ಉಚ್ಚಿಲ ದಸರಾಕ್ಕೆ ಚಾಲನೆ; ನವದುರ್ಗೆಯರು, ಶಾರದಾ ಪ್ರತಿಷ್ಠೆ


Team Udayavani, Sep 27, 2022, 11:22 AM IST

6

ಉಚ್ಚಿಲ: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಸೆ. 26ರಿಂದ ಅ. 5ರ ವರೆಗೆ ಜರಗಲಿರುವ ಉಚ್ಚಿಲ ದಸರಾ – 2022 ವೈಭವಕ್ಕೆ ಉಡುಪಿ ಜಿಲ್ಲಾಸ್ಪತ್ರೆಯ ವೈದ್ಯಾಧಿಕಾರಿ ಡಾ| ಶ್ರೀತೇಜ ಕೂರ್ಮಾ ರಾವ್‌ ಸೋಮವಾರ ಚಾಲನೆ ನೀಡಿದರು.

ದ.ಕ. ಮೊಗವೀರ ಮಹಾಜನ ಸಂಘದ ವತಿಯಿಂದ 1.70 ಕೋ. ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ “ಶ್ರೀಮತಿ ಶಾಲಿನಿ ಡಾ| ಜಿ. ಶಂಕರ್‌ ತೆರೆದ ಸಭಾಂಗಣ’ವನ್ನು ದ.ಕ. ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರ ಡಾ| ಜಿ. ಶಂಕರ್‌ ಉದ್ಘಾಟಿಸಿದರು.

ಮೈಸೂರು, ಮಡಿಕೇರಿ, ಮಂಗಳೂರು ಮಾದರಿಯಲ್ಲಿ ಉಚ್ಚಿಲದಲ್ಲಿ ಈ ಬಾರಿ ಪ್ರಥಮ ಬಾರಿಗೆ ದಸರಾ ಉತ್ಸವವನ್ನು ಆಯೋಜಿಸಲಾಗುತ್ತಿದ್ದು, ಲಕ್ಷಾಂತರ ಮಂದಿ ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ಡಾ| ಜಿ. ಶಂಕರ್‌ ತಿಳಿಸಿದರು.

ತೆರೆದ ಸಭಾಂಗಣದಲ್ಲಿ ನವದುರ್ಗೆಯರು ಮತ್ತು ಶಾರದಾ ಮಾತೆಯ ವಿಗ್ರಹ ಪ್ರತಿಷ್ಠಾಪನೆಗೈಯಲಾಗಿದ್ದು, ಶಾರದಾ ಮಾತೆ ಮತ್ತು ನವದುರ್ಗೆಯರ ವಿಗ್ರಹಕ್ಕೆ ಏಕಕಾಲದಲ್ಲಿ ಮಂಗಳರಾತಿ ಬೆಳಗುವ ಮೂಲಕ ದಸರಾ ವೈಭವಕ್ಕೆ ಚಾಲನೆ ನೀಡಲಾಯಿತು. ಕ್ಷೇತ್ರದ ಪ್ರಧಾನ ಅರ್ಚಕ ವೇ| ಮೂ| ರಾಘವೇಂದ್ರ ಉಪಾಧ್ಯಾಯರ ನೇತೃತ್ವದಲ್ಲಿ ಧಾರ್ಮಿಕ ವಿಧಿಗಳು ಜರಗಿದವು.

ಶಾಸಕ ಲಾಲಾಜಿ ಆರ್‌. ಮೆಂಡನ್‌, ಎಡಿಸಿ ವೀಣಾ ಕುಮಾರಿ, ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್‌ ಬೆಳ್ಳಂಪಳ್ಳಿ, ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ವಾಸುದೇವ ಸಾಲ್ಯಾನ್‌, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಗುಂಡು ಅಮೀನ್‌, ದ.ಕ. ಮೊಗವೀರ ಮಹಿಳಾ ಸಂಘದ ಅಧ್ಯಕ್ಷೆ ಅಪ್ಪಿ ಸಾಲ್ಯಾನ್‌, ಮಹಾಜನ ಸಂಘದ ಉಪಾಧ್ಯಕ್ಷ ಸುಭಾಶ್ಚಂದ್ರ ಕಾಂಚನ್‌, ಗಣ್ಯರಾದ ಸುಧಾಕರ ಕುಂದರ್‌, ಭರತ್‌ ಕುಮಾರ್‌ ಎರ್ಮಾಳು, ಹರಿಯಪ್ಪ ಕೋಟ್ಯಾನ್‌, ರಾಜೇಂದ್ರ ಸುವರ್ಣ, ಮೋಹನ್‌ ಬೆಂಗ್ರೆ, ವಿನಯ ಕರ್ಕೇರ, ವೈ. ಗಂಗಾಧರ ಸುವರ್ಣ, ಶಿಲ್ಪಾ ಗಂಗಾಧರ ಸುವರ್ಣ ಉಪಸ್ಥಿತರಿದ್ದರು.

ಉಚ್ಚಿಲ ದೇವಸ್ಥಾನದ ವ್ಯವಸ್ಥಾಪಕ ಸತೀಶ್‌ ಅಮೀನ್‌ ಪಡುಕೆರೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

  • ಉಡುಪಿ ಜಿಲ್ಲೆಯ ಪ್ರಥಮ ದಸರಾ ಮಹೋತ್ಸವಕ್ಕೆ ಉತ್ತಮ ಸ್ಪಂದನೆ; ಮೊದಲ ದಿನವೇ 50 ಸಾವಿರಕ್ಕೂ ಅಧಿಕ ಮಂದಿ ಭಾಗಿ
  • 10 ಸಾವಿರಕ್ಕೂ ಅಧಿಕ ಮಂದಿಯಿಂದ ಅನ್ನಪ್ರಸಾದ ಸ್ವೀಕಾರ

ಟಾಪ್ ನ್ಯೂಸ್

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.