ಉಡುಪಿ: ಗರಿಷ್ಠ 402 ಪಾಸಿಟಿವ್‌, 2 ಸಾವು; 7,000 ದಾಟಿದ ಒಟ್ಟು ಪ್ರಕರಣ


Team Udayavani, Aug 13, 2020, 10:10 PM IST

ಉಡುಪಿ: ಗರಿಷ್ಠ 402 ಪಾಸಿಟಿವ್‌, 2 ಸಾವು; 7,000 ದಾಟಿದ ಒಟ್ಟು ಪ್ರಕರಣ

ಸಾಂದರ್ಭಿಕ ಚಿತ್ರ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಗುರುವಾರ ಕೋವಿಡ್ ನಿಂದ ಎರಡು ಸಾವು ಸಂಭವಿಸಿದೆ. ಒಟ್ಟು 402 ಪಾಸಿಟಿವ್‌ ಮತ್ತು 1,185 ನೆಗೆಟಿವ್‌ ಪ್ರಕರಣಗಳು ದಾಖಲಾಗಿವೆ. ಒಂದೇ ದಿನ ಅತಿ ಹೆಚ್ಚು ಪಾಸಿಟಿವ್‌ ಪ್ರಕರಣಗಳನ್ನು ಕಂಡ ದಿನ ಇದಾಗಿದೆ. ಒಟ್ಟು ಪ್ರಕರಣಗಳ ಸಂಖ್ಯೆ 7,000 ದಾಟಿದೆ.

ಮಾರನಕಟ್ಟೆಯ 56 ವರ್ಷದ ವ್ಯಕ್ತಿಯೊಬ್ಬರು ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟರು. ಕೋಟತಟ್ಟು ನಿವಾಸಿ 61 ವರ್ಷ ಪ್ರಾಯದವರೊಬ್ಬರು ಬುಧವಾರ ರಾತ್ರಿ ಮನೆಯಿಂದ ಮಣಿಪಾಲ ಆಸ್ಪತ್ರೆಗೆ ಕರೆತರುವಾಗ ಕೊನೆಯುಸಿರೆಳೆದರು. ಇವರಿಬ್ಬರಿಗೂ ಇತರ ಆರೋಗ್ಯ ಸಮಸ್ಯೆಗಳಿದ್ದವು.

ಪಾಸಿಟಿವ್‌ ಪ್ರಕರಣಗಳಲ್ಲಿ ಐವರು ಬಾಲಕರು, 18 ಬಾಲಕಿಯರು, 186 ಪುರುಷರು, 155 ಮಹಿಳೆಯರು, ತಲಾ 19 ಮಂದಿ 60 ವರ್ಷ ಮೇಲ್ಪಟ್ಟವರು ಇದ್ದಾರೆ. 99 ಮಂದಿ ರೋಗ ಲಕ್ಷಣದವರು, 303 ರೋಗಲಕ್ಷಣ ಇಲ್ಲದವರಿದ್ದಾರೆ. ಉಡುಪಿ ತಾಲೂಕಿನ 232, ಕುಂದಾಪುರ ತಾಲೂಕಿನ 117, ಕಾರ್ಕಳ ತಾಲೂಕಿನ 49 ಮಂದಿ, ಹೊರ ಜಿಲ್ಲೆಯ ನಾಲ್ವರು ಇದ್ದಾರೆ. ಗುರುವಾರ 292 ಮಂದಿ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಒಟ್ಟು 7,175 ಪ್ರಕರಣ ಗಳಲ್ಲಿ 4,258 ಮಂದಿ ಗುಣಮುಖರಾಗಿದ್ದು 2,847 ಸಕ್ರಿಯ ಪ್ರಕರಣಗಳಿವೆ.

ಇದುವರೆಗೆ ಒಟ್ಟು 71 ಸಾವು ಉಂಟಾಗಿದೆ. ಗುರುವಾರ 190 ಮಂದಿ ಆಸ್ಪತ್ರೆಗಳಲ್ಲಿ, 212 ಮಂದಿ ಮನೆ ಐಸೊಲೇಶನ್‌ಗೆ ದಾಖಲಾಗಿದ್ದಾರೆ. ಗುರುವಾರ 1,697 ಮಂದಿಯ ಗಂಟಲ ದ್ರವ ಸಂಗ್ರಹಿಸಲಾಗಿದ್ದು 1,855 ಮಾದರಿಯ ವರದಿಗಳು ಬರಬೇಕಿವೆ.

ಕುಂದಾಪುರ, ಬೈಂದೂರು: 38 ಪ್ರಕರಣ
ಕುಂದಾಪುರ: ಬೈಂದೂರು ತಾಲೂಕಿನಲ್ಲಿ 16, ಕುಂದಾಪುರ ತಾಲೂಕಿನಲ್ಲಿ 22 ಮಂದಿ ಸೇರಿದಂತೆ ಗುರುವಾರ ಒಟ್ಟು 38 ಮಂದಿಗೆ ಕೊರೊನಾ ಪಾಸಿಟಿವ್‌ ದೃಢಪಟ್ಟಿದೆ. ಕುಂದಾಪುರ ತಾಲೂಕಿನ ಅಂಪಾರು, ಬಸ್ರೂರಿನ ತಲಾ 7 ಮಂದಿ, ಆನಗಳ್ಳಿಯ ಐವರು, ಬಳ್ಕೂರು, ದೇವಲ್ಕುಂದ, ಗಂಗೊಳ್ಳಿಯ ತಲಾ ಒಬ್ಬರಿಗೆ, ಬೈಂದೂರು ತಾಲೂಕು ಬಿಜೂರಿನ ಮೂವರು, ಬಡಾಕೆರೆ, ಬೈಂದೂರು, ಯಡ್ತರೆ, ಗೋಳಿಹೊಳೆಯ ತಲಾ ಇಬ್ಬರು, ನಾವುಂದ, ಹಡವು, ನಾಡ, ಕಿರಿಮಂಜೇಶ್ವರ, ಯಳಜಿತ್‌ನ ತಲಾ ಒಬ್ಬರು ಬಾಧಿತರಾಗಿದ್ದಾರೆ.

ಪಡುಬಿದ್ರಿ: ಐವರಿಗೆ ಪಾಸಿಟಿವ್‌
ಪಡುಬಿದ್ರಿ: ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಗುರುವಾರ ಐವರಲ್ಲಿ ಸೋಂಕು ದೃಢಪಟ್ಟಿದೆ. ಕಾಡಿಪಟ್ಣ, ಉಚ್ಚಿಲ, ಭಾಸ್ಕರನಗರ, ಬ್ರಹ್ಮಸ್ಥಾನ ಬಳಿಯ ಪುರುಷರು ಮತ್ತು ತೆಂಕ ಗ್ರಾ.ಪಂ. ವ್ಯಾಪ್ತಿಯ ಮಹಿಳೆ ಬಾಧಿತರು.

ಮುಂಡ್ಕೂರು: ಐದು ಪ್ರಕರಣ
ಬೆಳ್ಮಣ್‌: ಮುಂಡ್ಕೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಗುರುವಾರ 5 ಪ್ರಕರಣಗಳು ದೃಢಪಟ್ಟಿವೆ. ಮುಲ್ಲಡ್ಕ, ಸಂಕಲಕರಿಯ ಹಾಗೂ ಸಚ್ಚೇರಿಪೇಟೆ ಬೊಮ್ಮಯ್ಯಲಚ್ಚಿಲ್‌ನ ವ್ಯಕ್ತಿಗಳು ಬಾಧಿತರಾಗಿದ್ದಾರೆ.

ಶಿರೂರು: ಮುಂದುವರಿದ ಬ್ಯಾಂಕ್‌ ಸೀಲ್‌ಡೌನ್‌
ಬೈಂದೂರು: ಶಿರೂರಿನ ಬ್ಯಾಂಕ್‌ ಆಫ್‌ ಬರೋಡಾ ಶಾಖೆಯ ಸಿಬಂದಿಯೊರ್ವರಿಗೆ ಶುಕ್ರವಾರ ಕೊರೊನಾ ಪಾಸಿಟಿವ್‌ ಬಂದ ಹಿನ್ನೆಲೆಯಲ್ಲಿ 3 ದಿನಗಳ ಕಾಲ ಶಾಖೆಯನ್ನು ಸೀಲ್‌ಡೌನ್‌ ಮಾಡಲಾಗಿತ್ತು. ಬಳಿಕ ಇತರ ಮೂವರಲ್ಲಿ ಸೋಂಕು ಕಂಡುಬಂದಿರುವುದರಿಂದ ಬ್ಯಾಂಕ್‌ ಸೀಲ್‌ಡೌನ್‌ ಮುಂದುವರಿದಿದೆ.

ಟಾಪ್ ನ್ಯೂಸ್

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Hebri; ಸ್ಕೂಟಿಗೆ ಕಾರು ಢಿಕ್ಕಿ,ಸವಾರ ಸ್ಥಳದಲ್ಲೇ ಸಾವು

Hebri; ಸ್ಕೂಟಿಗೆ ಕಾರು ಢಿಕ್ಕಿ,ಸವಾರ ಸ್ಥಳದಲ್ಲೇ ಸಾವು

9-temple

Temple History: ಶ್ರೀ ವಡಭಾಂಡೇಶ್ವರ ಬಲರಾಮ ದೇವಸ್ಥಾನ; ಹಿನ್ನೆಲೆ, ಇತಿಹಾಸ,ವಿಶೇಷಗಳು

5-kaup

Kaup: ಅಯೋಧ್ಯೆಯಂತೆ ಮಾರಿಗುಡಿಯ ಜೀರ್ಣೋದ್ಧಾರವೂ ಸಾಂಗವಾಗಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.