ಉಡುಪಿ ಜಿಲ್ಲೆಗೆ ಬೇಕು ವಿಶ್ವವಿದ್ಯಾನಿಲಯ

ಪಶು ವೈದ್ಯಕೀಯ, ಮೀನುಗಾರಿಕಾ ವಿ.ವಿ. ಸ್ಥಾಪನೆ ಬೇಡಿಕೆ

Team Udayavani, Dec 21, 2020, 5:47 AM IST

UDUPIಉಡುಪಿ ಜಿಲ್ಲೆಗೆ ಬೇಕು ವಿಶ್ವವಿದ್ಯಾನಿಲಯ

ಸಾಂದರ್ಭಿಕ ಚಿತ್ರ

ಉಡುಪಿ ಜಿಲ್ಲೆಯಲ್ಲಿ ಸರಕಾರಿ ಸ್ವಾಮ್ಯದ ಒಂದೇ ಒಂದು ವಿ.ವಿ. ಇಲ್ಲ. ಅಂತಹ ಒಂದು ಪ್ರತಿಷ್ಠಿತ ಸಂಸ್ಥೆ ಆರಂಭವಾಗಬೇಕಾಗಿದೆ ಎನ್ನುವುದು ಜಿಲ್ಲೆಯ ಬಹು ಹಿಂದಿನ ಬೇಡಿಕೆ. ಜಿಲ್ಲೆಯಾಗಿ 25 ವರ್ಷ ಸಮೀಪಿಸುತ್ತಿರುವ ಹೊತ್ತಿಗೆ ಸರಕಾರ ರಜತೋತ್ಸವದ ಕೊಡುಗೆಯಾಗಿ ನೀಡಬೇಕು ಎನ್ನುವುದು ಜಿಲ್ಲೆಯ ಜನರ ಆಗ್ರಹ.

ಉಡುಪಿ: ಯಾವುದೇ ಸರಕಾರಿ ವಿಶ್ವವಿದ್ಯಾನಿಲಯ ಇಲ್ಲದ ಉಡುಪಿ ಜಿಲ್ಲೆಯಲ್ಲಿ ಮೀನುಗಾರಿಕೆ, ಪಶು ವೈದ್ಯಕೀಯ ಕಾಲೇಜು ಸ್ಥಾಪಿಸಬೇಕೆಂಬ ಬೇಡಿಕೆ ಸಾರ್ವಜನಿಕರಿಂದ ಕೇಳಿಬರುತ್ತಿದೆ.

ಪ್ರಸ್ತುತ ರಾಜ್ಯದ ತುತ್ತತುದಿಯ ಬೀದರ್‌ ಜಿಲ್ಲೆಯಲ್ಲಿ ರಾಜ್ಯದ ಏಕೈಕ ಪಶು ವೈದ್ಯಕೀಯ ಮತ್ತು ಮೀನು ಗಾರಿಕೆ ವಿಜ್ಞಾನದ ವಿಶ್ವವಿದ್ಯಾನಿಲಯ ಇದೆ. ಇಡೀ ರಾಜ್ಯದ ಒತ್ತಡ ಇದರ ಮೇಲೆ ಬಿದ್ದಿದ್ದು, ಮೀನುಗಾರಿಕೆ ಅಷ್ಟೊಂದು ಇರದ ಪ್ರದೇಶದಲ್ಲಿ ಮಿನುಗಾರಿಕೆ ವಿ.ವಿ. ಇರುವು ದರಿಂದ ಪ್ರಯೋಜನ ಕರಾ ವಳಿ ಪ್ರದೇಶಕ್ಕೆ ಸಿಗಬೇಕು. ರಾಜ್ಯದ ಮೀನುಗಾರಿಕಾ ಪ್ರಧಾನ ಕಾರ್ಯ ಕ್ಷೇತ್ರಗಳಾದ ಕರಾವಳಿಯ ಮೂರು ಜಿಲ್ಲೆ ಗಳಲ್ಲಿ ಉಡುಪಿ ಕೇಂದ್ರ ಸ್ಥಾನದಲ್ಲಿದೆ. ಈ ಹಿನ್ನೆಲೆ ಯಲ್ಲಿ ಮೀನುಗಾರಿಕೆಯನ್ನು ಪ್ರತ್ಯೇಕಿಸಿ ಉಡುಪಿ ಜಿಲ್ಲೆಯಲ್ಲಿ ಸ್ಥಾಪಿಸಿ ದರೆ ಕರಾವಳಿಯುದ್ದಕ್ಕೂ ಇದರ ಪ್ರಯೋಜನ ಜನರಿಗೆ ಲಭ್ಯವಾಗಲಿದೆ ಎಂಬುದು ಸಾರ್ವಜನಿಕರ ಅಭಿಮತ. ಮೀನು ಗಾರಿಕೆಯ ಒಂದೇ ಕಾಲೇಜು ಇರುವುದರಿಂದ ಮೀನುಗಾರಿಕೆಗೆಂದೇ ಪ್ರತ್ಯೇಕ ವಿಶ್ವವಿದ್ಯಾನಿಲಯ ತೆರೆಯುವುದು ಕಷ್ಟ ಎಂಬ ಅಭಿಪ್ರಾಯವೂ ಕೇಳಿಬಂದಿದೆ.

