ಜಾಗದ ಖಾತೆ ಕ್ಯಾತೆ, ಸಾರ್ವಜನಿಕರಿಗೆ ಚಿಂತೆ!

ಈಗಿನ ನಿಯಮದಿಂದ ತೊಡಕು, ಸಮಸ್ಯೆ ನಿವಾರಣೆಗೆ ಪ್ರಧಾನಿಗೆ ಪತ್ರ

Team Udayavani, Aug 11, 2020, 5:26 AM IST

ಜಾಗದ ಖಾತೆ ಕ್ಯಾತೆ, ಸಾರ್ವಜನಿಕರಿಗೆ ಚಿಂತೆ!

ಸಾಂದರ್ಭಿಕ ಚಿತ್ರ

ಕಾರ್ಕಳ: ಜಾಗದ ಖಾತೆಗೆ ಸಂಬಂಧಿಸಿ ಸರಕಾರದ ನಿಯಮಗಳಲ್ಲಿನ ತೊಡಕಿನಿಂದ 2ಕ್ಕೂ ಅಧಿಕ ವರ್ಷಗಳಿಂದ ಕಾರ್ಕಳ ಪುರಸಭೆ ವ್ಯಾಪ್ತಿಯಲ್ಲಿನ ಖಾತೆ ಬದಲಾವಣೆ ಕಡತಗಳು ವಿಲೇ ಆಗದೆ, ನಿವೇಶನ, ಮನೆ, ಕಾಂಪ್ಲೆಕ್ಸ್‌ ಮೊದಲಾದ ಆಸ್ತಿಗಳ ಕ್ರಯ, ವಿಕ್ರಯ, ಪೌತಿ ಬದಲಾವಣೆ ಆಗದೇ ಜನಸಾಮಾನ್ಯರಿಗೆ ತೊಂದರೆಯಾಗಿದೆ.

ಪುರಸಭಾ ವ್ಯಾಪ್ತಿಯಲ್ಲಿ 2 ವರ್ಷಗಳಿಂದ ಜಾಗದ ಖಾತೆ ಸಿಗುತ್ತಿಲ್ಲ. ನಾಗರಿಕರು ಜಾಗ ಮಾರಾಟ ಮಾಡಲು, ಮನೆ ಕಟ್ಟಲು, ವಿಭಾಗ ಪತ್ರ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ವ್ಯಾಪಾರ ವಹಿವಾಟು ಇಲ್ಲದೆ ಜನರ ಆರ್ಥಿಕ ಪರಿಸ್ಥಿತಿ ಹದಗೆಟ್ಟು ಹೋಗಿವೆ. ನಗರಾಭಿವೃದ್ಧಿ ಪ್ರಾಧಿಕಾರದ ಕೆಲ ಕಾಯ್ದೆ- ಕಾನೂನುಗಳಿಂದ ಈ ಗೊಂದಲ ಏರ್ಪಟ್ಟಿದೆ.

ಕಾನೂನಿನ ತೊಡಕು ನಿವಾರಿಸುವಂತೆ ಸಾರ್ವಜನಿಕರ ದೂರಿನನ್ವಯ ಇಲ್ಲಿನ ಬಳಕೆದಾರರ ಹಿತಾರಕ್ಷಣಾ ವೇದಿಕೆ ಕಳೆದ ಹಲವು ವರ್ಷಗಳಿಂದ ಹೋರಾಟಗಳನ್ನು ನಡೆಸಿದೆ. ಹಿರಿಯರಾದ ಗಣಪತಿ ಕಾಮತ್‌ ಮತ್ತು ಅರುಣ್‌ಕುಮಾರ್‌ ಪುರಾಣಿಕ್‌ ಅವರು ಸರಕಾರ, ಪ್ರಧಾನಿ ಮೋದಿಯವರಿಗೂ ಪತ್ರ ಬರೆದಿದ್ದಾರೆ. ಈಗಿನ ನಿಯಮದಿಂದ ಜನರಿಗೆ ತೊಡಕಾಗುವ ಸಮಸ್ಯೆಗಳನ್ನು ನಿವಾರಿಸುವಂತೆ ಸಲ್ಲಿಸಿದ ಮನವಿಗೂ ಸ್ಪಂದನೆ ಸಿಕ್ಕಿಲ್ಲ.

