ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ


Team Udayavani, Apr 16, 2024, 4:05 PM IST

2-

ಉಡುಪಿ: ಪಕ್ಷದ ಸಂಸದರ ವಿರುದ್ಧವೇ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಹರಿಬಿಟ್ಟಿದ್ದ ಕಾರಣಕ್ಕಾಗಿ ಪೊಲೀಸ್ ಪ್ರಕರಣವನ್ನು ಎದುರಿಸಿದ್ದ ಬಿಜೆಪಿ ಮುಖಂಡರಿಂದ ಕಾಂಗ್ರೆಸ್ ನೈತಿಕತೆ ಪಾಠವನ್ನು ಕಲಿಯಬೇಕಾಗಿಲ್ಲ ಎಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಅಲೆವೂರು ಹರೀಶ್ ಕಿಣಿ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಬಿಜೆಪಿ ಪಕ್ಷದ ಚುನಾವಣಾ ಅಭಿಯಾನ ಪ್ರಮುಖರ ಪ್ರಗತಿ ಪರಿಶೀಲನಾ ಸಭೆಯ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕಾಂಗ್ರೆಸ್ ವಿರುದ್ಧ ಮಾಡಿರುವ ಟೀಕೆಗೆ ಅವರು ಮಾಧ್ಯಮ ಪ್ರಕಟಣೆ ಮೂಲಕ ಪ್ರತಿಕ್ರಿಯಿಸಿದ್ದಾರೆ.

ಪಕ್ಷದ ಶಿಸ್ತಿನ ಪಾಠ ಹೇಳುವ ಈ ಮೇಸ್ಟ್ರು ಕುಂದಾಪುರದಲ್ಲಿ ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಅವರು ಭಾಗವಹಿಸಿದ್ದ ಸಾವಿರಾರು ಜನರಿದ್ದ ಸಭೆಯಲ್ಲಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರ ವಿರುದ್ಧ ತನ್ನ ಬೆರಳೆಣಿಕೆಯ ಬೆಂಬಲಿಗರೊಂದಿಗೆ ಪಕ್ಷಕ್ಕೆ ಮುಜುಗರವಾಗುವ ರೀತಿಯಲ್ಲಿ ಫ್ಲೆಕ್ಸ್, ಬ್ಯಾನರ್ ಹಿಡಿದು ಘೋಷಣೆ ಕೂಗಿ ನಂತರ ಪೋಲಿಸರಿಂದ ಹೊರ ನೂಕಿಸಿಕೊಂಡ ಘಟನೆ ಸ್ವಘೋಷಿತ ಶಿಸ್ತಿನ ಪಕ್ಷಕ್ಕೆ ಶೋಭೆಯಲ್ಲ ಎನ್ನುವುದನ್ನು ಮರೆತಂತಿದೆ. ಪಕ್ಷದಲ್ಲಿ ಇದ್ದಾಗಲೇ ಪಕ್ಷದ ಅಧಿಕೃತ ಅಭ್ಯರ್ಥಿ ಹಾಲಾಡಿಯವರ ಪರವಾಗಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳದೆ ಕಾಟಾಚಾರಕ್ಕೆ ಮಾತ್ರ ಅಕ್ಕ-ಪಕ್ಕದ ಕ್ಷೇತ್ರದ ವೇದಿಕೆಯಲ್ಲಿ ಕಾಣಿಸಿಕೊಳ್ಳುತ್ತಿದ್ದ ನಾಯಕರುಗಳೇ ಇಂದು ಪಕ್ಷ ನಿಷ್ಠೆಯ ಬಗ್ಗೆ ಬೇರೆಯವರಿಗೆ ಬೋಧನೆ ಮಾಡುತ್ತಿರುವುದು ವಿಪರ್ಯಾಸವಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವರಾಗಿ ಕೇವಲ ಒಂದು ವರ್ಷದೊಳಗೆ‌ ಸಚಿವೆ ಹೆಬ್ಬಾಳ್ಕರ್ ಅವರು ಎಷ್ಟು ಬಾರಿ ಜಿಲ್ಲೆಗೆ ಬಂದಿದ್ದಾರೆ, ಎಷ್ಟು ಸಭೆಗಳನ್ನು ನಡೆಸಿದ್ದಾರೆ ಎನ್ನುವ ಹಾಗೂ ಕಳೆದ 10 ವರ್ಷಗಳಿಂದ ಸಂಸದೆಯಾಗಿ, ಕೇಂದ್ರ ಸಚಿವೆಯಾಗಿ ಶೋಭಾ ಕರಂದ್ಲಾಜೆ ಅವರು ಎಷ್ಟು ಬಾರಿ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ ಹಾಗೂ ಎಷ್ಟು ಸಭೆ ನಡೆಸಿದ್ದಾರೆ ಎನ್ನುವ ಮಾಹಿತಿಯನ್ನು ಪಡೆದುಕೊಂಡು ಸಾರ್ವಜನಿಕ ವೇದಿಕೆಗೆ ಬಿಜೆಪಿ ಅಧ್ಯಕ್ಷರು ಚರ್ಚೆಗೆ ಬರಲಿ. ಆಗ ತಿಳಿಯುತ್ತದೆ ಯಾವ ಪಕ್ಷದ ಜನಪ್ರತಿನಿಧಿಗಳ ವಿರುದ್ಧ ಮತದಾರರು ಆಕ್ರೋಶ ಹೇಗೆ ಇರುತ್ತದೆ ಎಂದು ಹೇಳಿರುವ ಕಿಣಿ , ಗಾಜಿನ ಮನೆಯಲ್ಲಿ ಕುಳಿತು ಇನ್ನೊಬ್ಬರ ಕಡೆ ಕಲ್ಲು ಎಸೆಯುವ ಪ್ರವೃತ್ತಿ ಬದಲಾಯಿಸಿಕೊಳ್ಳುವುದು ಒಳ್ಳೆಯದು ಎಂದು ಸಲಹೆ ನೀಡಿದ್ದಾರೆ.

