ದೇಗುಲದ ಗೋಪುರವೇ ವಲಸೆ ಕಾರ್ಮಿಕರ ಮಕ್ಕಳಿಗೆ ಜ್ಞಾನದೇಗುಲ

ಏಣಗುಡ್ಡೆ ಶ್ರೀ ದುರ್ಗಾಪರಮೇಶ್ವರೀ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ

Team Udayavani, Nov 16, 2019, 5:27 AM IST

tt-14

19ನೆಯ ಶತಮಾನದ ಉತ್ತರಾರ್ಧದಲ್ಲಿ ಬ್ರಿಟಿಷ್‌ ಆಡಳಿತದಡಿ, ಊರ ಹಿರಿಯರ ಮುತುವರ್ಜಿಯಲ್ಲಿ ಸ್ಥಾಪನೆಗೊಂಡು ಈಗಲೂ ವಿದ್ಯೆಯ ಬೆಳಕನ್ನು ಪಸರಿಸುತ್ತಿರುವ ಹಲವು ಸರಕಾರಿ ಶಾಲೆಗಳು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿವೆ. ಈಗಿನ ಆಂಗ್ಲ ಮಾಧ್ಯಮ ಶಿಕ್ಷಣದ ಆಕರ್ಷಣೆಯ ನಡುವೆ ಈ ಶಾಲೆಗಳು ಸುತ್ತಮುತ್ತಲಿನ ಊರುಗಳಿಗೆ ಅಕ್ಷರಶಃ ಜ್ಞಾನ ದೇಗುಲಗಳೇ ಆಗಿವೆ. ಇಂತಹ ಶತಮಾನದ ಹಿರಿಮೆಯ ಕನ್ನಡ ಮಾಧ್ಯಮ ಶಾಲೆಗಳನ್ನು ಗುರುತಿಸಿ ಪರಿಚಯಿಸುವ ಪ್ರಯತ್ನ ನಮ್ಮದು.

1912 ಶಾಲೆ ಆರಂಭ
ಶಾಲೆ ಪ್ರಾರಂಭದಲ್ಲಿ ಮರಳು-ಮಣ್ಣಿನ ಪಾಠ

ಕಟಪಾಡಿ: ಅಗ್ರಹಾರ ಏಣಗುಡ್ಡೆ ಶ್ರೀ ದುರ್ಗಾಪರಮೇಶ್ವರೀ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯು ಹೆಚ್ಚಿನ ವಲಸೆ ಕೂಲಿ ಕಾರ್ಮಿಕರ ಮಕ್ಕಳಿಗೆ ಜ್ಞಾನ ದೇಗುಲವಾಗಿರುವುದೇ ವಿಶೇಷತೆ.

1912ರಲ್ಲಿ ಯೇಣಗುಡ್ಡೆ ಕಡವಿನ ಬಾಗಿಲು ಹೊಳೆದಂಡೆಯ ದಾಸ್ತಾನು ಕೊಠಡಿಯಲ್ಲಿ ವೈ. ನಂದ್ಯಪ್ಪ ಹೆಗ್ಡೆ ಅವರಿಂದ ಮರಳು-ಮಣ್ಣಿನ ಪಾಠ ಆರಂಭಗೊಂಡು ಅಗ್ರಹಾರ ವೀರಸ್ತಂಭ ಶ್ರೀ ದುರ್ಗಾಪರಮೇಶ್ವರೀ ದೇಗುಲದ ಗೋಪುರದಲ್ಲಿ ಇರುವ ಈ ಶಾಲೆಗೆ ನಿರಂತರ 60 ವರ್ಷಗಳಿಂದ ಮುಖ್ಯೋಪಾಧ್ಯಾಯರಾಗಿದ್ದರು.  ಮಾಲಿಂಗ ಹೆಗ್ಡೆ, ಕೃಷ್ಣಯ್ಯ ಹೆಗ್ಡೆ ಸ್ಥಾಪಕರಾಗಿದ್ದರು. ಹೊಂಗಾರದ ಬೀಜ(ಪೊಂಗಾರ್‌) ಮತ್ತು ಕರವೀರ ಕಾಯಿಯು ಅಕ್ಷರ ಜ್ಞಾನವನ್ನು ನೀಡುತ್ತಿದ್ದ ದಿನಗಳನ್ನು ಕೆಲವು ಹಳೆ ವಿದ್ಯಾರ್ಥಿಗಳು ಈ ಸಂದರ್ಭ ಸ್ಮರಿಸಿರುತ್ತಾರೆ.

ಉಡುಪಿ ಶ್ರೀ ಕೃಷ್ಣ ಮಠದ ನಂಟು
ಉಡುಪಿ ಶ್ರೀ ಕೃಷ್ಣ ಮಠದಿಂದ ಚಿಣ್ಣರ ಸಂತರ್ಪಣೆಯ ಶ್ರೀ ಕೃಷ್ಣ ಪ್ರಸಾದದ ರೂಪದಲ್ಲಿ ಅಕ್ಕಿಯು ಪ್ರತೀ ತಿಂಗಳು ಈ ಶಾಲೆಗೆ ಬರುತ್ತಿದ್ದು, ಮಕ್ಕಳ ಮಧ್ಯಾಹ್ನದ ಅನ್ನದಾಸೋಹವಾಗುತ್ತಿದೆ. ಸಮವಸ್ತ್ರವೂ ಮಠದಿಂದಲೇ ನೀಡಲಾಗುತ್ತಿದೆ. ಕೃಷ್ಣಜನ್ಮಾಷ್ಟಮಿಯ ಸಂದರ್ಭವೂ ಮುದ್ದುಕೃಷ್ಣ ವೇಷ ಸ್ಪರ್ಧೆ ಆಯೋಜಿಸಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನವನ್ನೂ ಶ್ರೀ ಮಠವೇ ನೀಡುತ್ತಿದೆ.

