ಉಡುಪಿ: ಮರಳು ಪೂರೈಕೆಗೆ ಸಜ್ಜು

ಕಾರ್ಮಿಕರು, ಕಟ್ಟಡ ನಿರ್ಮಾತೃಗಳಲ್ಲಿ ಖುಷಿ 

Team Udayavani, Sep 24, 2019, 5:15 AM IST

f-45

ಮರಳುಗಾರಿಕೆ ಪುನರಾರಂಭಕ್ಕೆ ಸಿದ್ಧತೆಯಾಗಿ ದೋಣಿಗಳ ಸಾಗಾಟ.

ಉಡುಪಿ: ಎರಡೂವರೆ ವರ್ಷಗಳಿಂದ ಗ್ರಹಣ ಬಡಿದಂತಿದ್ದ ಉಡುಪಿ ಜಿಲ್ಲೆಯ ಮರಳುಗಾರಿಕೆಗೆ ಮರುಜೀವ ನೀಡುವುದಕ್ಕಾಗಿ ಸಿದ್ಧತೆಗಳು ಬಹುತೇಕ ಪೂರ್ಣಹಂತಕ್ಕೆ ಬಂದಿವೆ. ಇದು ಕಾರ್ಮಿಕರು, ಕಟ್ಟಡ ನಿರ್ಮಾಣಗಾರರು, ಮರಳು ಸಾಗಾಟ ಲಾರಿಯವರ ಜತೆಗೆ ಸಾರ್ವಜನಿಕರಲ್ಲಿ ನೆಮ್ಮದಿ ಮೂಡಿಸುತ್ತಿದೆ.

ಕಳೆದೆರಡು ವರ್ಷಗಳಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಅಹೋರಾತ್ರಿ ಧರಣಿ, ನಗರದಲ್ಲಿ ವಾಹನ ರ್ಯಾಲಿ, ಪ್ರತಿಭಟನ ಸಭೆ ಸೇರಿದಂತೆ ವಿವಿಧ ರೀತಿಯ ಹೋರಾಟಗಳು ನಡೆದಿದ್ದವು. ಈಗ ಮಂಗಳವಾರ ಅಥವಾ ಬುಧವಾರ ಮರಳುಗಾರಿಕೆಗೆ ಮುಹೂರ್ತ ನಿಗದಿಯಾಗಿದೆ. ಮೊದಲ ಹಂತದಲ್ಲಿ 158 ಮಂದಿಗೆ, ಅನಂತರ ಇತರ 21 ಮಂದಿಗೆ (2011ರ ಹಿಂದಿನ ಪರವಾನಿಗೆಯವರು) ಅವಕಾಶ ನೀಡಲು ತೀರ್ಮಾನವಾಗಿದೆ. ಹಾಗಾಗಿ ಪೂರ್ಣ ಪ್ರಮಾಣದಲ್ಲಿ ಮರಳುದಿಬ್ಬಗಳ ತೆರವಿಗೆ ಅವಕಾಶ ದೊರೆತಂತಾಗಿದೆ. ಮೊದಲ ಮೂರು ತಿಂಗಳು ಸ್ಯಾಂಡ್‌ ಬಝಾರ್‌ ಆ್ಯಪ್‌ ಬಳಸದೆ ಈ ಹಿಂದಿನಂತೆಯೇ ಜನರಿಗೆ ಮರಳು ಒದಗಿಸಲು ನಿರ್ಧರಿಸಲಾಗಿದೆ.

ಜಿಪಿಎಸ್‌ ಅಳವಡಿಕೆ ಚುರುಕು
ಜಿಲ್ಲೆಯಲ್ಲಿ ಈ ಹಿಂದೆ ಸುಮಾರು 1,800 ಮರಳು ಸಾಗಾಟ ವಾಹನಗಳು ಜಿಪಿಎಸ್‌ ಅಳವಡಿಸಿದ್ದವು. ಆಗ ಹೊರ ಜಿಲ್ಲೆಗಳಿಗೂ ಮರಳು ಸಾಗಾಟವಾಗುತ್ತಿತ್ತು. ಆದರೆ ಈ ಬಾರಿ ಹೊರ ಜಿಲ್ಲೆಗಳಿಗೆ ಮರಳು ಸಾಗಾಟವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಹಾಗಾಗಿ ಈ ಬಾರಿ ಸುಮಾರು 1,200 ವಾಹನಗಳು ಜಿಪಿಎಸ್‌ ಅಳವಡಿಸಿಕೊಳ್ಳುತ್ತಿದ್ದು ಜಿಪಿಎಸ್‌ ಅಳವಡಿಕೆ ಮತ್ತು ಆ್ಯಕ್ಟಿವೇಷನ್‌ ಪ್ರಕ್ರಿಯೆ ಚುರುಕುಗೊಂಡಿದೆ. ಮರಳು ದ‌ಕ್ಕೆಗಳಿಗೆ ಜಿಯೋ ಫೆನ್ಸಿಂಗ್‌ ಮಾಡಲಾಗುತ್ತಿದೆ.

