ಇದೊಂದು ಪೂರ್ವ ನಿಯೋಜಿತ ಕೃತ್ಯ, ತನಿಖಾ ಸ್ವರೂಪ ಶೀಘ್ರ ನಿರ್ಧಾರ: ಗೃಹ ಸಚಿವ ಬೊಮ್ಮಾಯಿ
Team Udayavani, Aug 12, 2020, 12:57 PM IST
ಉಡುಪಿ: ಬೆಂಗಳೂರಿನ ಡಿ.ಜಿ.ಹಳ್ಳಿ ಮತ್ತು ಕೆ.ಜಿ.ಹಳ್ಳಿಯಲ್ಲಿ ಮಂಗಳವಾರ ನಡೆದ ಗೂಂಡಾಗಿರಿಗೆ ಸಂಬಂಧಿಸಿದಂತೆ 110 ಜನರನ್ನು ಬಂಧಿಸಲಾಗಿದೆ ಎಂದು ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬುಧವಾರ ಮಣಿಪಾಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದ್ದು ಮೂರು ಮಂದಿ ಗೋಲಿಬಾರಿಗೆ ಸಾವನ್ನಪ್ಪಿದ್ದಾರೆ. ಪ್ರಕರಣದ ತನಿಖೆ ಸ್ವರೂಪವನ್ನು ಸಿಎಂ, ಹಿರಿಯ ಅಧಿಕಾರಿಗಳ ಜತೆ ಚರ್ಚಿಸಿ ನಿರ್ಧರಿಸಲಾಗುವುದು ಎಂದರು.
ಘಟನೆ ನಡೆದ ಮೂರು ಗಂಟೆಗಳಲ್ಲಿ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದ್ದು, ಪೊಲೀಸರ ನೈತಿಕ ಸ್ಥೈರ್ಯ ಕೆಡಿಸಬೇಡಿ. ಪೊಲೀಸರ ಸಮಯೋಚಿತ ನಿರ್ಧಾರದಿಂದ ಪುಂಡರ ನಿಗ್ರಹ, ಪರಿಸ್ಥಿತಿ ಹತೋಟಿಗೆ ತೆಗೆದುಕೊಳ್ಳಲು ಸಾಧ್ಯವಾಯಿತು. ಮುಂಜಾಗೃತ ಕ್ರಮವಾಗಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.
ಕೇಂದ್ರ ಗೃಹ ಕಾರ್ಯದರ್ಶಿ ಜೊತೆ ಮಾತುಕತೆ ನಡೆಸಿದ್ದು ಹೈದರಾಬಾದ್, ಚೆನ್ನೈನಿಂದ ತಲಾ ಮೂರು ಸಿಆರ್ ಪಿಎಫ್ ರವಾನೆಯಾಗಲಿದೆ. ಶಾಂತಿ ಸುವ್ಯವಸ್ಥೆಗೆ ಮೊದಲ ಆದ್ಯತೆ ನೀಡಿದ್ದು ತ್ವರಿತ ಕಾರ್ಯ ಪಡೆ, ಗರುಡ ನಿಯೋಜಿಸಲಾಗಿದೆ. ಸಿಸಿಟಿವಿ ಸಹಿತ ದಾಖಲೆಗಳ ಆಧಾರದಲ್ಲಿ ಇನ್ನಷ್ಟು ಬಂಧನ ನಡೆಯಬೇಕಿದ್ದು ಪ್ರಕರಣ ಹಿಂದೆ ಯಾರಿದ್ದಾರೆ ಎನ್ನುವುದನ್ನು ಪತ್ತೆ ಹಚ್ಚಲಾಗುತ್ತಿದೆ. ಇದೊಂದು ಪೂರ್ವ ನಿಯೋಜಿತ ಕೃತ್ಯ. ಫೇಸ್ ಬುಕ್ ಪೋಸ್ಟ್, ಚರ್ಚೆ, ಹಿಂಸಾಚಾರಕ್ಕೆ ಕರೆ ನೀಡಿದ್ದು ಸಮಾಜ ಘಾತುಕ ಶಕ್ತಿಗಳ ಷಡ್ಯಂತ್ರ, ಕುಮ್ಮಕ್ಕು ಕಂಡುಬಂದಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