ಶಾಲೆ-ಕಾಲೇಜುಗಳ ಮೇಲೆ ಬೀರಿದ ಕಳ್ಳರ ಕೆಂಗಣ್ಣು


Team Udayavani, Nov 8, 2022, 6:55 AM IST

ಶಾಲೆ-ಕಾಲೇಜುಗಳ ಮೇಲೆ ಬೀರಿದ ಕಳ್ಳರ ಕೆಂಗಣ್ಣು

ಉಡುಪಿ/ಮಂಗಳೂರು: ಉಭಯ ಜಿಲ್ಲೆಗಳ ಶಾಲೆ- ಕಾಲೇಜುಗಳ ಮೇಲೆ ಕಳ್ಳರ ಕೆಂಗಣ್ಣು ಬಿದ್ದಿದೆ. ಹಲವು ಶಾಲೆ, ಕಾಲೇಜುಗಳಿಗೆ ನುಗ್ಗಿದ್ದ ಕಳ್ಳರು ಅಲ್ಲಿ ಸಂಗ್ರಹಿಸಿಟ್ಟಿದ್ದ ನಗದು, ಸೊತ್ತುಗಳನ್ನು ಕಳವುಗೈದಿದ್ದಾರೆ.

ಆದಿಉಡುಪಿ ಶಾಲೆ: ಕಳವು
ಉಡುಪಿ: ಆದಿಉಡುಪಿ ಪ್ರೌಢಶಾಲೆ ಯಲ್ಲಿ ಸಾವಿರಾರು ರೂ. ಮೌಲ್ಯದ ಸೊತ್ತುಗಳನ್ನು ಕಳ್ಳರು ಕಳವುಗೈದ ಘಟನೆ ನಡೆದಿದೆ. ರವಿವಾರ ತಡರಾತ್ರಿ ಈ ಘಟನೆ ನಡೆದಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಕಳ್ಳರು ಶಾಲಾ ಕಚೇರಿಯ ಬೀಗ ಒಡೆದು ಒಳಪ್ರವೇಶಿಸಿ, ಕಪಾಟಿನಲ್ಲಿದ್ದ 8,900 ರೂ. ಮೌಲ್ಯದ ಆರ್‌.ಡಿ., 1,644 ರೂ. ನಗದು, 4,425 ರೂ.ನ ಪ್ರಿಂಟರ್‌, ಝೆರಾಕ್ಸ್‌ನಿಂದ ಬಂದ 3,796 ರೂ., ಅಕ್ಷರ ದಾಸೋಹದ 5,179 ರೂ., ಎಸೆಸೆಲ್ಸಿ ಪರೀಕ್ಷಾ ಶುಲ್ಕ 17,200 ರೂ., ಉಳಿದ 4 ಸಾವಿರ ರೂ. ಸಹಿತ ಒಟ್ಟು 45,144 ರೂ. ನಗದು ಕಳವು ಮಾಡಲಾಗಿದೆ. ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಲ್ಪೆ: ಎರಡು ಶಾಲೆಗಳಲ್ಲಿ ಕಳವು
ಮಲ್ಪೆ: ಮಲ್ಪೆ ಫಿಶರೀಶ್‌ ಮತ್ತು ಗಾಂಧಿ ಶತಾಬ್ದ ಶಾಲೆಗೆ ರವಿವಾರ ರಾತ್ರಿ ಕಳ್ಳರು ನುಗ್ಗಿದ್ದಾರೆ.
ಮಲ್ಪೆ ಕಾಲೇಜಿನ ಪ್ರಾಂಶುಪಾಲ ಕೊಠಡಿಯ ಬಾಗಿಲು ಚಿಲಕ ಮುರಿದು ಒಳ ಪ್ರವೇಶಿಸಿದ್ದ ಕಳ್ಳರು ಕಾಪಾಟಿನಲ್ಲಿ ಇಟ್ಟಿದ್ದ 5,000 ರೂ. (ಪರೀಕ್ಷಾ ಶುಲ್ಕ) ನಗದು ಹಾಗೂ ಈ ಹಿಂದೆ ಸರಕಾರದಿಂದ ಕಾಲೇಜಿಗೆ ನೀಡಲಾಗಿದ್ದ ಚಿನ್ನದ ಪದಕವನ್ನು ಎಗರಿಸಿದ್ದಾರೆ. ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯರ ಮತ್ತು ಸ್ಟಾಫ್‌ರೂಮಿನ ಬಾಗಿಲು ತೆರೆದು 6 ಕಾಪಾಟುಗಳ ಬೀಗ ಮುರಿದಿದ್ದಾರೆ. ಏನೂ ಸಿಗದ ಅವರು ಅಲ್ಲಿಟ್ಟಿದ್ದ 10 ಎಲ್‌ಇಡಿ ಬಲುºಗಳನ್ನು ಕೊಂಡೊಯ್ದಿದ್ದಾರೆ. ಗಾಂಧಿ ಶತಾಬ್ದ ಶಾಲೆಯ ಬಾಗಿಲು ಮುರಿದ ಕಳ್ಳರು ಅಲ್ಲಿ ಏನೂ ಸಿಗದೆ ವಾಪಸಾಗಿದ್ದಾರೆ.

