ಜಿಲ್ಲಾಸ್ಪತ್ರೆ ಸ್ಥಳಾಂತರ ಇಲ್ಲ; ಸೇವೆ ಯಥಾಸ್ಥಿತಿ

ಖಾಲಿ ಜಾಗದಲ್ಲಿ ಹೊಸ ಕಟ್ಟಡ ನಿರ್ಮಾಣಕ್ಕೆ ನಿರ್ಣಯ

Team Udayavani, Nov 20, 2020, 5:50 AM IST

ಜಿಲ್ಲಾಸ್ಪತ್ರೆ ಸ್ಥಳಾಂತರ ಇಲ್ಲ; ಸೇವೆ ಯಥಾಸ್ಥಿತಿ

ಜಿಲ್ಲಾಧಿಕಾರಿಯವರು ಸ್ಥಳ ಪರಿಶೀಲನೆ ನಡೆಸಿದರು.

ಉಡುಪಿ: ಅಜ್ಜರಕಾಡು ಜಿಲ್ಲಾಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ಕಾಮಗಾರಿ ಪೂರ್ಣಗೊಳ್ಳುವವರೆಗೆ ಆಸ್ಪತ್ರೆಯನ್ನು ಬ್ರಹ್ಮಾವರಕ್ಕೆ ಸ್ಥಳಾಂತರ ಮಾಡಬೇಕು ಎನ್ನುವ ನಿರ್ಣಯವನ್ನು ಕೈಬಿಟ್ಟಿದ್ದು ಅಲ್ಲೇ ಖಾಲಿ ಇರುವ ಜಾಗದಲ್ಲಿ ಹೊಸ ಕಟ್ಟಡ ನಿರ್ಮಿಸಲು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆ ನಿರ್ಣಯ ತಳೆದಿದೆ.

ಆಸ್ಪತ್ರೆಯ ಬಳಿಯಿರುವ ಎಎನ್‌ಎಂ ತರಬೇತಿ ಕೇಂದ್ರವನ್ನು ಮಾತ್ರ ಕೆಡಹುವುದು ಎಂದು ತೀರ್ಮಾನಿಸಲಾಯಿತು. ಹಾಲಿ ಇರುವ ಕಟ್ಟಡವನ್ನು ಉಳಿಸಿಕೊಂಡು ಹಿಂಭಾಗದ ಖಾಲಿ ಜಾಗದಲ್ಲಿ ಹೊಸ ಕಟ್ಟಡ ನಿರ್ಮಿಸುವುದರಿಂದ ರೋಗಿಗಳಿಗೆ ತೊಂದರೆಯಾಗದು. ಈ ಕಟ್ಟಡವು ಮುಂದಿನ ದಿನಗಳಲ್ಲಿ ಉಪಯೋಗಕ್ಕೆ ಬರಲಿದೆ. ಹೊಸ ಕಟ್ಟಡಕ್ಕೆ ಅಗತ್ಯವಿರುವ ರಸ್ತೆ ಕಾಮಗಾರಿ ಮಾತ್ರ ಹೆಚ್ಚುವರಿ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್‌ ತಿಳಿಸಿದರು.

ರೋಗಿಗಳಿಗೆ ಅನುಕೂಲ ಕಲ್ಪಿಸಿ
ಜಿಲ್ಲೆಯ ಜನಸಾಮಾನ್ಯರು ಸರಳವಾಗಿ ಆರೋಗ್ಯ ಸೇವೆಯನ್ನು ಪಡೆಯುವ ರೀತಿಯಲ್ಲಿ ಕಟ್ಟಡದ ನೀಲನಕ್ಷೆಯನ್ನು ತಯಾರಿಸಬೇಕು. ತುರ್ತು ಚಿಕಿತ್ಸಾ ಘಟಕ, ಹೊರರೋಗಿ ವಿಭಾಗ, ಶಸ್ತ್ರಚಿಕಿತ್ಸಾ ಕೊಠಡಿ, ಪ್ರಯೋಗಶಾಲೆ, ಡಯಾಲಿಸಿಸ್‌ ಕೇಂದ್ರ, ಐಸಿಯು ಕೇಂದ್ರಗಳು ನೆಲ ಮಹಡಿಯಲ್ಲೇ ನಿರ್ಮಿಸುವುದರಿಂದ ಚಿಕಿತ್ಸೆಗೆ ಬರುವ ರೋಗಿಗಳಿಗೆ ಹೆಚ್ಚು ಅನುಕೂಲವಾಗಲಿದ್ದು ಇದಕ್ಕೆ ಆದ್ಯತೆ ನೀಡುವಂತೆ ಶಾಸಕ ಕೆ. ರಘುಪತಿ ಭಟ್‌ ಹೇಳಿದರು.

