ಉಡುಪಿ: 5 ಕಡೆ ಕೋವಿಡ್ ಡೇ ಕೇರ್ ಸೆಂಟರ್ ಪ್ರಾರಂಭ; 870 ಹಾಸಿಗೆ
Team Udayavani, Jul 20, 2020, 9:52 AM IST
ಉಡುಪಿ: ಕೋವಿಡ್ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕೋವಿಡ್ ಸೋಂಕಿನ ಲಕ್ಷಣ ಇರದ ರೋಗಿಗಳಿಗಾಗಿ ಜಿಲ್ಲೆಯ 5 ಕಡೆಗಳಲ್ಲಿ ಕೋವಿಡ್ 19 ಕೇರ್ ಸೆಂಟರ್ ತೆರೆಯಲಾಗಿದೆ. ದಿನೇ ದಿನೆ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅದರ ನಿರ್ವಹಣೆಗೆ ಜಿಲ್ಲಾಡಳಿತ ಮತ್ತಷ್ಟು ಸಿದ್ಧತೆ ಮಾಡಿಕೊಳ್ಳುತ್ತಿದೆ. ಅದರ ಮುಂದಿನ ಹಂತವಾಗಿ ಜಿಲ್ಲೆಯ ಕಾರ್ಕಳದಲ್ಲಿ 1, ಉಡುಪಿಯಲ್ಲಿ 3, ಕುಂದಾಪುರದಲ್ಲಿ 1 ಸೇರಿದಂತೆ 5 ಕೋವಿಡ್ ಕೇರ್ ಸೆಂಟರ್ನಲ್ಲಿ 870 ಹಾಸಿಗೆಯನ್ನು ಸಿದ್ಧಪಡಿಸಲಾಗಿದೆ. ಪ್ರಸ್ತುತ ಸುಮಾರು 100ಕ್ಕೂ ಅಧಿಕ ಮಂದಿ ಇಲ್ಲಿ ಇದ್ದಾರೆ.
ಯಾರಿಗೆ ಚಿಕಿತ್ಸೆ?
ಜಿಲ್ಲೆಯಲ್ಲಿ ಕೊರೊನಾ ಲಕ್ಷಣವಿಲ್ಲದ ಪ್ರಕರಣಗಳು ಹೆಚ್ಚಾಗಿ ಪತ್ತೆಯಾದ ಹಿನ್ನೆಲೆಯಲ್ಲಿ ಕೊರೊನಾ ಕೇರ್ ಸೆಂಟರ್ ತೆರೆಯಲಾಗಿದೆ. ಸುಮಾರು 10ಕ್ಕೂ ಅಧಿಕ ಸ್ಥಳಗಳನ್ನು ಕೊರೊನಾ ಸೋಂಕಿತರ ಕ್ವಾರಂಟೈನ್ಗೆ ಗುರುತಿಸಲಾಗಿದೆ. ಮನೆ ಐಸೋಲೇಶನ್ಗೆ ಒಪ್ಪದ ಕೋವಿಡ್ ಸೋಂಕಿತರನ್ನು ಈ ಕೇರ್ ಸೆಂಟರ್ನಲ್ಲಿ ಇಡಲಾಗುತ್ತಿದೆ. ಪ್ರತಿ ಸೆಂಟರ್ನ ಉಸ್ತುವಾರಿಯನ್ನು ಓರ್ವ ದಾದಿ ಹಾಗೂ ಓರ್ವ ವೈದ್ಯ ನೋಡಿಕೊಳ್ಳಲಿದ್ದಾರೆ. ವೈದ್ಯರು ದಿನಕ್ಕೆ ಎರಡು ಬಾರಿ ರೋಗಿಗಳ ಆರೋಗ್ಯ ತಪಾಸಣೆ ಮಾಡಲಿದ್ದಾರೆ.