ಹಳೆಯಂಗಡಿ ಕಾಲೇಜಿನಲ್ಲಿ ಕಳವು
ಹಳೆಯಂಗಡಿ: ಇಲ್ಲಿನ ಶ್ರೀ ನಾರಾಯಣ ಸನಿಲ್‌ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಳ್ಳತನ ನಡೆದಿದೆ. ಕಾಲೇಜಿನ ಕಚೇರಿಯಲ್ಲಿದ್ದ 10 ಕಪಾಟಿನಲ್ಲಿ 8 ಕಪಾಟನ್ನು ಒಡೆದಿರುವ ಕಳ್ಳರು ಕಪಾಟಿನಲ್ಲಿದ್ದ ಅಮೂಲ್ಯ ದಾಖಲೆಗಳನ್ನು ತಡಕಾಡಿ ಚೆಲ್ಲಾಪಿಲ್ಲಿ ಮಾಡಿಟ್ಟಿದ್ದಾರೆ. ಕಪಾಟಿನಲ್ಲಿದ್ದ ಸುಮಾರು 15 ಸಾವಿರ ರೂ. ನಗದನ್ನು ಕದ್ದಿದ್ದಾರೆ. ಕಚೇರಿಯ ಬಾಗಿಲನ್ನು ಒಡೆದು, ಗ್ರಿಲ್ಸ್‌ನ ಬೀಗ ತೆಗೆದು ಈ ಕೃತ್ಯ ನಡೆಸಿದ್ದಾರೆ. ಮೂಲ್ಕಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಕಾಲೇಜಿನ ಮೈದಾನಕ್ಕೆ ಹೊರಗಿನ ವ್ಯಕ್ತಿಗಳು ಅಕ್ರಮವಾಗಿ ಪ್ರವೇಶಿಸುತ್ತಿರುವ ಬಗ್ಗೆ ಆಗಾಗ್ಗೆ ಗ್ರಾಮಸಭೆಗಳಲ್ಲಿ ದೂರುಗಳು ಕೇಳಿ ಬಂದಿದ್ದವು.