ನೀಲ ನಕ್ಷೆ ಸಿದ್ಧಪಡಿಸಿ
250 ಹಾಸಿಗೆ ಸಾಮರ್ಥ್ಯದ ಜಿಲ್ಲಾಸ್ಪತ್ರೆ ಕಟ್ಟಡ ಹಾಗೂ ಸಿಬಂದಿ ವಸತಿಗೃಹವನ್ನು 115 ಕೋ.ರೂ. ವೆಚ್ಚದಲ್ಲಿ 27,375 ಚದರ ಮೀ. ವಿಸ್ತೀರ್ಣದಲ್ಲಿ ಕರಾವಳಿಯ ಹವಾಮಾನಕ್ಕನುಗುಣವಾಗಿ ನಿಗದಿತ ಅವಧಿಯಲ್ಲಿ ನಿರ್ಮಿಸಬೇಕು. ಚಿಕಿತ್ಸೆಗೆ ಬರುವ ಜನರ ಹಾಗೂ ವೈದ್ಯಕೀಯ ಸಿಬಂದಿ ವರ್ಗದವರ ವಾಹನಗಳ ನಿಲುಗಡೆಗೆ ನೆಲ ಮಾಳಿಗೆಯಲ್ಲಿ ಅವಕಾಶ ಮಾಡಿಕೊಡುವ ರೀತಿಯಲ್ಲಿ ನಿರ್ಮಾಣ ಮಾಡಬೇಕು ಎಂದರು.

ಜಿ.ಪಂ. ಸಿಇಒ ಡಾ| ನವೀನ್‌ ಭಟ್‌, ಎಡಿಸಿ ಸದಾಶಿವ ಪ್ರಭು, ಜಿಲ್ಲಾ ಸರ್ಜನ್‌ ಡಾ| ಮಧುಸೂದನ ನಾಯಕ್‌, ಡಿಎಚ್‌ಒ ಡಾ| ಸುಧೀರ್‌ ಚಂದ್ರ ಸೂಡ ಮೊದಲಾದ ಅಧಿಕಾರಿಗಳು ಸಭೆಯಲ್ಲಿದ್ದರು.

ಯುವಕರೊಂದಿಗೆ ಜಿಲ್ಲಾಧಿಕಾರಿ ಕ್ರಿಕೆಟ್‌!
ಜಿಲ್ಲಾಸ್ಪತ್ರೆ ಕಟ್ಟಡ ನಿರ್ಮಿಸುವ ಕುರಿತು ಸ್ಥಳ ಪರಿಶೀಲನೆಗೆ ಹೋದ ಸಂದರ್ಭ ಯುವಕರು ಕ್ರಿಕೆಟ್‌ ಆಡುತ್ತಿದ್ದರು. ಜಿಲ್ಲಾಧಿಕಾರಿಯವರು ಸ್ಫೂರ್ತಿಗೊಂಡು ಸ್ವಲ್ಪಹೊತ್ತು ಯುವಕರೊಂದಿಗೆ ಕ್ರಿಕೆಟ್‌ ಆಟವಾಡಿದರು.

ರೋಗಿಗಳಿಗೆ ಅನನುಕೂಲವಾಗ ಬಾರದು ಎಂಬ ಉದ್ದೇಶದಿಂದ ಆಸ್ಪತ್ರೆಯನ್ನು ಯಥಾಸ್ಥಿತಿಯಲ್ಲಿಯೇ ಮುಂದುವರಿಸಲು ತೀರ್ಮಾನಿಸಲಾಗಿದೆ. ಖಾಲಿ ಜಾಗದಲ್ಲಿ ನೂತನ ಆಸ್ಪತ್ರೆ ನಿರ್ಮಾಣವಾದ ಅನಂತರ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು.
-ಡಾ| ಮಧುಸೂದನ್‌ ನಾಯಕ್‌, ಜಿಲ್ಲಾ ಸರ್ಜನ್‌

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.