ಕಾರ್ಕಳ ಪುರಸಭೆ ಒಂದರಲ್ಲೇ ಸುಮಾರು 300ಕ್ಕೂ ಅಧಿಕ ಕಡತಗಳು ಜಾಗದ ಖಾತೆಗಾಗಿ ಹಾಗೂ 200ಕ್ಕೂ ಅಧಿಕ ಕಡತಗಳು ಕಟ್ಟಡ ಪರವಾನಿಗೆ ಪಡೆಯಲು ಕಾಯುತ್ತಿವೆ. ಕಟ್ಟಡ ಕಾಮಗಾರಿಗಳು ನಿಂತಿವೆ. ಮಕ್ಕಳ ಮದುವೆ, ಆರೋಗ್ಯ ಸಮಸ್ಯೆಗೆಂದು ಆಸ್ಪತ್ರೆಯ ಖರ್ಚು ಇತ್ಯಾದಿಗಳಿಗೆ ಹಣ ಹೊಂದಿಸಲು ಜಾಗ ಮಾರಾಟ ಮಾಡಲು ಉದ್ದೇಶಿಸಿದವರು ಸಮಸ್ಯೆಗೆ ಸಿಲುಕಿ ಒದ್ದಾಡುತ್ತಿದ್ದಾರೆ.

ಭೂ ಪರಿವರ್ತನೆಯಾಗಿರುವ ಜಮೀನುಗಳನ್ನು ಯಾವುದೇ ಈಗಿನ ನಿಬಂಧನೆಗಳಿಗೆ ಒಳಪಡಿಸದೇ ವಿಂಗಡಿಸಿ, ಮಾರಾಟ ಮಾಡಲು ಅಥವಾ ಗೃಹ ನಿರ್ಮಾಣ ಮಾಡಲು ಖಾತೆಯನ್ನು ನೀಡುವಂತೆ ಒತ್ತಾಯವಿದ್ದು, ಉದ್ಯೋಗ ಸೃಷ್ಟಿ ಹಾಗೂ ದಿನಕೂಲಿ ನೌಕರರಿಗೆ ಇದರಿಂದ ಅನುಕೂಲವಾಗಲಿದೆ.

ತೊಡಕು ನಿವಾರಣೆಗೆ ಪ್ರಯತ್ನ
ಜಾಗದ ಖಾತೆ ಬದಲಾವಣೆಗೆ ಸಂಬಂಧಿಸಿ ಸ್ಥಳೀಯವಾಗಿ ಅಂದರೆ ಜಿಲ್ಲಾಡಳಿತದ ವ್ಯಾಪ್ತಿಯಲ್ಲಿ ತೊಡಕುಗಳು ಇದ್ದಲ್ಲಿ ಅದನ್ನು ಪರಿಹರಿಸುವ ನಿಟ್ಟಿನಲ್ಲಿ ಪ್ರಯತ್ನಿಸುವೆ. ಸರಕಾರದ ಮಟ್ಟದಲ್ಲಿ ಆಗುವಂತಹ ಪ್ರಕರಣವಾಗಿದ್ದರೆ ಸರಕಾರದ ಗಮನಕ್ಕೆ ತರಬೇಕಾಗುತ್ತದೆ. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳುವೆ
-ಜಗದೀಶ್‌ ಜಿ., ಜಿಲ್ಲಾಧಿಕಾರಿಗಳು ಉಡುಪಿ ಜಿಲ್ಲೆ

ಪ್ರಧಾನಿಗೆ ಪತ್ರ
ಖಾತೆ ಬದಲಾವಣೆ ವಿಚಾರದಲ್ಲಿ ಈಗಿನ ಕಾನೂನಿನಿಂದ ಆಗುವ ಅನಾನುಕೂಲವನ್ನು ಸರಳವಾಗಿಸಿ, ಜನರಿಗೆ ಅನುಕೂಲವಾಗುವಂತೆ ನಿಯಮ ಸಡಿಲಿಸುವಂತೆ ಸರಕಾರ ಮತ್ತು ಪ್ರಧಾನಿಗೆ ಕಳೆದ ಮಾರ್ಚ್‌ನಲ್ಲಿ ಪತ್ರ ಬರೆದಿದ್ದೇವೆ. ಉತ್ತರಕ್ಕಾಗಿ ನಿರೀಕ್ಷಿಸಲಾಗುತ್ತಿದೆ.
-ಅರುಣ್‌ಪುರಾಣಿಕ್‌, ಬಳಕೆದಾರರ ಹಿತರಕ್ಷಣೆ ವೇದಿಕೆ, ಕಾರ್ಕಳ

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.