ಟಾಪ್ ನ್ಯೂಸ್

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್

1-sadsadsd

ಪ್ರಧಾನಿಯವರ ಮನೆಯ ಹೊರಗೆ ಧರಣಿ ನಡೆಸುತ್ತೇನೆ: ಮಮತಾ ಬ್ಯಾನರ್ಜಿ

ಅಧಿಕ ಲಾಭಾಂಶ ನೀಡುವುದಾಗಿ ಹಣ ಪಡೆದು ಎನ್ ಐಟಿಕೆ ವಿದ್ಯಾರ್ಥಿಯಿಂದ 27.96 ಲ.ರೂ ವಂಚನೆ

ಧರ್ಮಸ್ಥಳ: ಲಾರಿ- ಬೈಕ್ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ

ಧರ್ಮಸ್ಥಳ: ಲಾರಿ- ಬೈಕ್ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ

ವಿಚಾರಣೆ ನೆಪದಲ್ಲಿ ಖೈದಿಗಳ ಹಲ್ಲನ್ನೇ ಕಿತ್ತ ಐಪಿಎಸ್ ಅಧಿಕಾರಿ ಕರ್ತವ್ಯದಿಂದ ಅಮಾನತು

ವಿಚಾರಣೆ ನೆಪದಲ್ಲಿ ಖೈದಿಗಳ ಹಲ್ಲನ್ನೇ ಕಿತ್ತ ಐಪಿಎಸ್ ಅಧಿಕಾರಿ ಕರ್ತವ್ಯದಿಂದ ಅಮಾನತು

goa budget

ಗೋವಾ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಪ್ರಮೋದ್ ಸಾವಂತ್‌



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂದಾರ್ತಿ ದೇವಸ್ಥಾನಕ್ಕೆ ರಜತ ರಥ ಸಮರ್ಪಣೆ

ಮಂದಾರ್ತಿ ದೇವಸ್ಥಾನಕ್ಕೆ ರಜತ ರಥ ಸಮರ್ಪಣೆ

ಉಡುಪಿ, ದಕ್ಷಿಣಕನ್ನಡ ಜಿಲ್ಲೆಯ ನಾಲ್ವರು ಅಧಿಕಾರಿ, ಸಿಬಂದಿಗೆ ಮುಖ್ಯಮಂತ್ರಿ ಪದಕ

ಉಡುಪಿ, ದಕ್ಷಿಣಕನ್ನಡ ಜಿಲ್ಲೆಯ ನಾಲ್ವರು ಅಧಿಕಾರಿ, ಸಿಬಂದಿಗೆ ಮುಖ್ಯಮಂತ್ರಿ ಪದಕ

ಆಸ್ಟ್ರೇಲಿಯಾದ ಸ್ಟೀರಿಂಗ್‌ ಕಮಿಟಿ ಸಭೆ: ರಘುವೀರ್‌ ಪೈಗೆ ಆಹ್ವಾನ

ಆಸ್ಟ್ರೇಲಿಯಾದ ಸ್ಟೀರಿಂಗ್‌ ಕಮಿಟಿ ಸಭೆ: ರಘುವೀರ್‌ ಪೈಗೆ ಆಹ್ವಾನ

ಕುತ್ಯಾರು: ತಿಂಗಳ ಹಿಂದೆ ಖರೀದಿಸಿದ ರಿಕ್ಷಾದಲ್ಲಿ ಬಾಡಿಗೆ ಹೋದ ವ್ಯಕ್ತಿ ನಾಪತ್ತೆ

ಕುತ್ಯಾರು: ತಿಂಗಳ ಹಿಂದೆ ಖರೀದಿಸಿದ ರಿಕ್ಷಾದಲ್ಲಿ ಬಾಡಿಗೆ ಹೋದ ವ್ಯಕ್ತಿ ನಾಪತ್ತೆ

ಕೋಟ ಡಾ. ಶಿವರಾಮ ಕಾರಂತರ ಆಪ್ತ ಸಹಾಯಕಿ ಮಾಲಿನಿ ಮಲ್ಯ ನಿಧನ

ಕೋಟ ಡಾ. ಶಿವರಾಮ ಕಾರಂತರ ಆಪ್ತ ಸಹಾಯಕಿ ಮಾಲಿನಿ ಮಲ್ಯ ನಿಧನ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1-sasdsad

ದೆಹಲಿ-ಎನ್‌ಸಿಆರ್‌ನಲ್ಲಿ ಗುಡುಗು ಸಹಿತ ಮಳೆ; 9 ವಿಮಾನಗಳು ಬೇರೆಡೆಗೆ

1-asdsdsd

ಜಿಲ್ಲೆಯಲ್ಲಿ 1,239 ರೌಡಿಶೀಟರ್ ಗಳು: ವಿಜಯಪುರ ಡಿಸಿ ಡಾ.ವಿ.ಬಿ.ದಾನಮ್ಮನವರ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

1-qe21ew2qe

ಅಭ್ಯರ್ಥಿಗಳು ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು: ಬಳ್ಳಾರಿ ಡಿಸಿ ಪವನ್ ಕುಮಾರ್

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್