ಕರಾವಳಿಯಲ್ಲಿದೆ ಅವಕಾಶ
ಉಡುಪಿ ಮತ್ತು ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೃಷಿ ಭೂಮಿ ಇದ್ದರೂ ಕೃಷಿಗೆ ಪೂರಕವಾದ ಪಶುಸಂಗೋಪನೆ, ಮೀನು ಗಾರಿಕೆಗೆ ಸಂಬಂಧಿಸಿದ ಕ್ಷೇತ್ರಗಳಲ್ಲಿ ಅವಲಂಬಿಸಿ ಕೊಂಡಿದ್ದಾರೆ. ಆದರೆ ಇವರಿಗೆ ವೈಜ್ಞಾನಿಕ ಮತ್ತು ತಾಂತ್ರಿಕ ಮಾಹಿತಿ ಪೂರೈಕೆಯಲ್ಲಿ ಕೊರತೆ ಇದೆ. ಇತ್ತೀಚೆಗಿನ ದಿನಗಳಲ್ಲಿ ದೇಸೀ ತಳಿಗಳ ಉಪಯುಕ್ತತೆ ಕುರಿತು ವಿಶೇಷ ಆಸಕ್ತಿ ಬೆಳೆಯುತ್ತಿದೆ. ಈ ಭಾಗದ ದೇಸೀ ತಳಿಗಳು ಕಣ್ಮರೆ ಯಾಗುವ ಸ್ಥಿತಿಯಲ್ಲಿವೆ. ಕರಾವಳಿಯ ಎಮ್ಮೆ, ಬನ್ನೂರು-ಮಂಡ್ಯ ಕುರಿ ತಳಿಗಳ ಮೇಲೆ ಸಂಶೋಧನೆ ನಡೆಸಲು ಸಾಕಷ್ಟು ಅವಕಾಶಗಳಿವೆ. ಇದಕ್ಕೆಲ್ಲಾ ಪಶು ಸಂಗೋಪನೆ ವಿಶ್ವವಿದ್ಯಾನಿಲಯವನ್ನು ಅವಿಭಜಿತ ಕನ್ನಡ ಜಿಲ್ಲೆಯಲ್ಲಿ ಒಂದಾದರೂ ಕಡೆ ಇರಬೇಕೆಂಬುದು ಜನರ ಆಗ್ರಹ.

ಬ್ರಹ್ಮಾವರ ಏಕೆ ಸೂಕ್ತ?
ಬ್ರಹ್ಮಾವರದ ಕೃಷಿ ವಿಜ್ಞಾನ ಕೇಂದ್ರದಲ್ಲಿ ಸುಮಾರು 35 ಎಕ್ರೆ, ಸಕ್ಕರೆ ಕಾರ್ಖಾನೆ ಆವರಣದಲ್ಲಿ ಸುಮಾರು 100 ಎಕ್ರೆ ಭೂಮಿ ಇರುವುದರಿಂದ ಸರಕಾರಿ ಜಾಗವನ್ನು ಹುಡುಕುವ ಅಗತ್ಯವಿಲ್ಲ. ಇವೆರಡೂ ಕೃಷಿ, ಹೈನುಗಾರಿಕೆಗೆ ಪೂರಕವಾದ ಸಂಸ್ಥೆಗಳು. ಜಿಲ್ಲಾ ಕೇಂದ್ರಕ್ಕೆ ಸಮೀಪವೂ ಜಿಲ್ಲೆಯ ಮಧ್ಯ ಭಾಗದಲ್ಲಿಯೂ ಇರುವ ಬ್ರಹ್ಮಾವರ ರಾಷ್ಟ್ರೀಯ ಹೆದ್ದಾರಿಯಿಂದಾಗಿ ಸುಲಭ ಸಂಪರ್ಕ ಸಾಧ್ಯ ಎನ್ನಲಾಗುತ್ತಿದೆ.

