ವಾಹನ ದಟ್ಟಣೆ ಕೇಂದ್ರ ಕರಾವಳಿ ಜಂಕ್ಷ ನ್‌


Team Udayavani, Mar 23, 2022, 2:31 PM IST

junction

ಉಡುಪಿ: ನಗರಕ್ಕೆ ಪ್ರವೇಶ ಕಲ್ಪಿಸುವ ಕರಾವಳಿ ಜಂಕ್ಷನ್‌ ಬಳಿ ದಿನನಿತ್ಯ ಟ್ರಾಫಿಕ್‌ ದಟ್ಟಣೆ ಕಂಡುಬರುತ್ತಿದೆ.

ಮಲ್ಪೆಯಂತಹ ಮೀನುಗಾರಿಕಾ ಪ್ರದೇಶ ಹಾಗೂ ಸದಾ ಚಟುವಟಿಕೆಯಿಂದ ಕೂಡಿರುವ ಈ ಭಾಗದಿಂದ ದಿನನಿತ್ಯ ಹಲವಾರು ಸರಕು ವಾಹನಗಳು, ಬಸ್‌, ಕಾರುಗಳು ಈ ಮಾರ್ಗದ ಮೂಲಕವೇ ಹಾದು ಹೋಗಬೇಕಾಗುತ್ತದೆ. ಹಾಗೇನೆ ಮಂಗಳೂರು ಮೂಲಕ ಬಂದವರೂ ಈ ರಸ್ತೆಯ ಮೂಲಕ ನಗರಕ್ಕೆ ಪ್ರವೇಶ ಪಡೆಯಬಹುದು. ಮತ್ತೂಂದು ಬದಿಯಲ್ಲಿ ಅಂಬಾಗಿಲು ಬಳಿಯಿಂದ ಬರುವ ವಾಹನಗಳು ಬನ್ನಂಜೆ, ಎಸ್‌ಪಿ ಕಚೇರಿ ಸಹಿತ ನಗರ ಪ್ರವೇಶಿಸಲು ಇದೇ ಮಾರ್ಗ. ಇತ್ತ ಉಡುಪಿ ನಗರದಿಂದ ಹೊರಹೋಗುವ ಅಂದರೆ ಮಲ್ಪೆ ಭಾಗಕ್ಕೆ ಹಾಗೂ ಕುಂದಾಪುರ ಭಾಗಕ್ಕೆ ತೆರಳಲೂ ಇದೇ ರಸ್ತೆ ಬೇಕು. ಈ ಕಾರಣದಿಂದ ಈ ಭಾಗದಲ್ಲಿ ಟ್ರಾಫಿಕ್‌ ದಿನನಿತ್ಯ ಕಂಡುಬರುತ್ತಿದೆ.

ಮೂಲಸೌಕರ್ಯ ಕೊರತೆ

ಮೇಲ್ನೋಟಕ್ಕೆ ಕಂಡುಬರುವಂತೆ ಕರಾವಳಿ ಜಂಕ್ಷನ್‌ ಭಾಗ ಇಕ್ಕಟ್ಟಿನಿಂದ ಕೂಡಿದೆ. ಸೂಕ್ತ ಬಸ್‌ ಬೇ ಕೂಡ ಈ ಭಾಗದಲ್ಲಿಲ್ಲ. ಕುಂದಾಪುರಕ್ಕೆ ತೆರಳುವ ಬಸ್‌ ಗಳು ಜಂಕ್ಷನ್‌ನಲ್ಲಿ ನಿಲ್ಲುವ ಕಾರಣ ಹಾಗೂ ಮಲ್ಪೆಗೆ ತೆರಳುವ ಬಸ್‌ಗಳು ಆ ಭಾಗದಲ್ಲಿ ನಿಲ್ಲುವ ಕಾರಣ ವಾಹನಗಳ ಚಾಲನೆ ಕಷ್ಟಕರವಾಗುತ್ತಿದೆ.

ವಿರುದ್ಧ ದಿಕ್ಕಿನಲ್ಲಿ ಸಂಚಾರ

ಉಡುಪಿಯಿಂದ ಶಾರದಾ ಹೊಟೇಲ್‌ ಸಹಿತ ಆ ಭಾಗಕ್ಕೆ ತೆರಳುವ ಅಂಗಡಿಗಳಿಗೆ ತೆರಳುವವರು ವಿರುದ್ಧ ದಿಕ್ಕಿನಲ್ಲಿ ಸಂಚಾರ ಮಾಡುತ್ತಿರುವುದು ಕಂಡುಬರುತ್ತಿದೆ. ಟ್ರಾಫಿಕ್‌ ಪೊಲೀಸರು ಸ್ಥಳದಲ್ಲಿದ್ದರೆ ಇಂತಹವರಿಗೆ ದಂಡ ತಪ್ಪುವುದಿಲ್ಲ. ಬೆಳಗ್ಗೆ ಹಾಗೂ ಸಂಜೆ ವೇಳೆ ಈ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳು ಸಂಚರಿಸುತ್ತವೆ. ಈ ವೇಳೆ ವಿರುದ್ಧ ದಿಕ್ಕಿನಲ್ಲಿ ಸಂಚರಿಸಿದರೆ ಅಪಘಾತಗಳೂ ನಡೆಯುವ ಸಾಧ್ಯತೆಗಳಿರುತ್ತವೆ.

ಬೀದಿದೀಪವೂ ಮಾಯ

ಅಂಬಲಪಾಡಿ ಜಂಕ್ಷನ್‌ನಿಂದ ಸರ್ವಿಸ್‌ ರಸ್ತೆಯ ಕರಾವಳಿ ಬೈಪಾಸ್‌ ವರೆಗೆ ಹಗಲು ಹೊತ್ತಿನಲ್ಲಿ ಈ ಭಾಗದಲ್ಲಿ ಟ್ರಾಫಿಕ್‌ ದಟ್ಟಣೆಯಾದರೆ ರಾತ್ರಿ ವೇಳೆ ಬೀದಿದೀಪ ಇಲ್ಲದೆ ಪಾದಚಾರಿಗಳಿಗೆ ರಸ್ತೆ, ಹೊಂಡ, ವಾಹನಗಳು ಗೋಚರಕ್ಕೆ ಬರುತ್ತಿಲ್ಲ. ಈ ಬಗ್ಗೆ ಪ್ರತಿಭಟನೆ ನಡೆದರೂ ಆಡಳಿತ ಸ್ಪಂದಿಸಿಲ್ಲ. ಬೀದಿದೀಪ ಅಳವಡಿಕೆಗೆ ನಗರಸಭೆ ಗಮನಹರಿಸಿದರೆ ರಾತ್ರಿ ಸಂಚಾರವಾದರೂ ಸುಗಮವಾಗಲು ಸಾಧ್ಯವಿದೆ.

ದಟ್ಟಣೆ ತಪ್ಪಿಸಲು ಏನು ಮಾಡಬಹುದು?

ಮಂಗಳೂರಿನಿಂದ ಆಗಮಿಸುವ ವಾಹನಗಳು ಕರಾವಳಿ ಮೂಲಕ ಬಾರದೆ ಕಿನ್ನಿಮೂಲ್ಕಿ ಅಥವಾ ಅಂಬಾಗಿಲು ಮೂಲಕ ನಗರವನ್ನು ಪ್ರವೇಶಿಸಬಹುದು.

ಕರಾವಳಿ ಜಂಕ್ಷನ್‌ನಲ್ಲಿ ಸಿಗ್ನಲ್‌ ಅಳವಡಿಸಿದರೂ ಸಮಸ್ಯೆ ಪರಿಹಾರ ಕಾಣದ ಸ್ಥಿತಿಯಿದೆ. ಟ್ರಾಫಿಕ್‌  ಪೊಲೀಸ್‌ ಸಿಬ್ಬಂದಿ ಸಂಖ್ಯೆಯೂ ಹೆಚ್ಚಳವಾಗಬೇಕಿದೆ.

ಮಲ್ಪೆ ಭಾಗದ ರಸ್ತೆ ವಿಸ್ತರಣೆಯಾದರೆ ಬ್ಲಾಕ್‌ ತಪ್ಪಲಿದೆ.

-ಪುನೀತ್‌ ಸಾಲ್ಯಾನ್‌

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.