ಮೂಲಭೂತ ಸವಲತ್ತುಗಳು
ಅಕ್ಷರ ದಾಸೋಹ ಕಟ್ಟಡ, ಸುಸಜ್ಜಿತ ಶೌಚಾಲಯ, ಕುಡಿಯುವ ನೀರಿನ ಸೌಲಭ್ಯ ಹೊಂದಿದ್ದು, ಸ್ವಂತ ಸ್ಥಳವನ್ನು ಹೊಂದಿಲ್ಲ. ದೇಗುಲದ ಗೋಪುರದಲ್ಲಿ ಶಾಲಾ ತರಗತಿ ಕೊಠಡಿಗಳನ್ನು ಹೊಂದಿದೆ.

ಶಾಲೆಯ ವಿವಿಧ ಸಾಧಕರು
ವಿಜಯಾ ಬ್ಯಾಂಕ್‌ನ ಚೇರ್ಮನ್‌ ವೈ.ಎಸ್‌. ಹೆಗ್ಡೆ, ಇಂಡಿಯನ್‌ ಆರ್ಮಿಯ ಬಸಪ್ಪ ಎನ್‌. ಹದಾರಿ, ಜಿ.ಪಂ. ಮಾಜಿ ಅಧ್ಯಕ್ಷ ಕಟಪಾಡಿ ಶಂಕರಪೂಜಾರಿ ಮೊದಲಾದವರು ಇದೇ ಕನ್ನಡ ಮಾಧ್ಯಮ

ಶಾಲೆಯಲ್ಲಿ ಕಲಿತವರು.
ಮಾಜಿ ಸಚಿವ ದಿ| ವಸಂತ ವಿ.ಸಾಲ್ಯಾನ್‌ ಹಾಗೂ ರಾಜ್ಯ ಸಚೇತಕರಾಗಿದ್ದ ದಿ|ಭಾಸ್ಕರ ಶೆಟ್ಟಿ ಸಹಿತ ಅನೇಕ ಗಣ್ಯರು ಈ ಶಾಲೆಯೊಂದಿಗೆ ನಿಕಟ ಬಾಂಧವ್ಯ ಇರಿಸಿಕೊಂಡಿದ್ದರು. 2015ರಲ್ಲಿ ಶತಮಾನೋತ್ಸವ ಸಂಭ್ರಮದ ಸಮಾರೋಪ ಕಂಡ ಈ ಶಾಲೆಯು ಹಲವು ಸಾಧಕರನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡಿರುತ್ತದೆ ಎಂದು ಆಡಳಿತ ಮಂಡಳಿ ಮಾಹಿತಿ ನೀಡಿದೆ.

ಬಾಗಲಕೋಟೆಯ ತುರಡಗಿ ಮೂಲದ ನನಗೆ ಹೊರ ಜಿಲ್ಲೆಯಿಂದ ಬಂದರೂ ತಾರತಮ್ಯವೆಸಗದೆ ಉತ್ತಮ ಗುಣಮಟ್ಟದ ಸಂಸ್ಕಾರಯುತ ಶಿಕ್ಷಣ ಈ ಕನ್ನಡ ಮಾಧ್ಯಮ ಶಾಲೆ ನೀಡಿದೆ. ಇದೀಗ ಇಂಡಿಯನ್‌ ಆರ್ಮಿಯಲ್ಲಿ 18 ವರ್ಷದಿಂದ ಸೇವೆಯನ್ನು ಸಲ್ಲಿಸುತ್ತಿದ್ದೇನೆ. ಶತಮಾನದ ಸಂದರ್ಭ ನನ್ನನ್ನು ಗುರುತಿಸಿ ಸಮ್ಮಾನಿಸಿದ್ದು ಬದುಕಿನ ಸಂತಸದ ಕ್ಷಣಗಳಲ್ಲೊಂದಾಗಿ.
-ಬಸಪ್ಪ ಎನ್‌. ಹದಾರಿ, ಸೈನಿಕ , ಹಳೆ ವಿದ್ಯಾರ್ಥಿ

ಶಾಲಾ ಆಡಳಿತ ಮಂಡಳಿಯ ದಕ್ಷ ಸೇವೆಯಿಂದ ಈ ಶಾಲೆ ಬೆಳೆದು ನಿಂತಿದೆ.ಐವರು ಗೌರವ ಶಿಕ್ಷಕರ ಸಹಿತ ವಿದ್ಯಾರ್ಥಿಗಳಿಗೆ ಉತ್ತಮ ಸವಲತ್ತುಗಳನ್ನು ಆಡಳಿತ ಮಂಡಳಿಯು ಸಮರ್ಥವಾಗಿ ನಿಭಾಯಿಸುತ್ತಿದೆ. 1ರಿಂದ 7ನೇ ತರಗತಿ ವರೆಗೆ ಶೇ.90ರಷ್ಟು ಹೊರ ಜಿಲ್ಲಾ ವಲಸೆ ಕೂಲಿ ಕಾರ್ಮಿಕರ ಮಕ್ಕಳೇ ನಮ್ಮ ವಿದ್ಯಾರ್ಥಿಗಳಾಗಿದ್ದಾರೆ.
-ಕೆ.ಸರೋಜಿನೀ ದೇವಿ,ಮುಖ್ಯೋಪಾಧ್ಯಾಯಿನಿ.

– ವಿಜಯ ಆಚಾರ್ಯ,ಉಚ್ಚಿಲ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.