ಇಂದೇ ಅನುಮತಿಪತ್ರ?
ದಕ್ಕೆ ಸಿದ್ಧಗೊಂಡು ಎಲ್ಲ ನಿಯಮಾವಳಿಗಳನ್ನು ಅನುಸರಿಸಿರುವ ಪರವಾನಿಗೆದಾರರಿಗೆ ಮಂಗಳವಾರವೇ ಅನುಮತಿ ಪತ್ರ ಹಾಗೂ ಕಾರ್ಯಾದೇಶ ನೀಡುವ ನಿರೀಕ್ಷೆ ಇದೆ. ಹಾಗಾಗಿ ಬುಧವಾರ ಮರಳು ಪೂರೈಕೆ ಬಹುತೇಕ ಖಚಿತ ಎಂದು ಮೂಲಗಳು ತಿಳಿಸಿವೆ.

7.96 ಲಕ್ಷ ಮೆಟ್ರಿಕ್‌ ಟನ್‌ ಲಭ್ಯ
ಇನ್ನೆರಡು ದಿನಗಳಲ್ಲಿ ಅನುಮತಿ ಪತ್ರ ನೀಡಲಾಗುವುದು. ಜಿಲ್ಲೆಯ ಸ್ವರ್ಣಾ ನದಿಯ ಉಪ್ಪೂರು, ಸೀತಾನದಿಯ ಮೂಡುತೋನ್ಸೆ, ಬೈಕಾಡಿ ಮತ್ತು ಹಾರಾಡಿ ಹಾಗೂ ಪಾಪನಾಶಿನಿಯಲ್ಲಿ ಪಡುಕೆರೆ ಒಳಗೊಂಡಂತೆ ಒಟ್ಟು 8 ದಿಬ್ಬಗಳನ್ನು ಈಗಾಗಲೇ ಗುರುತಿಸಲಾಗಿದೆ. ಒಟ್ಟು 7,96,522 ಲಕ್ಷ ಮೆಟ್ರಿಕ್‌ ಟನ್‌ ಮರಳು ಲಭ್ಯವಿದೆ ಎಂದು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ತಿಳಿಸಿದ್ದಾರೆ.

ಲಾಟರಿ ಮೂಲಕ ಆಯ್ಕೆ
ಈಗಾಗಲೇ 35 ದಕ್ಕೆಗಳನ್ನು ಗುರುತಿಸಲಾಗಿದೆ. ಕೆಲ ದಕ್ಕೆಗಳಿಗೆ ಅಧಿಕ ಪ್ರಮಾಣದಲ್ಲಿ ಬೇಡಿಕೆ ಇದೆ. ಅಂತಹ ಸಂದರ್ಭದಲ್ಲಿ ಲಾಟರಿ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

BCCI will call applications for head coach role

Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MASOCON

MASOCON: ಕೆಎಂಸಿಯಲ್ಲಿ ಮಣಿಪಾಲ್ ಸರ್ಜಿಕಲ್ ಆಂಕೊಲಾಜಿ ಕಾನ್ಫರೆನ್ಸ್ 2024

Udupi ಶ್ರೀ ಭಗವಾನ್ ನಿತ್ಯಾನಂದ ಮಂದಿರ ಮಠ: ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ

Udupi ಶ್ರೀ ಭಗವಾನ್ ನಿತ್ಯಾನಂದ ಮಂದಿರ ಮಠ: ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ

ಲಾ ಸೇವ್ಯು ಬೇಕರಿ – ಸಂಸ್ಥೆಯಿಂದ ಬೀಡಿನಗುಡ್ಡೆಯಲ್ಲಿ ಮೇ 24-26: “ಆಹಾರ-ವ್ಯಾಪಾರ ಮೇಳ-2024′

ಲಾ ಸೇವ್ಯು ಬೇಕರಿ – ಸಂಸ್ಥೆಯಿಂದ ಬೀಡಿನಗುಡ್ಡೆಯಲ್ಲಿ ಮೇ 24-26: “ಆಹಾರ-ವ್ಯಾಪಾರ ಮೇಳ-2024′

Udupi: ವಿಡಿಯೋ ಕರೆ ರೆಕಾರ್ಡ್‌ ಮಾಡಿ ಹಣಕ್ಕೆ ಬೇಡಿಕೆ

Udupi: ವಿಡಿಯೋ ಕರೆ ರೆಕಾರ್ಡ್‌ ಮಾಡಿ ಹಣಕ್ಕೆ ಬೇಡಿಕೆ

Fraud: ಅಪರಿಚಿತ ವ್ಯಕ್ತಿಯಿಂದ 2.41 ಲಕ್ಷ ರೂ. ವಂಚನೆ

Fraud: ಅಪರಿಚಿತ ವ್ಯಕ್ತಿಯಿಂದ 2.41 ಲಕ್ಷ ರೂ. ವಂಚನೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

Sandalwood; ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

MASOCON

MASOCON: ಕೆಎಂಸಿಯಲ್ಲಿ ಮಣಿಪಾಲ್ ಸರ್ಜಿಕಲ್ ಆಂಕೊಲಾಜಿ ಕಾನ್ಫರೆನ್ಸ್ 2024

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.