ಕಾರ್ಕಳದ ಇನ್ನಾದಲ್ಲಿ ಮತ್ತೆ ಕೋವಿಡ್ ಆತಂಕ: ಕ್ವಾರಂಟೈನ್ ಮುಗಿಸಿ ಬಂದ ಪತಿ ಪತ್ನಿಗೆ ಸೋಂಕು
Team Udayavani, Jun 2, 2020, 2:24 PM IST
ಬೆಳ್ಮಣ್: ಉಡುಪಿ ಜಿಲ್ಲೆಯಲ್ಲಿ ಇಂದು ಭಾರಿ ಪ್ರಮಾಣದಲ್ಲಿ ಕೋವಿಡ್-19 ಸೋಂಕು ಕಾಣಿಸಿಕೊಳ್ಳುತ್ತಿದೆ. ಇಂದು ಕಾರ್ಕಳ ತಾಲೂಕಿನ ಇನ್ನಾ ಗ್ರಾಮಲ್ಲಿ ಮತ್ತರ ಇಬ್ಬರಿಗೆ ಕೋವಿಡ್-19 ಸೋಂಕು ಕಾಣಿಸಿಕೊಂಡಿದೆ.
ಇನ್ನಾ ಗ್ರಾಮದ ದಾಸಬೈಲ್ ನಲ್ಲಿ ಪತಿ ಪತ್ನಿಯರ ವರದಿ ಪಾಸಿಟಿವ್ ಬಂದಿದೆ. ಇವರಿಬ್ಬರೂ ಮಹಾರಾಷ್ಟ್ರದಿಂದ ಬಂದಿದ್ದು, ಪೇತ್ರಿಯಲ್ಲಿ ಕ್ವಾರಂಟೈನ್ ನಲ್ಲಿದ್ದರು. ಬಳಿಕ ಬಿಡುಗಡೆಗೊಂಡು ಉದ್ಯಾವರಕ್ಕೆ ತೆರಳಿದ್ದರು ಎನ್ನಲಾಗಿದೆ. ಸದ್ಯ ಅವರ ಗಂಟಲು ದ್ರವ ವರದಿ ಬಂದಿದ್ದು, ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ.
ಕಳೆದ ಎರಡು ದಿನಗಳ ಹಿಂದೆ ಮುಂಬೈನಿಂದ ಬಂದಿದ್ದ ಇನ್ನಾದ ಮಡ್ಮಣ್ ನ ಯುವಕನ ವರದಿಯೂ ಪಾಸಿಟಿವ್ ಆಗಿತ್ತು. ಸದ್ಯ ಆತನೂ ನಿಗಧಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನ. ಗ್ರಾಮದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವುದು ಇನ್ನಾ ಗ್ರಾಮದ ಜನತೆಯ ಆತಂಕಕ್ಕೆ ಕಾರಣವಾಗಿದೆ.
ಜಿಲ್ಲೆಯಲ್ಲಿ ಇಂದು ಕೋವಿಡ್ -19 ಮಹಾ ಸ್ಪೋಟವೇ ಸಂಭವಿಸಿದೆ. ಇಂದು ಒಂದೇ 210 ಹೊಸ ಕೋವಿಡ್-19 ಪ್ರಕರಣಗಳು ದೃಢವಾಗಿದೆ. ಸಂಜೆಯ ಆರೋಗ್ಯ ಇಲಾಖೆಯ ವರದಿಯಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಹೆಚ್ಚಳ ಕಾಣುವ ಸಾಧ್ಯತೆಯಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
MUST WATCH
ಹೊಸ ಸೇರ್ಪಡೆ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