ತೋನ್ಸೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ನಿತ್ಯಾನಂದ ಕೆಮ್ಮಣ್ಣು ಕೋವಿಡ್ ಗೆ ಬಲಿ
Team Udayavani, May 24, 2021, 8:05 PM IST
ಮಲ್ಪೆ : ಕಾಂಗ್ರೆಸ್ನ ಮುಖಂಡ, ತೋನ್ಸೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ, ಕರಾಟೆ ಶಿಕ್ಷಕ ನಿತ್ಯಾನಂದ ಕೆಮ್ಮಣ್ಣು (45) ಅವರು ಅಸೌಖ್ಯದಿಂದ ಮೇ 24ರಂದು ನಿಧನ ಹೊಂದಿದರು.
ಮೃತರು ಅವಿವಾಹಿತರಾಗಿದ್ದರು. ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗ ಘಟಕದ ಅಧ್ಯಕ್ಷರಾಗಿದ್ದ ಅವರು ಈ ಹಿಂದೆ ತೋನ್ಸೆ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿದ್ದ ವೇಳೆಯಲ್ಲಿ ಗ್ರಾಮದ ಪ್ರಗತಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಕಾಂಗ್ರೆಸ್ ಪಕ್ಷದ ನಾಯಕರಾಗಿದ್ದರೂ ಪಕ್ಷಭೇದವನ್ನು ದೂರವಿಟ್ಟು ಪಂಚಾಯತ್ನ ಎಲ್ಲ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ಧಿ ಕಾರ್ಯದಲ್ಲಿ ಒಂದಾಗುವಂತೆ ಮಾಡಿದ್ದರು.
ಇದನ್ನೂ ಓದಿ : ಈ ಬ್ಯಾಂಕಿನ ಪಾಸಿಟಿವ್ ಪೇ ನಿಯಮ ಜೂನ್ 1 ರಿಂದ ಬದಲಾವಣೆ : ಮಾಹಿತಿ ಇಲ್ಲಿದೆ
ಒರ್ವ ಅತ್ಯುತ್ತಮ ಕರಾಟೆ ಪಟು, ಕರಾಟೆ ಶಿಕ್ಷಕರೂ ಆಗಿದ್ದ ಅವರು ರಾಜ್ಯಮಟ್ಟದ ಕರಾಟೆ ಸಂಘದ ಪದಾಧಿಕಾರಿಯಾಗಿದ್ದರು. ಕ್ರೀಡಾ ಸೇವೆಗಾಗಿ ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. ಹೂಡೆ ಗಜಾನನ ಬಿಲ್ಲವ ಸಂಘ ಸೇರಿದಂತೆ ಸ್ಥಳೀಯ ಹಲವಾರು ಸೇವಾ ಸಂಘಟನೆಯಲ್ಲಿ ಸಕ್ರಿಯರಾಗಿದ್ದರು.
ಗಣ್ಯರ ಸಂತಾಪ
ಅವರ ನಿಧನಕ್ಕೆ ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್, ವಿಧಾನ ಪರಿಷತ್ ಮಾಜಿ ಸಭಾಧ್ಯಕ್ಷ ಪ್ರತಾಪ್ಚಂದ್ರ ಶೆಟ್ಟಿ, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ವಿನಯ ಕುಮಾರ್ ಸೊರಕೆ, ಮಾಜಿ ಶಾಸಕರಾದ ಗೋಪಾಲ ಪೂಜಾರಿ, ಯು.ಆರ್. ಸಭಾಪತಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಾಜಿ ಅಧ್ಯಕ್ಷ ಜನಾರ್ದನ ತೋನ್ಸೆ, ಉದ್ಯಮಿ ಪ್ರಸಾದ್ರಾಜ್ ಕಾಂಚನ್ ಮೊದಲಾದವರು ಸಂತಾಪ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ : ರಾಜ್ಯದ ಆರೋಗ್ಯ ವ್ಯವಸ್ಥೆಗೆ ಬಲ: 1,763 ವೈದ್ಯರು, ವೈದ್ಯಾಧಿಕಾರಿಗಳ ನೇಮಕ : ಸಚಿವ ಸುಧಾಕರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್