ಸುಳ್ಳಿನ ಫ್ಯಾಕ್ಟರಿ ಆಗಿರುವ ಬಿಜೆಪಿ ಪಕ್ಷದ ಯಾವ ಹೇಳಿಕೆ ಹಾಗೂ ಭರವಸೆಯ ಬಗ್ಗೆ ದೇಶವಾಸಿಗಳಿಗೆ ಯಾವುದೇ ದಾಖಲೆ ಅಗತ್ಯವಿಲ್ಲ. ಬುಲೆಟ್ ಟ್ರೈನ್, ಪೆಟ್ರೋಲ್ ದರ, ನೋಟ್ ಬ್ಯಾನ್, ಬ್ಯಾಂಕ್ ಅಕೌಂಟ್, ಸ್ವೀಸ್ ಬ್ಯಾಂಕ್ ಮುಂತಾದ ವಿಷಯಗಳ ಸುಳ್ಳಿನ ಕಂತೆಗಳೇ ಜನರ ಮನಸ್ಸಿನಲ್ಲಿ ದಾಖಲೆಗಳಾಗಿದೆ ಎನ್ನುವುದನ್ನು ಅಧ್ಯಕ್ಷರು ಗಮನಿಸಲಿ.

ಜನಪ್ರತಿನಿಧಿಗಳಾಗಿದ್ದಾಗ ಹಾಗೂ ಅಧಿಕಾರದಲ್ಲಿದ್ದಾಗ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡದೆ ಇದ್ದವರಿಗೆ ಮಾತ್ರ ಬೇರೆಯವರ ಹೆಸರಿನಲ್ಲಿ ಮತ ಕೇಳಬೇಕಾದ ಅನಿವಾರ್ಯತೆ ಬರುತ್ತದೆ. ಜಯಪ್ರಕಾಶ್ ಹೆಗ್ಡೆ ಅವರಿಗೆ ಈ ಅನಿವಾರ್ಯತೆ ಇಲ್ಲ. ಶಾಸಕ, ಸಚಿವ, ಸಂಸದ ಹಾಗೂ ಆಯೋಗದ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಅವರು ಮಾಡಿರುವ ಕೆಲಸಗಳು ಸಾಕಷ್ಟು ಇರೋದರಿಂದ ಈ ನೆಲೆಯಲ್ಲಿ ಮತದಾರರ ಬಳಿ ಹೋಗುತ್ತಿದ್ದಾರೆ. ಇದರಲ್ಲಿ ಏನು ತಪ್ಪಿದೆ ಎಂದು ಪ್ರಶ್ನಿಸಿರುವ ಅವರು ಬೇರೆಯವರನ್ನು ಕಾಮಾಲೆ ಕಣ್ಣಿನಿಂದ ನೋಡುವುದನ್ನು ಮೊದಲು ಬದಲಾಯಿಸಿಕೊಳ್ಳಲಿ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Fraud Case ಟರಿಂಗ್‌ ವ್ಯವಹಾರದ ಕಮಿಷನ್‌ ಹೆಸರಲ್ಲಿ ವಂಚನೆ

Fraud Case ಟರಿಂಗ್‌ ವ್ಯವಹಾರದ ಕಮಿಷನ್‌ ಹೆಸರಲ್ಲಿ ವಂಚನೆ

Udupi 36 ವರ್ಷಗಳ ಹಿಂದಿನ ಆರೋಪಿ ಬಂಧನ

Udupi 36 ವರ್ಷಗಳ ಹಿಂದಿನ ಆರೋಪಿ ಬಂಧನ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.