೇಕಿದೆ. –ಮಿಥುನ್‌, ಇಲಾಖೆಯ ಎಂಜಿನಿಯರ್‌

ಸಂಚಾರ ಸಂಕಷ್ಟ: ದ್ವಿಚಕ್ರವಾಹನದಲ್ಲಿ ಸಂಚರಿಸುವವರಿಗೂ ಸಂಕಟ ತಂದೊಡ್ಡುತ್ತಿದೆ. ಅಗೆದು ಹಾಕಿದ ರಸ್ತೆಯ ಕಲ್ಲಿನಲ್ಲಿ ಸಂಚರಿಸುವಾಗ ಭಯವಾಗುತ್ತಿದೆ.ಮಳೆಗಾಲದಲ್ಲಿ ಈ ಭಾಗವು ಹೊಳೆಯಂತಾಗಲಿದೆ. ಶಾಲಾ ಮಕ್ಕಳ, ಸಾರ್ವಜನಿಕರ ಸಂಚಾರಕ್ಕೂ ಕುತ್ತು ತರಲಿದೆ. ಅಭಿವೃದ್ಧಿ ಕಾಮಗಾರಿಯನ್ನು ಪೂರ್ಣಗೊಳಿಸುವಲ್ಲಿ ಇಲಾಖೆಯ ಜಾಣಕುರುಡು ಸಮಂಜಸವಲ್ಲ. ಕೂಡಲೇ ಎಚ್ಚೆತ್ತು ಸಂಚಾರಕ್ಕೆ ಸುವ್ಯವಸ್ಥೆಯನ್ನು ಕಲ್ಪಿಸುವಂತೆ ಒತ್ತಾಯಿಸುತ್ತೇನೆ. – ಜಯಶ್ರೀ ಕೋಟ್ಯಾನ್‌, ಉದ್ಯಾವರ

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.