ದಕ್ಷಿಣ ಕರ್ನಾಟಕದ ಸಂಸ್ಥೆಗಳು
ಶಿವಮೊಗ್ಗ, ಹಾಸನ, ಬೆಂಗಳೂರು, ಪುತ್ತೂರು ಕೊçಲದ ಪಶುವೈದ್ಯಕೀಯ ಕಾಲೇಜು, ಬೆಂಗಳೂರಿನ ಹೈನುಗಾರಿಕ ವಿಜ್ಞಾನ ಕಾಲೇಜು, ಲಸಿಕೆ ತಯಾರಿಕೆ ಸಂಸ್ಥೆ, ನಾಲ್ಕು ಮೀನುಗಾರಿಕಾ ಸಂಸ್ಥೆಗಳಾದ ಮಂಗಳೂರಿನ ಮೀನುಗಾರಿಕಾ ಕಾಲೇಜು, ಬೆಂಗಳೂರು ಹೆಬ್ಟಾಳ, ಹೇಸರಘಟ್ಟ, ಅಂಕೋಲಾದ ಮೀನುಗಾರಿಕಾ ಸಂಶೋಧನ ಕೇಂದ್ರಗಳು, ತಿಪಟೂರು, ನಾಗಮಂಗಲ, ಮುಳುಬಾಗಿಲಿನ ಜಾನುವಾರು ಸಂಶೋಧನೆ ಮತ್ತು ಮಾಹಿತಿ ಕೇಂದ್ರ, ತಿಪಟೂರು, ಗುಂಡ್ಲುಪೇಟೆ, ಹಾಸನದ ಪಶುಸಂಗೋಪನ ಪಾಲಿಟೆಕ್ನಿಕ್‌, ಮಂಗಳೂರು ಮತ್ತು ಬ್ರಹ್ಮಾವರದ ಕೃಷಿ ವಿಜ್ಞಾನ ಕೇಂದ್ರ, ಕೊಡಗಿನ ವನ್ಯಜೀವಿ ಚಿಕಿತ್ಸಾ ಸಂಸ್ಥೆ, ಶಿವಮೊಗ್ಗದ ಮಲೆನಾಡು ತಳಿ ಅಭಿವೃದ್ಧಿ ಸಂಸ್ಥೆ, ಜಾನುವಾರು ನಿಗೂಢ ಕಾಯಿಲೆಗಳ ಸಂಶೋಧನ ಕೇಂದ್ರ, ಕೂಡಿಗೆಯ ವನ್ಯಜೀವಿ ಸಂಶೋಧನ ಕೇಂದ್ರ.

ಉಡುಪಿ ಜಿಲ್ಲೆಯಲ್ಲಿ ಅಗತ್ಯವೇಕೆ?
 ಬೀದರ್‌ನ ಏಕೈಕ ವಿ.ವಿ.; ಹೆಚ್ಚಿದ ರಾಜ್ಯದ ಒತ್ತಡ
 ಉಡುಪಿ ಜಿಲ್ಲೆಯಲ್ಲಿ ಸರಕಾರಿ ವಿ.ವಿ.ಗಳೇ ಇಲ್ಲ
 ಕರಾವಳಿಯ ಮೀನುಗಾರಿಕಾ ಚಟು ವಟಿಕೆಗಳನ್ನು ಬಲಪಡಿಸಲು ಪಶು ವೈದ್ಯಕೀಯ ವಿ.ವಿ. ಜತೆ ಸಂಲಗ್ನ ಗೊಳಿಸುವ ಅವಕಾಶ.
    ಪ್ರಾಧ್ಯಾಪಕರು, ವೈದ್ಯರು, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬೀದರ್‌ಗಿಂತ ಎಷ್ಟೋ ಪಟ್ಟು ಹೆಚ್ಚಿನ ಸೌಲಭ್ಯ ಹೊಂದಿದ ಕರಾವಳಿ ಪ್ರದೇಶ.

ನಮ್ಮ ದೃಷ್ಟಿ ಇದ್ದದ್ದು ಮೀನುಗಾರಿಕಾ ವಿ.ವಿ. ಸ್ಥಾಪನೆ ಕುರಿತು. ಪಶುವೈದ್ಯಕೀಯ ಮತ್ತು ಮೀನುಗಾರಿಕಾ ವಿ.ವಿ.ಯ ಹೊಸ ಪ್ರಸ್ತಾವನೆಯನ್ನು ಚರ್ಚಿಸುತ್ತೇವೆ.
– ಕೋಟ ಶ್ರೀನಿವಾಸ ಪೂಜಾರಿ, ಮೀನುಗಾರಿಕಾ ಸಚಿವರು.

ಬೀದರ್‌ನಲ್ಲಿರುವ ಒಂದೇ ವಿ.ವಿ. ಯಲ್ಲಿ ಪಶು ವೈದ್ಯಕೀಯ ಮತ್ತು ಮೀನು ಗಾರಿಕಾ ಎರಡೂ ವಿಷಯ ಗಳು ಇರುವು ದರಿಂದ ದಕ್ಷಿಣ ಕರ್ನಾಟಕದಲ್ಲಿ ಇಂತಹ ವಿ.ವಿ. ಪ್ರಸ್ತಾವನೆ ಯನ್ನು ಸಚಿವರ ಮೂಲಕ ಮುಖ್ಯಮಂತ್ರಿಗಳ ಗಮನಕ್ಕೆ ತರು ತ್ತೇನೆ. ಉಡುಪಿ ಜಿಲ್ಲೆಗೆ ಇಂತಹ ಒಂದು ಸಂಸ್ಥೆಯ ಅಗತ್ಯವಿದೆ.
– ಕೆ. ರಘುಪತಿ ಭಟ್‌,  ಶಾಸಕರು, ಉಡುಪಿ

 ಮಟಪಾಡಿ ಕುಮಾರಸ್ವಾಮಿ

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.