7 ಕಡೆ ಕೋವಿಡ್ ಚಿಕಿತ್ಸೆ
ಜಿಲ್ಲೆಯಲ್ಲಿ ಕೊರೊನಾ ಲಕ್ಷಣ ಇರುವವರಿಗೆ (ಅಧಿಕ ಆನಾರೋಗ್ಯ) ಚಿಕಿತ್ಸೆಗೆ ಡಾ| ಟಿಎಂಎ ಪೈ ಆಸ್ಪತ್ರೆ ಬಳಸಲಾಗುತ್ತಿದೆ. ಕಡಿಮೆ ಲಕ್ಷಣವಿರುವ ರೋಗಿಗಳನ್ನು ಉಡುಪಿ ಜಿಲ್ಲಾಸ್ಪತ್ರೆ, ಆದರ್ಶ ಆಸ್ಪತ್ರೆ, ಕಾರ್ಕಳ ತಾಲೂಕು ಆಸ್ಪತ್ರೆ ಹಾಗೂ ಭುವನೇಂದ್ರ ಕಾಲೇಜು ವಸತಿ ನಿಲಯ, ಕುಂದಾಪುರ ತಾಲೂಕು ಆಸ್ಪತ್ರೆ ಮತ್ತು ಹಳೆಯ ಆದರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
800 ಹಾಸಿಗೆ ಮೀಸಲು
ಜಿಲ್ಲೆಯಲ್ಲಿ ಸದ್ಯ ಒಟ್ಟು 16ರಷ್ಟು ವೆಂಟಿಲೇಟರ್ ಹಾಗೂ 1,200 ಬೆಡ್ ಚಿಕಿತ್ಸೆಗೆ ಸಿದ್ಧವಿದೆ. ಪ್ರಸ್ತುತ 584 ಮಂದಿ ರೋಗಿಗಳಿದ್ದು, ಲಕ್ಷಣವಿರುವವರು ಆಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಕೊಳ್ಳುತ್ತಿದ್ದಾರೆ. ಜಿಲ್ಲೆಯಲ್ಲಿ ತುರ್ತಾಗಿ ಅಗತ್ಯಕ್ಕಾಗಿ ವಿವಿಧ ಡೇ ಕೇರ್ ಸೆಂಟರ್ನಲ್ಲಿ 800 ಹಾಸಿಗೆ ಕಾದಿರಿಸಲಾಗಿದೆ.
ದೂರುಗಳು!
ಉಡುಪಿ ತಾಲೂಕಿನ ಡೇ ಕೇರ್ ಸೆಂಟರ್ನಲ್ಲಿ ರೋಗಿಗಳಿಗೆ ಸರಿಯಾದ ಆಹಾರ ನೀಡುತ್ತಿಲ್ಲ ಎನ್ನುವ ದೂರುಗಳು ಕೇಳಿ ಬಂದಿವೆ. “ದೂರುಗಳ ಬಗ್ಗೆ ಗಮನಕ್ಕೆ ಬಂದಿವೆ. ಇದನ್ನು ಪರಿಹರಿಸುತ್ತೇವೆ’ ಎಂದು ಜಿಲ್ಲಾ ಆರೋಗ್ಯಾಧಿಕಾರಿ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಕೋವಿಡ್ ಸೋಂಕು ರಹಿತ ಕೋವಿಡ್ ರೋಗಿಗಳಿಗೆ ಮನೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ಆದರೆ ಕೆಲವು ಮನೆಗಳಲ್ಲಿ ವ್ಯವಸ್ಥೆ ಇಲ್ಲದ ಸಂದರ್ಭದಲ್ಲಿ ಅಂತಹ ವ್ಯಕ್ತಿಗಳನ್ನು ಡೇ ಕೇರ್ ಸೆಂಟರ್ನಲ್ಲಿ ಇಡಲಾಗುತ್ತಿದೆ.
– ಡಾ| ಸುಧೀರ್ ಚಂದ್ರ ಸೂಡ, ಡಿಎಚ್ಒ, ಉಡುಪಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ
ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ರಿಷಬ್: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು