ಅಪಘಾತವಾದರೂ ಆ್ಯಂಬುಲೆನ್ಸ್ ನಲ್ಲಿ ಬಂದು ಪರೀಕ್ಷೆ ಬರೆದ ವಿದ್ಯಾರ್ಥಿಗಳು !
Team Udayavani, Aug 19, 2021, 12:38 PM IST
ಸಾಂದರ್ಭಿಕ ಚಿತ್ರ
ಕುಂದಾಪುರ : ಪದವಿ ಪರೀಕ್ಷೆ ಬರೆಯಲು ತೆರಳುತ್ತಿದ್ದಾಗ ಬೈಕ್ ಗಳೆರಡರ ಮಧ್ಯೆ ಸಂಭವಿಸಿದ ಮುಖಾಮುಖಿ ಢಿಕ್ಕಿಯಲ್ಲಿ ಕಾಲೇಜು ವಿದ್ಯಾರ್ಥಿಗಳು ಗಾಯಗೊಂಡು ಆ್ಯಂಬುಲೆನ್ಸ್ ಮೂಲಕವೇ ಪರೀಕ್ಷೆ ಬರೆಯಲು ಕಾಲೇಜಿಗೆ ಆಗಮಿಸಿದ ಘಟನೆ ಇಂದು(ಗುರುವಾರ, ಆಗಸ್ಟ್ 19) ಬೆಳಿಗ್ಗೆ ನಡೆದಿದೆ.
ಇಲ್ಲಿನ ಕಾಲೇಜು ವಿದ್ಯಾರ್ಥಿಗಳಾದ ಶಿರೂರು ನಿವಾಸಿ ಮಸಾಯಿದ್ ಮತ್ತು ಗಂಗೊಳ್ಳಿ ನಿವಾಸಿ ವಾಜಿದ್ ಗಾಯಗೊಂಡು ಆಂಬುಲೆನ್ಸ್ ಮೂಲಕ ಪರೀಕ್ಷಾ ಕೇಂದ್ರಕ್ಕೆ ಬಂದ ವಿದ್ಯಾರ್ಥಿಗಳು.
ಇದನ್ನೂ ಓದಿ : ತಾಲಿಬಾನ್ ಪಿಶಾಚಿಗಳಿಂದ ತಪ್ಪಿಸಿಕೊಳ್ಳಲು ಹೆತ್ತ ಮಕ್ಕಳನ್ನು ಸೇನಾ ಸಿಬ್ಬಂದಿಗಳ ಕೈಗೆಸೆದರು.!
ಜಿಲ್ಲೆಯ ಗಡಿಭಾಗವಾದ ಶಿರೂರಿನಿಂದ ಪ್ರಥಮ ವರ್ಷದ ಪದವಿ ಪರೀಕ್ಷೆಗಾಗಿ ಬೈಕ್ ನಲ್ಲಿ ಬಂದಿದ್ದ ಮಸಾಯಿದ್ ಗಂಗೊಳ್ಳಿಗೆ ತೆರಳಿ ತಮ್ಮ ಸ್ನೇಹಿತ ವಾಜಿದ್ ನನ್ನು ಕರೆದುಕೊಂಡು ಕಾಲೇಜಿಗೆ ಸಾಗುತ್ತಿದ್ದಾಗ ಈ ಅವಘಡ ನಡೆದಿದೆ.
ಬೈಕ್ ಗಂಗೊಳ್ಳಿ-ತ್ರಾಸಿ ಮಾರ್ಗದ ಕೊಡಪಾಡಿ ಸಮೀಪಿಸುತ್ತಿದ್ದಂತೆಯೇ ಎದುರು ಬದಿಯಿಂದ ಬರುತ್ತಿದ್ದ ಇನ್ನೊಂದು ಬೈಕ್ ಗೆ ಢಿಕ್ಕಿಯಾಗಿದೆ. ಢಿಕ್ಕಿಯ ರಭಸಕ್ಕೆ ತೀವ್ರ ಗಾಯಗೊಂಡ ವಿದ್ಯಾರ್ಥಿಗಳನ್ನು ಗಂಗೊಳ್ಳಿಯ ಆಪತ್ಬಾಂಧವ ಆ್ಯಂಬುಲೆನ್ಸ್ ನ ನಿರ್ವಾಹಕ ಇಬ್ರಾಹಿಂ ಗಂಗೊಳ್ಳಿ ಮತ್ತು ತಂಡ ಕುಂದಾಪುರದ ಖಾಸಗಿ ಆಸ್ಪತ್ರೆಗೆ ಸೇರಿಸುವಲ್ಲಿ ನೆರವಾಗಿದ್ದಾರೆ.
ತೀವ್ರ ಸ್ವರೂಪದ ಗಾಯಗಳಾದರೂ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳು:
ಅಪಘಾತದಲ್ಲಿ ತೀವ್ರ ಸ್ವರೂಪದ ಗಾಯಗಳಾದರೂ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಆಂಬುಲೆನ್ಸ್ ಮೂಲಕವೇ ವಿದ್ಯಾರ್ಥಿಗಳಿಬ್ಬರೂ ಭಂಡಾರ್ಕಾರ್ಸ್ ಕಾಲೇಜು ಪರೀಕ್ಷಾ ಕೇಂದ್ರಕ್ಕೆ ತೆರಳಿದ್ದಾರೆ. ಪರೀಕ್ಷೆ ಬರೆದ ಬಳಿಕ ವಿದ್ಯಾರ್ಥಿಗಳು ಇನ್ನೂ ಹೆಚ್ಚಿನ ಚಿಕಿತ್ಸೆ ಪಡೆಯಲಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ.
ಇದನ್ನೂ ಓದಿ : ಸರ್ಕಾರದ ಆಫರ್ ಬೇಡವೆಂದು ಪಿಯುಸಿ ಪರೀಕ್ಷೆ ಬರೆಯಲು ಮುಂದಾದ ವಿದ್ಯಾರ್ಥಿನಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ
Udupi; ಮಸ್ಟರಿಂಗ್ ಕೇಂದ್ರದಲ್ಲಿ ಸಕಲ ತಯಾರಿ
ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.
ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