ಉಡುಪಿ: ಸರಣಿ ಕಳ್ಳತನ; ಆರು ಅಂಗಡಿಗಳಿಗೆ ಕನ್ನ
Team Udayavani, Nov 1, 2022, 11:17 AM IST
ಉಡುಪಿ: ಉಡುಪಿ, ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ಸರಣಿ ಕಳ್ಳತನ ನಡೆದಿದೆ. ಕಳ್ಳರು ಆರು ಅಂಗಡಿಗಳ ಬೀಗ ಮುರಿದು ಅಲ್ಲಿದ್ದ ನಗದು ದೋಚಿದ್ದಾರೆ. ಮಣಿಪಾಲ ಠಾಣೆ ವ್ಯಾಪ್ತಿಯ ದೊಡ್ಡಣಗುಡ್ಡೆಯ ಒಂದು ಬಟ್ಟೆ ಮಳಿಗೆ ಮತ್ತು ಮೂರು ಜನರಲ್ ಶಾಪ್, ಉಡುಪಿ ನಗರ ಠಾಣೆ ವ್ಯಾಪ್ತಿಯ ಗುಂಡಿಬೈಲ್ನಲ್ಲಿ ಎರಡು ಅಂಗಡಿಗಳ ಬೀಗ ಮುರಿದು ಕಳ್ಳತನ ಮಾಡಲಾಗಿದೆ.
ಉಡುಪಿ ಮತ್ತು ಮಣಿಪಾಲ ಠಾಣೆಯ ಪೊಲೀಸರು ಕಳ್ಳತನ ನಡೆದ ಅಂಗಡಿಗಳಿಗೆ ಬೆಳಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೀಗ ಮುರಿದು ಒಳ ನುಗ್ಗಿದ ಕಳ್ಳರು ಅಂಗಡಿಗಳಲ್ಲಿದ್ದ ಸಾವಿರಾರು ರೂ. ನಗದು ದೋಚಿ ಪರಾರಿಯಾಗಿದ್ದಾರೆ. ಈ ಸಂಬಂಧ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.